Homeಮುಖಪುಟಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ `ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಬೂದಾಳು ಅವರು, ಸರಹಪಾದನ ತಾತ್ವಿಕತೆಯ ಪ್ರಸ್ತುತತೆ, ಶ್ರಮಣ ಪರಂಪರೆಯ ವೈಶಿಷ್ಟ್ಯತೆ ಹಾಗೂ ಕೃತಿಯ ಅನುವಾದದ ಹಿಂದಿನ ಶ್ರಮವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಕನ್ನಡದ ಪ್ರಮುಖ ಸಾಂಸ್ಕೃತಿಕ ಚಿಂತಕರಲ್ಲಿ ಒಬ್ಬರಾದ ಡಾ.ನಟರಾಜ್‌ ಬೂದಾಳು ಅವರು ಅನುವಾದಿಸಿರುವ ‘ಸರಹಪಾದ’ ಕೃತಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಶ್ರಮಣ ಪರಂಪರೆಯ ಕುರಿತು ವಿಸ್ತೃತವಾಗಿ ಬೆಳಕು ಚೆಲ್ಲುತ್ತಿರುವ ನಟರಾಜ ಬೂದಾಳು ಅವರು ಹೊರ ತಂದಿರುವ ವಿಶೇಷ ಕೃತಿಗಳಲ್ಲಿ ‘ಸರಹಪಾದ’ವೂ ಒಂದು. ಶ್ರಮಣ ಪರಂಪರೆಗಳಾದ ಸಿದ್ಧ, ನಾಥ, ಆರೂಢ, ಬೌದ್ಧ, ತತ್ವಪದ ಮೊದಲಾದವುಗಳ ತಾತ್ವಿಕತೆಗಳನ್ನು ಚರ್ಚೆಗೆ ತಂದಿರುವವರಲ್ಲಿ ಬೂದಾಳು ಪ್ರಮುಖರು.

ಎಲ್ಲ ಮಿಥ್ಯಾವಾದಗಳನ್ನು ದಾಟುವುದನ್ನು ಕಲಿಸಿದ ಮಹಾಬೌದ್ಧ ಸಿದ್ಧ ಸರಹಪಾದನ ವಿಚಾರಗಳನ್ನು ಬೂದಾಳು ವಿಶಿಷ್ಟವಾಗಿ ಕನ್ನಡಕ್ಕೆ ತಂದಿದ್ದಾರೆ. ಲೋಕಾನುಭವವೇ ಮುಖ್ಯವೆಂದ ಅನುಭಾವ ಪರಂಪರೆಯಲ್ಲಿ ಬರುವ ಬೌದ್ಧಸಿದ್ಧ ಸರಹಪಾದ. ಬೌದ್ಧ ತಾತ್ವಿಕತೆಯಲ್ಲಿ ಪ್ರಧಾನವಾಗಿರುವ ‘ಮೂಲಮಾಧ್ಯಮಕಕಾರಿಕೆ’ ಕೃತಿಯ ರಚನಾಕಾರನಾದ ನಾಗಾರ್ಜುನನ ಗುರು ಸರಹಪಾದ.

ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

‘ನಾಗಾರ್ಜುನ ಅಲ್ಲಮಪ್ರಭು ಒಂದು ತೌಲನಿಕ ಅಧ್ಯಯನ’, ‘ನಾಗಾರ್ಜುನ ಮಧ್ಯಮಮಾರ್ಗ’, ‘ಬುದ್ಧನೆಂಬ ಜ್ಞಾನಪೂರ್ಣ ಜಗಂಜ್ಯೋತಿ’, ‘ಬುದ್ಧಗುರುವಿನ ಮಧ್ಯಮಮಾರ್ಗ’, ‘ಪ್ರತ್ಯೇಕ ಬುದ್ಧ ಅಲ್ಲಮಪ್ರಭು’, ‘ಹಿಂದಣ ಹೆಜ್ಜೆಯನರಿತನಲ್ಲದೆ’, ‘ಪ್ರಜ್ಞಾ ಪಾರಮಿತ ಹೃದಯ ಸೂತ್ರ’, ‘ಬೌದ್ಧ ಮಧ್ಯಮ ಮಾರ್ಗ’, ‘ಮಾತಿನ ಮೊದಲು’, ‘ಶಂಕರಾನಂದಯೋಗಿ ಮತ್ತು ಶಂಕರಾರ್ಯರ ತತ್ವಪದಗಳು’, ‘ದಾವ್ ದೆ ಚಿಂಗ್’, ‘ಮನಮಗ್ನತೆ’ ಸೇರಿದಂತೆ ಹಲವು ಕೃತಿಗಳನ್ನುಅವರು ರಚಿಸಿದ್ದಾರೆ. ತತ್ವಪದ ಕ್ಷೇತ್ರದಲ್ಲಿ ಬೂದಾಳು ಅವರು ಮಾಡಿರುವ ಕಾರ್ಯಗಳು ಅವಿಸ್ಮರಣೀಯ.

‘ಸರಹಪಾದ ಕನ್ನಡಕ್ಕೇ ಯಾವತ್ತೋ ಬರಬೇಕಿತ್ತು’

ಪ್ರಶಸ್ತಿ ಲಭಿಸಿದ ಈ ಸಂದರ್ಭದಲ್ಲಿ ‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ನಟರಾಜ ಬೂದಾಳು ಅವರು, “ಭಾರತದ ಬಹಳ ಮುಖ್ಯವಾದ ಸಾಧಕ ಪರಂಪರೆ ಎಂದರೆ ಶ್ರಮಣ ಪರಂಪರೆ. ಈ ಪರಂಪರೆಯ ಮಹಾಗುರು ಸರಹಪಾದ. ಆತನ ತಾತ್ವಿಕತೆಗಳು ಕನ್ನಡಕ್ಕೆ ಯಾವತ್ತೋ ಬರಬೇಕಿತ್ತು. ತಡವಾಗಿಯಾದರೂ ಬಂತು. ಅದನ್ನು ಓದುಗರು ಗುರುತಿಸಿದ್ದು ಸಂತೋಷ ತಂದಿದೆ” ಎಂದರು.

“ಸರಹಪಾದನ ತಾತ್ವಿಕತೆಗಳು ದೇವನಾಗರಿ ಲಿಪಿಯಲ್ಲಿ, ಅಪಭ್ರ೦ಶ ಭಾಷೆಯಲ್ಲಿ ಇವೆ. ಅಪಭ್ರಂಶ ಭಾಷೆಯಲ್ಲಿನ ಕೃತಿ, ಸಂಸ್ಕೃತಿಗೆ ಆಗಿರುವ ಅನುವಾದ ಹಾಗೂ ಮೂರು ಇಂಗ್ಲಿಷ್ ಭಾಷಾಂತರಗಳನ್ನು ಆಧಾರವಾಗಿಟ್ಟುಕೊಂಡು ಕನ್ನಡಕ್ಕೆ ‘ಸರಹಪಾದ’ ಕೃತಿಯನ್ನು ತಂದೆ. ದೇವನಾಗರಿ ಲಿಪಿಯಲ್ಲಿರುವ ಕೃತಿಯು ಅಪಭ್ರಂಶ ಆವೃತ್ತಿಯಲ್ಲೇ ಇದೆ. ಅಪಭ್ರಂಶ ಈಗ ಇಲ್ಲ. ಆದರೆ ಆ ಕೃತಿ ಇದೆ. ಇಂಗ್ಲಿಷ್‌ಗಿಂತ, ಸಂಸ್ಕೃತಕ್ಕಿಂತ ಕನ್ನಡಕ್ಕೆ ಹತ್ತಿರವಾದ ಭಾಷೆ ‘ಅಪಭ್ರಂಶ’. ಮೂರು ಭಾಷೆಗಳಲ್ಲಿ ಬಂದಿರುವ ಕೃತಿಗಳನ್ನು ಅಧ್ಯಯನ ಮಾಡಿ ಅನುವಾದ ಮಾಡಿರುವೆ” ಎಂದು ಬೂದಾಳು ತಿಳಿಸಿದರು.

“ಬೌದ್ಧತಾತ್ವಿಕತೆಯನ್ನು ಪಸರಿಸಿದ ನಾಗಾರ್ಜುನ ಗುರು ಸರಹಪಾದ. ಆತ ದಕ್ಷಿಣ ಭಾರತಕ್ಕೂ ಬಂದಿದ್ದ ಎನ್ನುವವರಿದ್ದಾರೆ. ಆತ ಮಹಾನ್‌ ತಾತ್ವಿಕನೂ ಹೌದು, ಸಾಧಕನೂ ಹೌದು. ಸರಹ ಎಲ್ಲವನ್ನೂ ತಿರಸ್ಕರಿಸಿ ಸುಮ್ಮನಿರುವ ಮಾರ್ಗದ ಕುರಿತು ಮಾತನಾಡುತ್ತಾನೆ. ಅವನ ಎದುರು ನಾಗಾರ್ಜುನ ಸೇರಿದಂತೆ ಯಾವ ತಾತ್ವಿಕರೂ ನಿಲ್ಲಲು ಸಾಧ್ಯವಿಲ್ಲ” ಎಂಬುದು ಬೂದಾಳು ಅವರ ಅಭಿಪ್ರಾಯ.

“ಆತ ಪೊಳ್ಳು ಜಗದ್ಗುರುಗಳನ್ನು ತೀಕ್ಷ್ಣವಾಗಿ ವಿಮರ್ಶೆಗೆ ಒಳಪಡಿಸುತ್ತಾನೆ. ಸರಹನ ಪ್ರಕಾರ ಕುಟುಂಬವೇ ದೊಡ್ಡದು. ಪಾರಲೌಖಿತ ವ್ಯಮೋಹಕ್ಕೆ ಏಕೆ ಬೀಳುತ್ತೀರಾ? ಲೌಕಿಕದಲ್ಲಿ ಚೆನ್ನಾಗಿ ಬಾಳಲು ಸಾಧ್ಯವಿಲ್ಲದನು ಅಲ್ಲೇನು ಮಾಡುತ್ತಾನೆ? ಅಧಿಕಾರ ಕೇಂದ್ರಗಳು, ಸರ್ಕಾರಗಳು ವಿಧೇಯರಾಗಿರಬೇಕಾದದ್ದು ಕುಟುಂಬಗಳಿಗೆ ಹೊರತು ಜಗದ್ಗುರುಗಳಿಗೂ ಅಲ್ಲ, ದೇವಸ್ಥಾನಕ್ಕೂ ಅಲ್ಲ. ಕುಟುಂಬವೇ ಶ್ರೇಷ್ಟ ಎಂದು ಹೇಳಿದವನು ಸರಹ” ಎನ್ನುತ್ತಾರೆ ಅವರು.

“ಶ್ರಮಣ ಪರಂಪರೆಯನ್ನು ಯಾರೂ ಮುನ್ನಲೆ ತರಬೇಕಾಗಿಲ್ಲ. ಅದು ಪ್ರಯೋಗಿಕವಾಗಿ ಈಗಾಗಲೇ ಸಮಾಜದಲ್ಲಿದೆ. ನಮ್ಮ ನಡುವೆ ತತ್ವಪದಕಾರರು ಇದ್ದಾರೆ. ಇಂದಿಗೂ ಶ್ರಮಣ ಪರಂಪರೆ ಜೀವಂತವಾಗಿದೆ. ಆದರೆ ಶೈಕ್ಷಣಿಕ ವಲಯದಲ್ಲಿ ಈ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ. ಅಕಾಡೆಮಿಕ್‌ ವಲಯ ಈ ಶ್ರಮಣ ಪರಂಪರೆಯನ್ನು ಕಣ್ಣುಬಿಟ್ಟು ನೋಡಬೇಕಾಗಿದೆ” ಎಂದು ತಿಳಿಸಿದರು ಬೂದಾಳು.


ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...