‘ಹಳ್ಳ ಬಂತು ಹಳ್ಳ’ ಕಾದಂಬರಿ ಖ್ಯಾತಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಶ್ರೀನಿವಾಸ ವೈದ್ಯರವರು ಇಂದು ನಿಧನರಾಗಿದ್ದಾರೆ.
87 ವರ್ಷದ ಶ್ರೀನಿವಾಸ ವೈದ್ಯರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಧಾರವಾಡ ಜಿಲ್ಲೆಯ ನವಲಗುಂದದವರಾದ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಲೇ ಸಾಹಿತ್ಯದಲ್ಲಿ ಆಸಕ್ತಿ ಹೊಂದಿ ತೊಡಿಸಿಕೊಂಡಿದ್ದರು. ಲಲಿತ ಪ್ರಬಂಧಗಳು ಮತ್ತು ಹಲವು ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು 2008ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತ್ತು.
ಸಂವಾದ ಎನ್ನುವ ಸಾಂಸ್ಕೃತಿಕ ಸಂಘಟನೆಯನ್ನು ಸ್ಥಾಪಿಸಿರುವ ಅವರು, ತಲೆಗೊಂದು ತರತರ,
ಮನಸುಖರಾಯನ ಮನಸು ಮತ್ತು ರುಚಿಗೆ ಹುಳಿಯೊಗರು ಎಂಬ ಲಲಿತ ಪ್ರಬಂಧಗಳನ್ನು ರಚಿಸಿದ್ದಾರೆ. ಅಗ್ನಿಕಾರ್ಯ, ಮೊದಲ ಓದು ಮತ್ತು ಕಪ್ಪೆ ನುಂಗಿದ ಹುಡುಗ ಎಂಬ ಕಥಾ ಸಂಕಲನಗಳನ್ನು ಬರೆದಿದ್ದಾರೆ.
ಇದನ್ನೂ ಓದಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ನಿಮ್ಮ ಫಲಿತಾಂಶ ನೋಡಲು ಈ ಲಿಂಕ್ ಬಳಸಿ