Homeಮುಖಪುಟಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ `ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಬೂದಾಳು ಅವರು, ಸರಹಪಾದನ ತಾತ್ವಿಕತೆಯ ಪ್ರಸ್ತುತತೆ, ಶ್ರಮಣ ಪರಂಪರೆಯ ವೈಶಿಷ್ಟ್ಯತೆ ಹಾಗೂ ಕೃತಿಯ ಅನುವಾದದ ಹಿಂದಿನ ಶ್ರಮವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಕನ್ನಡದ ಪ್ರಮುಖ ಸಾಂಸ್ಕೃತಿಕ ಚಿಂತಕರಲ್ಲಿ ಒಬ್ಬರಾದ ಡಾ.ನಟರಾಜ್‌ ಬೂದಾಳು ಅವರು ಅನುವಾದಿಸಿರುವ ‘ಸರಹಪಾದ’ ಕೃತಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಶ್ರಮಣ ಪರಂಪರೆಯ ಕುರಿತು ವಿಸ್ತೃತವಾಗಿ ಬೆಳಕು ಚೆಲ್ಲುತ್ತಿರುವ ನಟರಾಜ ಬೂದಾಳು ಅವರು ಹೊರ ತಂದಿರುವ ವಿಶೇಷ ಕೃತಿಗಳಲ್ಲಿ ‘ಸರಹಪಾದ’ವೂ ಒಂದು. ಶ್ರಮಣ ಪರಂಪರೆಗಳಾದ ಸಿದ್ಧ, ನಾಥ, ಆರೂಢ, ಬೌದ್ಧ, ತತ್ವಪದ ಮೊದಲಾದವುಗಳ ತಾತ್ವಿಕತೆಗಳನ್ನು ಚರ್ಚೆಗೆ ತಂದಿರುವವರಲ್ಲಿ ಬೂದಾಳು ಪ್ರಮುಖರು.

ಎಲ್ಲ ಮಿಥ್ಯಾವಾದಗಳನ್ನು ದಾಟುವುದನ್ನು ಕಲಿಸಿದ ಮಹಾಬೌದ್ಧ ಸಿದ್ಧ ಸರಹಪಾದನ ವಿಚಾರಗಳನ್ನು ಬೂದಾಳು ವಿಶಿಷ್ಟವಾಗಿ ಕನ್ನಡಕ್ಕೆ ತಂದಿದ್ದಾರೆ. ಲೋಕಾನುಭವವೇ ಮುಖ್ಯವೆಂದ ಅನುಭಾವ ಪರಂಪರೆಯಲ್ಲಿ ಬರುವ ಬೌದ್ಧಸಿದ್ಧ ಸರಹಪಾದ. ಬೌದ್ಧ ತಾತ್ವಿಕತೆಯಲ್ಲಿ ಪ್ರಧಾನವಾಗಿರುವ ‘ಮೂಲಮಾಧ್ಯಮಕಕಾರಿಕೆ’ ಕೃತಿಯ ರಚನಾಕಾರನಾದ ನಾಗಾರ್ಜುನನ ಗುರು ಸರಹಪಾದ.

ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

‘ನಾಗಾರ್ಜುನ ಅಲ್ಲಮಪ್ರಭು ಒಂದು ತೌಲನಿಕ ಅಧ್ಯಯನ’, ‘ನಾಗಾರ್ಜುನ ಮಧ್ಯಮಮಾರ್ಗ’, ‘ಬುದ್ಧನೆಂಬ ಜ್ಞಾನಪೂರ್ಣ ಜಗಂಜ್ಯೋತಿ’, ‘ಬುದ್ಧಗುರುವಿನ ಮಧ್ಯಮಮಾರ್ಗ’, ‘ಪ್ರತ್ಯೇಕ ಬುದ್ಧ ಅಲ್ಲಮಪ್ರಭು’, ‘ಹಿಂದಣ ಹೆಜ್ಜೆಯನರಿತನಲ್ಲದೆ’, ‘ಪ್ರಜ್ಞಾ ಪಾರಮಿತ ಹೃದಯ ಸೂತ್ರ’, ‘ಬೌದ್ಧ ಮಧ್ಯಮ ಮಾರ್ಗ’, ‘ಮಾತಿನ ಮೊದಲು’, ‘ಶಂಕರಾನಂದಯೋಗಿ ಮತ್ತು ಶಂಕರಾರ್ಯರ ತತ್ವಪದಗಳು’, ‘ದಾವ್ ದೆ ಚಿಂಗ್’, ‘ಮನಮಗ್ನತೆ’ ಸೇರಿದಂತೆ ಹಲವು ಕೃತಿಗಳನ್ನುಅವರು ರಚಿಸಿದ್ದಾರೆ. ತತ್ವಪದ ಕ್ಷೇತ್ರದಲ್ಲಿ ಬೂದಾಳು ಅವರು ಮಾಡಿರುವ ಕಾರ್ಯಗಳು ಅವಿಸ್ಮರಣೀಯ.

‘ಸರಹಪಾದ ಕನ್ನಡಕ್ಕೇ ಯಾವತ್ತೋ ಬರಬೇಕಿತ್ತು’

ಪ್ರಶಸ್ತಿ ಲಭಿಸಿದ ಈ ಸಂದರ್ಭದಲ್ಲಿ ‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ನಟರಾಜ ಬೂದಾಳು ಅವರು, “ಭಾರತದ ಬಹಳ ಮುಖ್ಯವಾದ ಸಾಧಕ ಪರಂಪರೆ ಎಂದರೆ ಶ್ರಮಣ ಪರಂಪರೆ. ಈ ಪರಂಪರೆಯ ಮಹಾಗುರು ಸರಹಪಾದ. ಆತನ ತಾತ್ವಿಕತೆಗಳು ಕನ್ನಡಕ್ಕೆ ಯಾವತ್ತೋ ಬರಬೇಕಿತ್ತು. ತಡವಾಗಿಯಾದರೂ ಬಂತು. ಅದನ್ನು ಓದುಗರು ಗುರುತಿಸಿದ್ದು ಸಂತೋಷ ತಂದಿದೆ” ಎಂದರು.

“ಸರಹಪಾದನ ತಾತ್ವಿಕತೆಗಳು ದೇವನಾಗರಿ ಲಿಪಿಯಲ್ಲಿ, ಅಪಭ್ರ೦ಶ ಭಾಷೆಯಲ್ಲಿ ಇವೆ. ಅಪಭ್ರಂಶ ಭಾಷೆಯಲ್ಲಿನ ಕೃತಿ, ಸಂಸ್ಕೃತಿಗೆ ಆಗಿರುವ ಅನುವಾದ ಹಾಗೂ ಮೂರು ಇಂಗ್ಲಿಷ್ ಭಾಷಾಂತರಗಳನ್ನು ಆಧಾರವಾಗಿಟ್ಟುಕೊಂಡು ಕನ್ನಡಕ್ಕೆ ‘ಸರಹಪಾದ’ ಕೃತಿಯನ್ನು ತಂದೆ. ದೇವನಾಗರಿ ಲಿಪಿಯಲ್ಲಿರುವ ಕೃತಿಯು ಅಪಭ್ರಂಶ ಆವೃತ್ತಿಯಲ್ಲೇ ಇದೆ. ಅಪಭ್ರಂಶ ಈಗ ಇಲ್ಲ. ಆದರೆ ಆ ಕೃತಿ ಇದೆ. ಇಂಗ್ಲಿಷ್‌ಗಿಂತ, ಸಂಸ್ಕೃತಕ್ಕಿಂತ ಕನ್ನಡಕ್ಕೆ ಹತ್ತಿರವಾದ ಭಾಷೆ ‘ಅಪಭ್ರಂಶ’. ಮೂರು ಭಾಷೆಗಳಲ್ಲಿ ಬಂದಿರುವ ಕೃತಿಗಳನ್ನು ಅಧ್ಯಯನ ಮಾಡಿ ಅನುವಾದ ಮಾಡಿರುವೆ” ಎಂದು ಬೂದಾಳು ತಿಳಿಸಿದರು.

“ಬೌದ್ಧತಾತ್ವಿಕತೆಯನ್ನು ಪಸರಿಸಿದ ನಾಗಾರ್ಜುನ ಗುರು ಸರಹಪಾದ. ಆತ ದಕ್ಷಿಣ ಭಾರತಕ್ಕೂ ಬಂದಿದ್ದ ಎನ್ನುವವರಿದ್ದಾರೆ. ಆತ ಮಹಾನ್‌ ತಾತ್ವಿಕನೂ ಹೌದು, ಸಾಧಕನೂ ಹೌದು. ಸರಹ ಎಲ್ಲವನ್ನೂ ತಿರಸ್ಕರಿಸಿ ಸುಮ್ಮನಿರುವ ಮಾರ್ಗದ ಕುರಿತು ಮಾತನಾಡುತ್ತಾನೆ. ಅವನ ಎದುರು ನಾಗಾರ್ಜುನ ಸೇರಿದಂತೆ ಯಾವ ತಾತ್ವಿಕರೂ ನಿಲ್ಲಲು ಸಾಧ್ಯವಿಲ್ಲ” ಎಂಬುದು ಬೂದಾಳು ಅವರ ಅಭಿಪ್ರಾಯ.

“ಆತ ಪೊಳ್ಳು ಜಗದ್ಗುರುಗಳನ್ನು ತೀಕ್ಷ್ಣವಾಗಿ ವಿಮರ್ಶೆಗೆ ಒಳಪಡಿಸುತ್ತಾನೆ. ಸರಹನ ಪ್ರಕಾರ ಕುಟುಂಬವೇ ದೊಡ್ಡದು. ಪಾರಲೌಖಿತ ವ್ಯಮೋಹಕ್ಕೆ ಏಕೆ ಬೀಳುತ್ತೀರಾ? ಲೌಕಿಕದಲ್ಲಿ ಚೆನ್ನಾಗಿ ಬಾಳಲು ಸಾಧ್ಯವಿಲ್ಲದನು ಅಲ್ಲೇನು ಮಾಡುತ್ತಾನೆ? ಅಧಿಕಾರ ಕೇಂದ್ರಗಳು, ಸರ್ಕಾರಗಳು ವಿಧೇಯರಾಗಿರಬೇಕಾದದ್ದು ಕುಟುಂಬಗಳಿಗೆ ಹೊರತು ಜಗದ್ಗುರುಗಳಿಗೂ ಅಲ್ಲ, ದೇವಸ್ಥಾನಕ್ಕೂ ಅಲ್ಲ. ಕುಟುಂಬವೇ ಶ್ರೇಷ್ಟ ಎಂದು ಹೇಳಿದವನು ಸರಹ” ಎನ್ನುತ್ತಾರೆ ಅವರು.

“ಶ್ರಮಣ ಪರಂಪರೆಯನ್ನು ಯಾರೂ ಮುನ್ನಲೆ ತರಬೇಕಾಗಿಲ್ಲ. ಅದು ಪ್ರಯೋಗಿಕವಾಗಿ ಈಗಾಗಲೇ ಸಮಾಜದಲ್ಲಿದೆ. ನಮ್ಮ ನಡುವೆ ತತ್ವಪದಕಾರರು ಇದ್ದಾರೆ. ಇಂದಿಗೂ ಶ್ರಮಣ ಪರಂಪರೆ ಜೀವಂತವಾಗಿದೆ. ಆದರೆ ಶೈಕ್ಷಣಿಕ ವಲಯದಲ್ಲಿ ಈ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ. ಅಕಾಡೆಮಿಕ್‌ ವಲಯ ಈ ಶ್ರಮಣ ಪರಂಪರೆಯನ್ನು ಕಣ್ಣುಬಿಟ್ಟು ನೋಡಬೇಕಾಗಿದೆ” ಎಂದು ತಿಳಿಸಿದರು ಬೂದಾಳು.


ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...