Homeಮುಖಪುಟಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ `ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಬೂದಾಳು ಅವರು, ಸರಹಪಾದನ ತಾತ್ವಿಕತೆಯ ಪ್ರಸ್ತುತತೆ, ಶ್ರಮಣ ಪರಂಪರೆಯ ವೈಶಿಷ್ಟ್ಯತೆ ಹಾಗೂ ಕೃತಿಯ ಅನುವಾದದ ಹಿಂದಿನ ಶ್ರಮವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಕನ್ನಡದ ಪ್ರಮುಖ ಸಾಂಸ್ಕೃತಿಕ ಚಿಂತಕರಲ್ಲಿ ಒಬ್ಬರಾದ ಡಾ.ನಟರಾಜ್‌ ಬೂದಾಳು ಅವರು ಅನುವಾದಿಸಿರುವ ‘ಸರಹಪಾದ’ ಕೃತಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಶ್ರಮಣ ಪರಂಪರೆಯ ಕುರಿತು ವಿಸ್ತೃತವಾಗಿ ಬೆಳಕು ಚೆಲ್ಲುತ್ತಿರುವ ನಟರಾಜ ಬೂದಾಳು ಅವರು ಹೊರ ತಂದಿರುವ ವಿಶೇಷ ಕೃತಿಗಳಲ್ಲಿ ‘ಸರಹಪಾದ’ವೂ ಒಂದು. ಶ್ರಮಣ ಪರಂಪರೆಗಳಾದ ಸಿದ್ಧ, ನಾಥ, ಆರೂಢ, ಬೌದ್ಧ, ತತ್ವಪದ ಮೊದಲಾದವುಗಳ ತಾತ್ವಿಕತೆಗಳನ್ನು ಚರ್ಚೆಗೆ ತಂದಿರುವವರಲ್ಲಿ ಬೂದಾಳು ಪ್ರಮುಖರು.

ಎಲ್ಲ ಮಿಥ್ಯಾವಾದಗಳನ್ನು ದಾಟುವುದನ್ನು ಕಲಿಸಿದ ಮಹಾಬೌದ್ಧ ಸಿದ್ಧ ಸರಹಪಾದನ ವಿಚಾರಗಳನ್ನು ಬೂದಾಳು ವಿಶಿಷ್ಟವಾಗಿ ಕನ್ನಡಕ್ಕೆ ತಂದಿದ್ದಾರೆ. ಲೋಕಾನುಭವವೇ ಮುಖ್ಯವೆಂದ ಅನುಭಾವ ಪರಂಪರೆಯಲ್ಲಿ ಬರುವ ಬೌದ್ಧಸಿದ್ಧ ಸರಹಪಾದ. ಬೌದ್ಧ ತಾತ್ವಿಕತೆಯಲ್ಲಿ ಪ್ರಧಾನವಾಗಿರುವ ‘ಮೂಲಮಾಧ್ಯಮಕಕಾರಿಕೆ’ ಕೃತಿಯ ರಚನಾಕಾರನಾದ ನಾಗಾರ್ಜುನನ ಗುರು ಸರಹಪಾದ.

ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

‘ನಾಗಾರ್ಜುನ ಅಲ್ಲಮಪ್ರಭು ಒಂದು ತೌಲನಿಕ ಅಧ್ಯಯನ’, ‘ನಾಗಾರ್ಜುನ ಮಧ್ಯಮಮಾರ್ಗ’, ‘ಬುದ್ಧನೆಂಬ ಜ್ಞಾನಪೂರ್ಣ ಜಗಂಜ್ಯೋತಿ’, ‘ಬುದ್ಧಗುರುವಿನ ಮಧ್ಯಮಮಾರ್ಗ’, ‘ಪ್ರತ್ಯೇಕ ಬುದ್ಧ ಅಲ್ಲಮಪ್ರಭು’, ‘ಹಿಂದಣ ಹೆಜ್ಜೆಯನರಿತನಲ್ಲದೆ’, ‘ಪ್ರಜ್ಞಾ ಪಾರಮಿತ ಹೃದಯ ಸೂತ್ರ’, ‘ಬೌದ್ಧ ಮಧ್ಯಮ ಮಾರ್ಗ’, ‘ಮಾತಿನ ಮೊದಲು’, ‘ಶಂಕರಾನಂದಯೋಗಿ ಮತ್ತು ಶಂಕರಾರ್ಯರ ತತ್ವಪದಗಳು’, ‘ದಾವ್ ದೆ ಚಿಂಗ್’, ‘ಮನಮಗ್ನತೆ’ ಸೇರಿದಂತೆ ಹಲವು ಕೃತಿಗಳನ್ನುಅವರು ರಚಿಸಿದ್ದಾರೆ. ತತ್ವಪದ ಕ್ಷೇತ್ರದಲ್ಲಿ ಬೂದಾಳು ಅವರು ಮಾಡಿರುವ ಕಾರ್ಯಗಳು ಅವಿಸ್ಮರಣೀಯ.

‘ಸರಹಪಾದ ಕನ್ನಡಕ್ಕೇ ಯಾವತ್ತೋ ಬರಬೇಕಿತ್ತು’

ಪ್ರಶಸ್ತಿ ಲಭಿಸಿದ ಈ ಸಂದರ್ಭದಲ್ಲಿ ‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ನಟರಾಜ ಬೂದಾಳು ಅವರು, “ಭಾರತದ ಬಹಳ ಮುಖ್ಯವಾದ ಸಾಧಕ ಪರಂಪರೆ ಎಂದರೆ ಶ್ರಮಣ ಪರಂಪರೆ. ಈ ಪರಂಪರೆಯ ಮಹಾಗುರು ಸರಹಪಾದ. ಆತನ ತಾತ್ವಿಕತೆಗಳು ಕನ್ನಡಕ್ಕೆ ಯಾವತ್ತೋ ಬರಬೇಕಿತ್ತು. ತಡವಾಗಿಯಾದರೂ ಬಂತು. ಅದನ್ನು ಓದುಗರು ಗುರುತಿಸಿದ್ದು ಸಂತೋಷ ತಂದಿದೆ” ಎಂದರು.

“ಸರಹಪಾದನ ತಾತ್ವಿಕತೆಗಳು ದೇವನಾಗರಿ ಲಿಪಿಯಲ್ಲಿ, ಅಪಭ್ರ೦ಶ ಭಾಷೆಯಲ್ಲಿ ಇವೆ. ಅಪಭ್ರಂಶ ಭಾಷೆಯಲ್ಲಿನ ಕೃತಿ, ಸಂಸ್ಕೃತಿಗೆ ಆಗಿರುವ ಅನುವಾದ ಹಾಗೂ ಮೂರು ಇಂಗ್ಲಿಷ್ ಭಾಷಾಂತರಗಳನ್ನು ಆಧಾರವಾಗಿಟ್ಟುಕೊಂಡು ಕನ್ನಡಕ್ಕೆ ‘ಸರಹಪಾದ’ ಕೃತಿಯನ್ನು ತಂದೆ. ದೇವನಾಗರಿ ಲಿಪಿಯಲ್ಲಿರುವ ಕೃತಿಯು ಅಪಭ್ರಂಶ ಆವೃತ್ತಿಯಲ್ಲೇ ಇದೆ. ಅಪಭ್ರಂಶ ಈಗ ಇಲ್ಲ. ಆದರೆ ಆ ಕೃತಿ ಇದೆ. ಇಂಗ್ಲಿಷ್‌ಗಿಂತ, ಸಂಸ್ಕೃತಕ್ಕಿಂತ ಕನ್ನಡಕ್ಕೆ ಹತ್ತಿರವಾದ ಭಾಷೆ ‘ಅಪಭ್ರಂಶ’. ಮೂರು ಭಾಷೆಗಳಲ್ಲಿ ಬಂದಿರುವ ಕೃತಿಗಳನ್ನು ಅಧ್ಯಯನ ಮಾಡಿ ಅನುವಾದ ಮಾಡಿರುವೆ” ಎಂದು ಬೂದಾಳು ತಿಳಿಸಿದರು.

“ಬೌದ್ಧತಾತ್ವಿಕತೆಯನ್ನು ಪಸರಿಸಿದ ನಾಗಾರ್ಜುನ ಗುರು ಸರಹಪಾದ. ಆತ ದಕ್ಷಿಣ ಭಾರತಕ್ಕೂ ಬಂದಿದ್ದ ಎನ್ನುವವರಿದ್ದಾರೆ. ಆತ ಮಹಾನ್‌ ತಾತ್ವಿಕನೂ ಹೌದು, ಸಾಧಕನೂ ಹೌದು. ಸರಹ ಎಲ್ಲವನ್ನೂ ತಿರಸ್ಕರಿಸಿ ಸುಮ್ಮನಿರುವ ಮಾರ್ಗದ ಕುರಿತು ಮಾತನಾಡುತ್ತಾನೆ. ಅವನ ಎದುರು ನಾಗಾರ್ಜುನ ಸೇರಿದಂತೆ ಯಾವ ತಾತ್ವಿಕರೂ ನಿಲ್ಲಲು ಸಾಧ್ಯವಿಲ್ಲ” ಎಂಬುದು ಬೂದಾಳು ಅವರ ಅಭಿಪ್ರಾಯ.

“ಆತ ಪೊಳ್ಳು ಜಗದ್ಗುರುಗಳನ್ನು ತೀಕ್ಷ್ಣವಾಗಿ ವಿಮರ್ಶೆಗೆ ಒಳಪಡಿಸುತ್ತಾನೆ. ಸರಹನ ಪ್ರಕಾರ ಕುಟುಂಬವೇ ದೊಡ್ಡದು. ಪಾರಲೌಖಿತ ವ್ಯಮೋಹಕ್ಕೆ ಏಕೆ ಬೀಳುತ್ತೀರಾ? ಲೌಕಿಕದಲ್ಲಿ ಚೆನ್ನಾಗಿ ಬಾಳಲು ಸಾಧ್ಯವಿಲ್ಲದನು ಅಲ್ಲೇನು ಮಾಡುತ್ತಾನೆ? ಅಧಿಕಾರ ಕೇಂದ್ರಗಳು, ಸರ್ಕಾರಗಳು ವಿಧೇಯರಾಗಿರಬೇಕಾದದ್ದು ಕುಟುಂಬಗಳಿಗೆ ಹೊರತು ಜಗದ್ಗುರುಗಳಿಗೂ ಅಲ್ಲ, ದೇವಸ್ಥಾನಕ್ಕೂ ಅಲ್ಲ. ಕುಟುಂಬವೇ ಶ್ರೇಷ್ಟ ಎಂದು ಹೇಳಿದವನು ಸರಹ” ಎನ್ನುತ್ತಾರೆ ಅವರು.

“ಶ್ರಮಣ ಪರಂಪರೆಯನ್ನು ಯಾರೂ ಮುನ್ನಲೆ ತರಬೇಕಾಗಿಲ್ಲ. ಅದು ಪ್ರಯೋಗಿಕವಾಗಿ ಈಗಾಗಲೇ ಸಮಾಜದಲ್ಲಿದೆ. ನಮ್ಮ ನಡುವೆ ತತ್ವಪದಕಾರರು ಇದ್ದಾರೆ. ಇಂದಿಗೂ ಶ್ರಮಣ ಪರಂಪರೆ ಜೀವಂತವಾಗಿದೆ. ಆದರೆ ಶೈಕ್ಷಣಿಕ ವಲಯದಲ್ಲಿ ಈ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ. ಅಕಾಡೆಮಿಕ್‌ ವಲಯ ಈ ಶ್ರಮಣ ಪರಂಪರೆಯನ್ನು ಕಣ್ಣುಬಿಟ್ಟು ನೋಡಬೇಕಾಗಿದೆ” ಎಂದು ತಿಳಿಸಿದರು ಬೂದಾಳು.


ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...