Homeಮುಖಪುಟಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ `ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಬೂದಾಳು ಅವರು, ಸರಹಪಾದನ ತಾತ್ವಿಕತೆಯ ಪ್ರಸ್ತುತತೆ, ಶ್ರಮಣ ಪರಂಪರೆಯ ವೈಶಿಷ್ಟ್ಯತೆ ಹಾಗೂ ಕೃತಿಯ ಅನುವಾದದ ಹಿಂದಿನ ಶ್ರಮವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಕನ್ನಡದ ಪ್ರಮುಖ ಸಾಂಸ್ಕೃತಿಕ ಚಿಂತಕರಲ್ಲಿ ಒಬ್ಬರಾದ ಡಾ.ನಟರಾಜ್‌ ಬೂದಾಳು ಅವರು ಅನುವಾದಿಸಿರುವ ‘ಸರಹಪಾದ’ ಕೃತಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಶ್ರಮಣ ಪರಂಪರೆಯ ಕುರಿತು ವಿಸ್ತೃತವಾಗಿ ಬೆಳಕು ಚೆಲ್ಲುತ್ತಿರುವ ನಟರಾಜ ಬೂದಾಳು ಅವರು ಹೊರ ತಂದಿರುವ ವಿಶೇಷ ಕೃತಿಗಳಲ್ಲಿ ‘ಸರಹಪಾದ’ವೂ ಒಂದು. ಶ್ರಮಣ ಪರಂಪರೆಗಳಾದ ಸಿದ್ಧ, ನಾಥ, ಆರೂಢ, ಬೌದ್ಧ, ತತ್ವಪದ ಮೊದಲಾದವುಗಳ ತಾತ್ವಿಕತೆಗಳನ್ನು ಚರ್ಚೆಗೆ ತಂದಿರುವವರಲ್ಲಿ ಬೂದಾಳು ಪ್ರಮುಖರು.

ಎಲ್ಲ ಮಿಥ್ಯಾವಾದಗಳನ್ನು ದಾಟುವುದನ್ನು ಕಲಿಸಿದ ಮಹಾಬೌದ್ಧ ಸಿದ್ಧ ಸರಹಪಾದನ ವಿಚಾರಗಳನ್ನು ಬೂದಾಳು ವಿಶಿಷ್ಟವಾಗಿ ಕನ್ನಡಕ್ಕೆ ತಂದಿದ್ದಾರೆ. ಲೋಕಾನುಭವವೇ ಮುಖ್ಯವೆಂದ ಅನುಭಾವ ಪರಂಪರೆಯಲ್ಲಿ ಬರುವ ಬೌದ್ಧಸಿದ್ಧ ಸರಹಪಾದ. ಬೌದ್ಧ ತಾತ್ವಿಕತೆಯಲ್ಲಿ ಪ್ರಧಾನವಾಗಿರುವ ‘ಮೂಲಮಾಧ್ಯಮಕಕಾರಿಕೆ’ ಕೃತಿಯ ರಚನಾಕಾರನಾದ ನಾಗಾರ್ಜುನನ ಗುರು ಸರಹಪಾದ.

ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

‘ನಾಗಾರ್ಜುನ ಅಲ್ಲಮಪ್ರಭು ಒಂದು ತೌಲನಿಕ ಅಧ್ಯಯನ’, ‘ನಾಗಾರ್ಜುನ ಮಧ್ಯಮಮಾರ್ಗ’, ‘ಬುದ್ಧನೆಂಬ ಜ್ಞಾನಪೂರ್ಣ ಜಗಂಜ್ಯೋತಿ’, ‘ಬುದ್ಧಗುರುವಿನ ಮಧ್ಯಮಮಾರ್ಗ’, ‘ಪ್ರತ್ಯೇಕ ಬುದ್ಧ ಅಲ್ಲಮಪ್ರಭು’, ‘ಹಿಂದಣ ಹೆಜ್ಜೆಯನರಿತನಲ್ಲದೆ’, ‘ಪ್ರಜ್ಞಾ ಪಾರಮಿತ ಹೃದಯ ಸೂತ್ರ’, ‘ಬೌದ್ಧ ಮಧ್ಯಮ ಮಾರ್ಗ’, ‘ಮಾತಿನ ಮೊದಲು’, ‘ಶಂಕರಾನಂದಯೋಗಿ ಮತ್ತು ಶಂಕರಾರ್ಯರ ತತ್ವಪದಗಳು’, ‘ದಾವ್ ದೆ ಚಿಂಗ್’, ‘ಮನಮಗ್ನತೆ’ ಸೇರಿದಂತೆ ಹಲವು ಕೃತಿಗಳನ್ನುಅವರು ರಚಿಸಿದ್ದಾರೆ. ತತ್ವಪದ ಕ್ಷೇತ್ರದಲ್ಲಿ ಬೂದಾಳು ಅವರು ಮಾಡಿರುವ ಕಾರ್ಯಗಳು ಅವಿಸ್ಮರಣೀಯ.

‘ಸರಹಪಾದ ಕನ್ನಡಕ್ಕೇ ಯಾವತ್ತೋ ಬರಬೇಕಿತ್ತು’

ಪ್ರಶಸ್ತಿ ಲಭಿಸಿದ ಈ ಸಂದರ್ಭದಲ್ಲಿ ‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ನಟರಾಜ ಬೂದಾಳು ಅವರು, “ಭಾರತದ ಬಹಳ ಮುಖ್ಯವಾದ ಸಾಧಕ ಪರಂಪರೆ ಎಂದರೆ ಶ್ರಮಣ ಪರಂಪರೆ. ಈ ಪರಂಪರೆಯ ಮಹಾಗುರು ಸರಹಪಾದ. ಆತನ ತಾತ್ವಿಕತೆಗಳು ಕನ್ನಡಕ್ಕೆ ಯಾವತ್ತೋ ಬರಬೇಕಿತ್ತು. ತಡವಾಗಿಯಾದರೂ ಬಂತು. ಅದನ್ನು ಓದುಗರು ಗುರುತಿಸಿದ್ದು ಸಂತೋಷ ತಂದಿದೆ” ಎಂದರು.

“ಸರಹಪಾದನ ತಾತ್ವಿಕತೆಗಳು ದೇವನಾಗರಿ ಲಿಪಿಯಲ್ಲಿ, ಅಪಭ್ರ೦ಶ ಭಾಷೆಯಲ್ಲಿ ಇವೆ. ಅಪಭ್ರಂಶ ಭಾಷೆಯಲ್ಲಿನ ಕೃತಿ, ಸಂಸ್ಕೃತಿಗೆ ಆಗಿರುವ ಅನುವಾದ ಹಾಗೂ ಮೂರು ಇಂಗ್ಲಿಷ್ ಭಾಷಾಂತರಗಳನ್ನು ಆಧಾರವಾಗಿಟ್ಟುಕೊಂಡು ಕನ್ನಡಕ್ಕೆ ‘ಸರಹಪಾದ’ ಕೃತಿಯನ್ನು ತಂದೆ. ದೇವನಾಗರಿ ಲಿಪಿಯಲ್ಲಿರುವ ಕೃತಿಯು ಅಪಭ್ರಂಶ ಆವೃತ್ತಿಯಲ್ಲೇ ಇದೆ. ಅಪಭ್ರಂಶ ಈಗ ಇಲ್ಲ. ಆದರೆ ಆ ಕೃತಿ ಇದೆ. ಇಂಗ್ಲಿಷ್‌ಗಿಂತ, ಸಂಸ್ಕೃತಕ್ಕಿಂತ ಕನ್ನಡಕ್ಕೆ ಹತ್ತಿರವಾದ ಭಾಷೆ ‘ಅಪಭ್ರಂಶ’. ಮೂರು ಭಾಷೆಗಳಲ್ಲಿ ಬಂದಿರುವ ಕೃತಿಗಳನ್ನು ಅಧ್ಯಯನ ಮಾಡಿ ಅನುವಾದ ಮಾಡಿರುವೆ” ಎಂದು ಬೂದಾಳು ತಿಳಿಸಿದರು.

“ಬೌದ್ಧತಾತ್ವಿಕತೆಯನ್ನು ಪಸರಿಸಿದ ನಾಗಾರ್ಜುನ ಗುರು ಸರಹಪಾದ. ಆತ ದಕ್ಷಿಣ ಭಾರತಕ್ಕೂ ಬಂದಿದ್ದ ಎನ್ನುವವರಿದ್ದಾರೆ. ಆತ ಮಹಾನ್‌ ತಾತ್ವಿಕನೂ ಹೌದು, ಸಾಧಕನೂ ಹೌದು. ಸರಹ ಎಲ್ಲವನ್ನೂ ತಿರಸ್ಕರಿಸಿ ಸುಮ್ಮನಿರುವ ಮಾರ್ಗದ ಕುರಿತು ಮಾತನಾಡುತ್ತಾನೆ. ಅವನ ಎದುರು ನಾಗಾರ್ಜುನ ಸೇರಿದಂತೆ ಯಾವ ತಾತ್ವಿಕರೂ ನಿಲ್ಲಲು ಸಾಧ್ಯವಿಲ್ಲ” ಎಂಬುದು ಬೂದಾಳು ಅವರ ಅಭಿಪ್ರಾಯ.

“ಆತ ಪೊಳ್ಳು ಜಗದ್ಗುರುಗಳನ್ನು ತೀಕ್ಷ್ಣವಾಗಿ ವಿಮರ್ಶೆಗೆ ಒಳಪಡಿಸುತ್ತಾನೆ. ಸರಹನ ಪ್ರಕಾರ ಕುಟುಂಬವೇ ದೊಡ್ಡದು. ಪಾರಲೌಖಿತ ವ್ಯಮೋಹಕ್ಕೆ ಏಕೆ ಬೀಳುತ್ತೀರಾ? ಲೌಕಿಕದಲ್ಲಿ ಚೆನ್ನಾಗಿ ಬಾಳಲು ಸಾಧ್ಯವಿಲ್ಲದನು ಅಲ್ಲೇನು ಮಾಡುತ್ತಾನೆ? ಅಧಿಕಾರ ಕೇಂದ್ರಗಳು, ಸರ್ಕಾರಗಳು ವಿಧೇಯರಾಗಿರಬೇಕಾದದ್ದು ಕುಟುಂಬಗಳಿಗೆ ಹೊರತು ಜಗದ್ಗುರುಗಳಿಗೂ ಅಲ್ಲ, ದೇವಸ್ಥಾನಕ್ಕೂ ಅಲ್ಲ. ಕುಟುಂಬವೇ ಶ್ರೇಷ್ಟ ಎಂದು ಹೇಳಿದವನು ಸರಹ” ಎನ್ನುತ್ತಾರೆ ಅವರು.

“ಶ್ರಮಣ ಪರಂಪರೆಯನ್ನು ಯಾರೂ ಮುನ್ನಲೆ ತರಬೇಕಾಗಿಲ್ಲ. ಅದು ಪ್ರಯೋಗಿಕವಾಗಿ ಈಗಾಗಲೇ ಸಮಾಜದಲ್ಲಿದೆ. ನಮ್ಮ ನಡುವೆ ತತ್ವಪದಕಾರರು ಇದ್ದಾರೆ. ಇಂದಿಗೂ ಶ್ರಮಣ ಪರಂಪರೆ ಜೀವಂತವಾಗಿದೆ. ಆದರೆ ಶೈಕ್ಷಣಿಕ ವಲಯದಲ್ಲಿ ಈ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ. ಅಕಾಡೆಮಿಕ್‌ ವಲಯ ಈ ಶ್ರಮಣ ಪರಂಪರೆಯನ್ನು ಕಣ್ಣುಬಿಟ್ಟು ನೋಡಬೇಕಾಗಿದೆ” ಎಂದು ತಿಳಿಸಿದರು ಬೂದಾಳು.


ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...