Homeಮುಖಪುಟಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ `ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಬೂದಾಳು ಅವರು, ಸರಹಪಾದನ ತಾತ್ವಿಕತೆಯ ಪ್ರಸ್ತುತತೆ, ಶ್ರಮಣ ಪರಂಪರೆಯ ವೈಶಿಷ್ಟ್ಯತೆ ಹಾಗೂ ಕೃತಿಯ ಅನುವಾದದ ಹಿಂದಿನ ಶ್ರಮವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಕನ್ನಡದ ಪ್ರಮುಖ ಸಾಂಸ್ಕೃತಿಕ ಚಿಂತಕರಲ್ಲಿ ಒಬ್ಬರಾದ ಡಾ.ನಟರಾಜ್‌ ಬೂದಾಳು ಅವರು ಅನುವಾದಿಸಿರುವ ‘ಸರಹಪಾದ’ ಕೃತಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಶ್ರಮಣ ಪರಂಪರೆಯ ಕುರಿತು ವಿಸ್ತೃತವಾಗಿ ಬೆಳಕು ಚೆಲ್ಲುತ್ತಿರುವ ನಟರಾಜ ಬೂದಾಳು ಅವರು ಹೊರ ತಂದಿರುವ ವಿಶೇಷ ಕೃತಿಗಳಲ್ಲಿ ‘ಸರಹಪಾದ’ವೂ ಒಂದು. ಶ್ರಮಣ ಪರಂಪರೆಗಳಾದ ಸಿದ್ಧ, ನಾಥ, ಆರೂಢ, ಬೌದ್ಧ, ತತ್ವಪದ ಮೊದಲಾದವುಗಳ ತಾತ್ವಿಕತೆಗಳನ್ನು ಚರ್ಚೆಗೆ ತಂದಿರುವವರಲ್ಲಿ ಬೂದಾಳು ಪ್ರಮುಖರು.

ಎಲ್ಲ ಮಿಥ್ಯಾವಾದಗಳನ್ನು ದಾಟುವುದನ್ನು ಕಲಿಸಿದ ಮಹಾಬೌದ್ಧ ಸಿದ್ಧ ಸರಹಪಾದನ ವಿಚಾರಗಳನ್ನು ಬೂದಾಳು ವಿಶಿಷ್ಟವಾಗಿ ಕನ್ನಡಕ್ಕೆ ತಂದಿದ್ದಾರೆ. ಲೋಕಾನುಭವವೇ ಮುಖ್ಯವೆಂದ ಅನುಭಾವ ಪರಂಪರೆಯಲ್ಲಿ ಬರುವ ಬೌದ್ಧಸಿದ್ಧ ಸರಹಪಾದ. ಬೌದ್ಧ ತಾತ್ವಿಕತೆಯಲ್ಲಿ ಪ್ರಧಾನವಾಗಿರುವ ‘ಮೂಲಮಾಧ್ಯಮಕಕಾರಿಕೆ’ ಕೃತಿಯ ರಚನಾಕಾರನಾದ ನಾಗಾರ್ಜುನನ ಗುರು ಸರಹಪಾದ.

ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

‘ನಾಗಾರ್ಜುನ ಅಲ್ಲಮಪ್ರಭು ಒಂದು ತೌಲನಿಕ ಅಧ್ಯಯನ’, ‘ನಾಗಾರ್ಜುನ ಮಧ್ಯಮಮಾರ್ಗ’, ‘ಬುದ್ಧನೆಂಬ ಜ್ಞಾನಪೂರ್ಣ ಜಗಂಜ್ಯೋತಿ’, ‘ಬುದ್ಧಗುರುವಿನ ಮಧ್ಯಮಮಾರ್ಗ’, ‘ಪ್ರತ್ಯೇಕ ಬುದ್ಧ ಅಲ್ಲಮಪ್ರಭು’, ‘ಹಿಂದಣ ಹೆಜ್ಜೆಯನರಿತನಲ್ಲದೆ’, ‘ಪ್ರಜ್ಞಾ ಪಾರಮಿತ ಹೃದಯ ಸೂತ್ರ’, ‘ಬೌದ್ಧ ಮಧ್ಯಮ ಮಾರ್ಗ’, ‘ಮಾತಿನ ಮೊದಲು’, ‘ಶಂಕರಾನಂದಯೋಗಿ ಮತ್ತು ಶಂಕರಾರ್ಯರ ತತ್ವಪದಗಳು’, ‘ದಾವ್ ದೆ ಚಿಂಗ್’, ‘ಮನಮಗ್ನತೆ’ ಸೇರಿದಂತೆ ಹಲವು ಕೃತಿಗಳನ್ನುಅವರು ರಚಿಸಿದ್ದಾರೆ. ತತ್ವಪದ ಕ್ಷೇತ್ರದಲ್ಲಿ ಬೂದಾಳು ಅವರು ಮಾಡಿರುವ ಕಾರ್ಯಗಳು ಅವಿಸ್ಮರಣೀಯ.

‘ಸರಹಪಾದ ಕನ್ನಡಕ್ಕೇ ಯಾವತ್ತೋ ಬರಬೇಕಿತ್ತು’

ಪ್ರಶಸ್ತಿ ಲಭಿಸಿದ ಈ ಸಂದರ್ಭದಲ್ಲಿ ‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ನಟರಾಜ ಬೂದಾಳು ಅವರು, “ಭಾರತದ ಬಹಳ ಮುಖ್ಯವಾದ ಸಾಧಕ ಪರಂಪರೆ ಎಂದರೆ ಶ್ರಮಣ ಪರಂಪರೆ. ಈ ಪರಂಪರೆಯ ಮಹಾಗುರು ಸರಹಪಾದ. ಆತನ ತಾತ್ವಿಕತೆಗಳು ಕನ್ನಡಕ್ಕೆ ಯಾವತ್ತೋ ಬರಬೇಕಿತ್ತು. ತಡವಾಗಿಯಾದರೂ ಬಂತು. ಅದನ್ನು ಓದುಗರು ಗುರುತಿಸಿದ್ದು ಸಂತೋಷ ತಂದಿದೆ” ಎಂದರು.

“ಸರಹಪಾದನ ತಾತ್ವಿಕತೆಗಳು ದೇವನಾಗರಿ ಲಿಪಿಯಲ್ಲಿ, ಅಪಭ್ರ೦ಶ ಭಾಷೆಯಲ್ಲಿ ಇವೆ. ಅಪಭ್ರಂಶ ಭಾಷೆಯಲ್ಲಿನ ಕೃತಿ, ಸಂಸ್ಕೃತಿಗೆ ಆಗಿರುವ ಅನುವಾದ ಹಾಗೂ ಮೂರು ಇಂಗ್ಲಿಷ್ ಭಾಷಾಂತರಗಳನ್ನು ಆಧಾರವಾಗಿಟ್ಟುಕೊಂಡು ಕನ್ನಡಕ್ಕೆ ‘ಸರಹಪಾದ’ ಕೃತಿಯನ್ನು ತಂದೆ. ದೇವನಾಗರಿ ಲಿಪಿಯಲ್ಲಿರುವ ಕೃತಿಯು ಅಪಭ್ರಂಶ ಆವೃತ್ತಿಯಲ್ಲೇ ಇದೆ. ಅಪಭ್ರಂಶ ಈಗ ಇಲ್ಲ. ಆದರೆ ಆ ಕೃತಿ ಇದೆ. ಇಂಗ್ಲಿಷ್‌ಗಿಂತ, ಸಂಸ್ಕೃತಕ್ಕಿಂತ ಕನ್ನಡಕ್ಕೆ ಹತ್ತಿರವಾದ ಭಾಷೆ ‘ಅಪಭ್ರಂಶ’. ಮೂರು ಭಾಷೆಗಳಲ್ಲಿ ಬಂದಿರುವ ಕೃತಿಗಳನ್ನು ಅಧ್ಯಯನ ಮಾಡಿ ಅನುವಾದ ಮಾಡಿರುವೆ” ಎಂದು ಬೂದಾಳು ತಿಳಿಸಿದರು.

“ಬೌದ್ಧತಾತ್ವಿಕತೆಯನ್ನು ಪಸರಿಸಿದ ನಾಗಾರ್ಜುನ ಗುರು ಸರಹಪಾದ. ಆತ ದಕ್ಷಿಣ ಭಾರತಕ್ಕೂ ಬಂದಿದ್ದ ಎನ್ನುವವರಿದ್ದಾರೆ. ಆತ ಮಹಾನ್‌ ತಾತ್ವಿಕನೂ ಹೌದು, ಸಾಧಕನೂ ಹೌದು. ಸರಹ ಎಲ್ಲವನ್ನೂ ತಿರಸ್ಕರಿಸಿ ಸುಮ್ಮನಿರುವ ಮಾರ್ಗದ ಕುರಿತು ಮಾತನಾಡುತ್ತಾನೆ. ಅವನ ಎದುರು ನಾಗಾರ್ಜುನ ಸೇರಿದಂತೆ ಯಾವ ತಾತ್ವಿಕರೂ ನಿಲ್ಲಲು ಸಾಧ್ಯವಿಲ್ಲ” ಎಂಬುದು ಬೂದಾಳು ಅವರ ಅಭಿಪ್ರಾಯ.

“ಆತ ಪೊಳ್ಳು ಜಗದ್ಗುರುಗಳನ್ನು ತೀಕ್ಷ್ಣವಾಗಿ ವಿಮರ್ಶೆಗೆ ಒಳಪಡಿಸುತ್ತಾನೆ. ಸರಹನ ಪ್ರಕಾರ ಕುಟುಂಬವೇ ದೊಡ್ಡದು. ಪಾರಲೌಖಿತ ವ್ಯಮೋಹಕ್ಕೆ ಏಕೆ ಬೀಳುತ್ತೀರಾ? ಲೌಕಿಕದಲ್ಲಿ ಚೆನ್ನಾಗಿ ಬಾಳಲು ಸಾಧ್ಯವಿಲ್ಲದನು ಅಲ್ಲೇನು ಮಾಡುತ್ತಾನೆ? ಅಧಿಕಾರ ಕೇಂದ್ರಗಳು, ಸರ್ಕಾರಗಳು ವಿಧೇಯರಾಗಿರಬೇಕಾದದ್ದು ಕುಟುಂಬಗಳಿಗೆ ಹೊರತು ಜಗದ್ಗುರುಗಳಿಗೂ ಅಲ್ಲ, ದೇವಸ್ಥಾನಕ್ಕೂ ಅಲ್ಲ. ಕುಟುಂಬವೇ ಶ್ರೇಷ್ಟ ಎಂದು ಹೇಳಿದವನು ಸರಹ” ಎನ್ನುತ್ತಾರೆ ಅವರು.

“ಶ್ರಮಣ ಪರಂಪರೆಯನ್ನು ಯಾರೂ ಮುನ್ನಲೆ ತರಬೇಕಾಗಿಲ್ಲ. ಅದು ಪ್ರಯೋಗಿಕವಾಗಿ ಈಗಾಗಲೇ ಸಮಾಜದಲ್ಲಿದೆ. ನಮ್ಮ ನಡುವೆ ತತ್ವಪದಕಾರರು ಇದ್ದಾರೆ. ಇಂದಿಗೂ ಶ್ರಮಣ ಪರಂಪರೆ ಜೀವಂತವಾಗಿದೆ. ಆದರೆ ಶೈಕ್ಷಣಿಕ ವಲಯದಲ್ಲಿ ಈ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ. ಅಕಾಡೆಮಿಕ್‌ ವಲಯ ಈ ಶ್ರಮಣ ಪರಂಪರೆಯನ್ನು ಕಣ್ಣುಬಿಟ್ಟು ನೋಡಬೇಕಾಗಿದೆ” ಎಂದು ತಿಳಿಸಿದರು ಬೂದಾಳು.


ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...