Homeಮುಖಪುಟ'ಕೇಜ್ರಿವಾಲ್ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ರೂಪಿಸಿದೆ..'; ಇಡಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

‘ಕೇಜ್ರಿವಾಲ್ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ರೂಪಿಸಿದೆ..’; ಇಡಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕ್ಕಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ದೆಹಲಿ ಮುಖ್ಯಮಂತ್ರಿಯವರ “ನೀವು ಎಎಪಿಗೆ ಮತ ಹಾಕಿದರೆ ನಾನು ಮತ್ತೆ ಜೈಲಿಗೆ ಹೋಗುವುದಿಲ್ಲ” ಎಂಬ ಮಾತು ಅವರ ಜಾಮೀನು ನಿಯಮಗಳನ್ನು ಉಲ್ಲಂಘಿಸಿಲ್ಲ” ಎಂದು ಕೋರ್ಟ್‌ ಹೇಳಿದೆ.

ಕೇಂದ್ರ ತನಿಖಾ ಸಂಸ್ಥೆಯಿ ಕೇಜ್ರಿವಾಲ್ ಅವರ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವನ್ನು ರೂಪಿಸಿದೆ ಎಂದು ನ್ಯಾಯಾಲಯವು ಹೇಳಿದೆ. “ಇದು ಅವರ ಊಹೆಯಾಗಿದೆ… ನಾವು ಏನನ್ನೂ ಹೇಳಲಾರೆವು. ನಮ್ಮ ಆದೇಶ (ಜೂನ್ 2 ರಂದು ಮುಖ್ಯಮಂತ್ರಿ ಜೈಲಿಗೆ ಮರಳುವ ಬಗ್ಗೆ) ಸ್ಪಷ್ಟವಾಗಿದೆ. ಅದು ಈ ನ್ಯಾಯಾಲಯದ ನಿರ್ಧಾರ (ಮತ್ತು) ನಾವು ಕಾನೂನಿನ ನಿಯಮದಿಂದ ನಿಯಂತ್ರಿಸಲ್ಪಡುತ್ತೇವೆ…” ಎಂದು ಹೇಳಿತು.

ಬಂಧಿತ ರಾಜಕೀಯ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆಯುವ ಸಾಧ್ಯತೆಯ ಬಗ್ಗೆ ಇಡಿ ವಾದಗಳನ್ನು ಆಲಿಸಿದ ನ್ಯಾಯಾಲಯ, “ತಾನು ಯಾವುದೇ ವಿನಾಯಿತಿ ನೀಡಿಲ್ಲ” ಎಂದು ಒತ್ತಿ ಹೇಳಿದೆ.

“ನಾವು ಯಾವುದೇ ವಿನಾಯಿತಿ ನೀಡಿಲ್ಲ; ನಿರ್ಧಾರದ ಟೀಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಾವು ಈ ವಿಷಯಕ್ಕೆ ಹೋಗುವುದಿಲ್ಲ, ನಮ್ಮ ಆದೇಶವು ಸ್ಪಷ್ಟವಾಗಿದೆ.. ನಾವು ದಿನಾಂಕಗಳನ್ನು ನಿಗದಿಪಡಿಸಿದ್ದೇವೆ, ಮಧ್ಯಂತರ ಜಾಮೀನು ನೀಡಲು ಕಾರಣಗಳನ್ನು ಸಹ ನೀಡಿದ್ದೇವೆ” ಎಂದು ನ್ಯಾಯಮೂರ್ತಿಗಳು ಹೇಳಿದರು.

ಜಾಮೀನು ಹಿಂಪಡೆಯಲು ಮತ್ತು ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲು ಆದೇಶಿಸಲು ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತು.

ಇಡಿ ಒರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ “ನೀವು ಎಎಪಿಗೆ ಮತ ಹಾಕಿದರೆ, ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ…” ಎಂದು ಹೇಳಿದ್ದಾರೆ. “ಇದು ನ್ಯಾಯಾಲಯ ನಿಗದಿಪಡಿಸಿದ ಷರತ್ತುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ನ್ಯಾಯಾಂಗದ ಮುಖಕ್ಕೆ ಕಪಾಳಮೋಕ್ಷವಾಗಿದೆ” ಎಂದು ಹೇಳಿದರು.

ಕೇಜ್ರಿವಾಲ್ ಪರ ಪ್ರತಿಕ್ರಿಯಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, “ತಮ್ಮ ಕಕ್ಷಿದಾರರ ವಿರುದ್ಧ ವಿವಿಧ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಕೆಲ ಹಿರಿಯ ಕೇಂದ್ರ ಸಚಿವರುಗಳ ಹೆಸರನ್ನು ಹೇಳದೆ ಆಕ್ಷೇಪ ವ್ಯಕ್ತಪಡಿಸಿದರು.

ಕೇಜ್ರಿವಾಲ್ ತಮ್ಮ ಪಕ್ಷದ ಪರವಾಗಿ ಸೋಮವಾರ ಪ್ರಚಾರ ಮಾಡುವಾಗ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಗೆದ್ದರೆ ಮತ್ತೆ ಜೈಲಿಗೆ ಹಾಕುವ ಭಯವಿದೆ ಎಂದು ಹೇಳಿದರು. ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿದ ನಂತರ ಪಕ್ಷವನ್ನು ಮುರಿಯಲು ಮತ್ತು ನನ್ನನ್ನು ಅವಮಾನಿಸಲು ಪ್ರಯತ್ನಗಳನ್ನು ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

“ನಾನು ಜೂನ್ 2 ರಂದು ಮತ್ತೆ ಜೈಲಿಗೆ ಹೋಗಬೇಕಾಗಿದೆ. ನಾನು ಜೂನ್ 4 ರಂದು (ಚುನಾವಣೆಯ) ಫಲಿತಾಂಶಗಳನ್ನು ಜೈಲಿನಿಂದ ನೋಡುತ್ತೇನೆ. ನೀವು ಇಂಡಿಯಾವನ್ನು (ಎಎಪಿ ಸದಸ್ಯರಾಗಿರುವ ಕಾಂಗ್ರೆಸ್ ನೇತೃತ್ವದ ವಿರೋಧ ಗುಂಪು) ಗೆಲ್ಲಿಸಿದರೆ , ನಾನು ಜೂನ್ 5 ರಂದು ಹಿಂತಿರುಗುತ್ತೇನೆ, ಪ್ರಯತ್ನದ ಕೊರತೆಯಿದ್ದರೆ, ನಾವು ಯಾವಾಗ ಭೇಟಿಯಾಗುತ್ತೇವೆ ಎಂದು ನೋಡೋಣ” ಎಂದು ಅವರು ಹೇಳಿದ್ದರು.

ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ಕಳೆದ ವಾರವೂ ತಿರಸ್ಕರಿಸಿತ್ತು.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ ಎನ್‌ಸಿಡಬ್ಲ್ಯೂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...