Homeಮುಖಪುಟಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಪೊಳ್ಳು ಜಗದ್ಗುರುಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವನು ಸರಹಪಾದ: ನಟರಾಜ ಬೂದಾಳು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ `ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಬೂದಾಳು ಅವರು, ಸರಹಪಾದನ ತಾತ್ವಿಕತೆಯ ಪ್ರಸ್ತುತತೆ, ಶ್ರಮಣ ಪರಂಪರೆಯ ವೈಶಿಷ್ಟ್ಯತೆ ಹಾಗೂ ಕೃತಿಯ ಅನುವಾದದ ಹಿಂದಿನ ಶ್ರಮವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಕನ್ನಡದ ಪ್ರಮುಖ ಸಾಂಸ್ಕೃತಿಕ ಚಿಂತಕರಲ್ಲಿ ಒಬ್ಬರಾದ ಡಾ.ನಟರಾಜ್‌ ಬೂದಾಳು ಅವರು ಅನುವಾದಿಸಿರುವ ‘ಸರಹಪಾದ’ ಕೃತಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಶ್ರಮಣ ಪರಂಪರೆಯ ಕುರಿತು ವಿಸ್ತೃತವಾಗಿ ಬೆಳಕು ಚೆಲ್ಲುತ್ತಿರುವ ನಟರಾಜ ಬೂದಾಳು ಅವರು ಹೊರ ತಂದಿರುವ ವಿಶೇಷ ಕೃತಿಗಳಲ್ಲಿ ‘ಸರಹಪಾದ’ವೂ ಒಂದು. ಶ್ರಮಣ ಪರಂಪರೆಗಳಾದ ಸಿದ್ಧ, ನಾಥ, ಆರೂಢ, ಬೌದ್ಧ, ತತ್ವಪದ ಮೊದಲಾದವುಗಳ ತಾತ್ವಿಕತೆಗಳನ್ನು ಚರ್ಚೆಗೆ ತಂದಿರುವವರಲ್ಲಿ ಬೂದಾಳು ಪ್ರಮುಖರು.

ಎಲ್ಲ ಮಿಥ್ಯಾವಾದಗಳನ್ನು ದಾಟುವುದನ್ನು ಕಲಿಸಿದ ಮಹಾಬೌದ್ಧ ಸಿದ್ಧ ಸರಹಪಾದನ ವಿಚಾರಗಳನ್ನು ಬೂದಾಳು ವಿಶಿಷ್ಟವಾಗಿ ಕನ್ನಡಕ್ಕೆ ತಂದಿದ್ದಾರೆ. ಲೋಕಾನುಭವವೇ ಮುಖ್ಯವೆಂದ ಅನುಭಾವ ಪರಂಪರೆಯಲ್ಲಿ ಬರುವ ಬೌದ್ಧಸಿದ್ಧ ಸರಹಪಾದ. ಬೌದ್ಧ ತಾತ್ವಿಕತೆಯಲ್ಲಿ ಪ್ರಧಾನವಾಗಿರುವ ‘ಮೂಲಮಾಧ್ಯಮಕಕಾರಿಕೆ’ ಕೃತಿಯ ರಚನಾಕಾರನಾದ ನಾಗಾರ್ಜುನನ ಗುರು ಸರಹಪಾದ.

ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

‘ನಾಗಾರ್ಜುನ ಅಲ್ಲಮಪ್ರಭು ಒಂದು ತೌಲನಿಕ ಅಧ್ಯಯನ’, ‘ನಾಗಾರ್ಜುನ ಮಧ್ಯಮಮಾರ್ಗ’, ‘ಬುದ್ಧನೆಂಬ ಜ್ಞಾನಪೂರ್ಣ ಜಗಂಜ್ಯೋತಿ’, ‘ಬುದ್ಧಗುರುವಿನ ಮಧ್ಯಮಮಾರ್ಗ’, ‘ಪ್ರತ್ಯೇಕ ಬುದ್ಧ ಅಲ್ಲಮಪ್ರಭು’, ‘ಹಿಂದಣ ಹೆಜ್ಜೆಯನರಿತನಲ್ಲದೆ’, ‘ಪ್ರಜ್ಞಾ ಪಾರಮಿತ ಹೃದಯ ಸೂತ್ರ’, ‘ಬೌದ್ಧ ಮಧ್ಯಮ ಮಾರ್ಗ’, ‘ಮಾತಿನ ಮೊದಲು’, ‘ಶಂಕರಾನಂದಯೋಗಿ ಮತ್ತು ಶಂಕರಾರ್ಯರ ತತ್ವಪದಗಳು’, ‘ದಾವ್ ದೆ ಚಿಂಗ್’, ‘ಮನಮಗ್ನತೆ’ ಸೇರಿದಂತೆ ಹಲವು ಕೃತಿಗಳನ್ನುಅವರು ರಚಿಸಿದ್ದಾರೆ. ತತ್ವಪದ ಕ್ಷೇತ್ರದಲ್ಲಿ ಬೂದಾಳು ಅವರು ಮಾಡಿರುವ ಕಾರ್ಯಗಳು ಅವಿಸ್ಮರಣೀಯ.

‘ಸರಹಪಾದ ಕನ್ನಡಕ್ಕೇ ಯಾವತ್ತೋ ಬರಬೇಕಿತ್ತು’

ಪ್ರಶಸ್ತಿ ಲಭಿಸಿದ ಈ ಸಂದರ್ಭದಲ್ಲಿ ‘ನಾನು ಗೌರಿ’ ಮಾಧ್ಯಮದೊಂದಿಗೆ ಮಾತನಾಡಿದ ನಟರಾಜ ಬೂದಾಳು ಅವರು, “ಭಾರತದ ಬಹಳ ಮುಖ್ಯವಾದ ಸಾಧಕ ಪರಂಪರೆ ಎಂದರೆ ಶ್ರಮಣ ಪರಂಪರೆ. ಈ ಪರಂಪರೆಯ ಮಹಾಗುರು ಸರಹಪಾದ. ಆತನ ತಾತ್ವಿಕತೆಗಳು ಕನ್ನಡಕ್ಕೆ ಯಾವತ್ತೋ ಬರಬೇಕಿತ್ತು. ತಡವಾಗಿಯಾದರೂ ಬಂತು. ಅದನ್ನು ಓದುಗರು ಗುರುತಿಸಿದ್ದು ಸಂತೋಷ ತಂದಿದೆ” ಎಂದರು.

“ಸರಹಪಾದನ ತಾತ್ವಿಕತೆಗಳು ದೇವನಾಗರಿ ಲಿಪಿಯಲ್ಲಿ, ಅಪಭ್ರ೦ಶ ಭಾಷೆಯಲ್ಲಿ ಇವೆ. ಅಪಭ್ರಂಶ ಭಾಷೆಯಲ್ಲಿನ ಕೃತಿ, ಸಂಸ್ಕೃತಿಗೆ ಆಗಿರುವ ಅನುವಾದ ಹಾಗೂ ಮೂರು ಇಂಗ್ಲಿಷ್ ಭಾಷಾಂತರಗಳನ್ನು ಆಧಾರವಾಗಿಟ್ಟುಕೊಂಡು ಕನ್ನಡಕ್ಕೆ ‘ಸರಹಪಾದ’ ಕೃತಿಯನ್ನು ತಂದೆ. ದೇವನಾಗರಿ ಲಿಪಿಯಲ್ಲಿರುವ ಕೃತಿಯು ಅಪಭ್ರಂಶ ಆವೃತ್ತಿಯಲ್ಲೇ ಇದೆ. ಅಪಭ್ರಂಶ ಈಗ ಇಲ್ಲ. ಆದರೆ ಆ ಕೃತಿ ಇದೆ. ಇಂಗ್ಲಿಷ್‌ಗಿಂತ, ಸಂಸ್ಕೃತಕ್ಕಿಂತ ಕನ್ನಡಕ್ಕೆ ಹತ್ತಿರವಾದ ಭಾಷೆ ‘ಅಪಭ್ರಂಶ’. ಮೂರು ಭಾಷೆಗಳಲ್ಲಿ ಬಂದಿರುವ ಕೃತಿಗಳನ್ನು ಅಧ್ಯಯನ ಮಾಡಿ ಅನುವಾದ ಮಾಡಿರುವೆ” ಎಂದು ಬೂದಾಳು ತಿಳಿಸಿದರು.

“ಬೌದ್ಧತಾತ್ವಿಕತೆಯನ್ನು ಪಸರಿಸಿದ ನಾಗಾರ್ಜುನ ಗುರು ಸರಹಪಾದ. ಆತ ದಕ್ಷಿಣ ಭಾರತಕ್ಕೂ ಬಂದಿದ್ದ ಎನ್ನುವವರಿದ್ದಾರೆ. ಆತ ಮಹಾನ್‌ ತಾತ್ವಿಕನೂ ಹೌದು, ಸಾಧಕನೂ ಹೌದು. ಸರಹ ಎಲ್ಲವನ್ನೂ ತಿರಸ್ಕರಿಸಿ ಸುಮ್ಮನಿರುವ ಮಾರ್ಗದ ಕುರಿತು ಮಾತನಾಡುತ್ತಾನೆ. ಅವನ ಎದುರು ನಾಗಾರ್ಜುನ ಸೇರಿದಂತೆ ಯಾವ ತಾತ್ವಿಕರೂ ನಿಲ್ಲಲು ಸಾಧ್ಯವಿಲ್ಲ” ಎಂಬುದು ಬೂದಾಳು ಅವರ ಅಭಿಪ್ರಾಯ.

“ಆತ ಪೊಳ್ಳು ಜಗದ್ಗುರುಗಳನ್ನು ತೀಕ್ಷ್ಣವಾಗಿ ವಿಮರ್ಶೆಗೆ ಒಳಪಡಿಸುತ್ತಾನೆ. ಸರಹನ ಪ್ರಕಾರ ಕುಟುಂಬವೇ ದೊಡ್ಡದು. ಪಾರಲೌಖಿತ ವ್ಯಮೋಹಕ್ಕೆ ಏಕೆ ಬೀಳುತ್ತೀರಾ? ಲೌಕಿಕದಲ್ಲಿ ಚೆನ್ನಾಗಿ ಬಾಳಲು ಸಾಧ್ಯವಿಲ್ಲದನು ಅಲ್ಲೇನು ಮಾಡುತ್ತಾನೆ? ಅಧಿಕಾರ ಕೇಂದ್ರಗಳು, ಸರ್ಕಾರಗಳು ವಿಧೇಯರಾಗಿರಬೇಕಾದದ್ದು ಕುಟುಂಬಗಳಿಗೆ ಹೊರತು ಜಗದ್ಗುರುಗಳಿಗೂ ಅಲ್ಲ, ದೇವಸ್ಥಾನಕ್ಕೂ ಅಲ್ಲ. ಕುಟುಂಬವೇ ಶ್ರೇಷ್ಟ ಎಂದು ಹೇಳಿದವನು ಸರಹ” ಎನ್ನುತ್ತಾರೆ ಅವರು.

“ಶ್ರಮಣ ಪರಂಪರೆಯನ್ನು ಯಾರೂ ಮುನ್ನಲೆ ತರಬೇಕಾಗಿಲ್ಲ. ಅದು ಪ್ರಯೋಗಿಕವಾಗಿ ಈಗಾಗಲೇ ಸಮಾಜದಲ್ಲಿದೆ. ನಮ್ಮ ನಡುವೆ ತತ್ವಪದಕಾರರು ಇದ್ದಾರೆ. ಇಂದಿಗೂ ಶ್ರಮಣ ಪರಂಪರೆ ಜೀವಂತವಾಗಿದೆ. ಆದರೆ ಶೈಕ್ಷಣಿಕ ವಲಯದಲ್ಲಿ ಈ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ. ಅಕಾಡೆಮಿಕ್‌ ವಲಯ ಈ ಶ್ರಮಣ ಪರಂಪರೆಯನ್ನು ಕಣ್ಣುಬಿಟ್ಟು ನೋಡಬೇಕಾಗಿದೆ” ಎಂದು ತಿಳಿಸಿದರು ಬೂದಾಳು.


ಇದನ್ನೂ ಓದಿ: ‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...