Homeಕರ್ನಾಟಕಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ‘ಬಾಲ ಸಾಹಿತ್ಯ ಪುರಸ್ಕಾರ’ ಮತ್ತು ‘ಯುವ ಪುರಸ್ಕಾರ ಪ್ರಶಸ್ತಿ’ ಪ್ರಕಟಗೊಂಡಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಅವರು ಆಯ್ಕೆಯಾಗಿದ್ದಾರೆ. ಕೃಷ್ಣಮೂರ್ತಿಯವರ ‘ಛೂಮಂತ್ರಯ್ಯನ ಕಥೆಗಳು’ ಕಥಾ ಸಂಗ್ರಹಕ್ಕೆ ಪ್ರಶಸ್ತಿ ದೊರೆತಿದೆ.

ಕೃಷ್ಣಮೂರ್ತಿಯವರು ಕಣ್ಮುಚ್ಚಾಲೆ ಮಕ್ಕಳ ಗುಂಪು, ನಮ್ಮ ಪ್ರಕಾಶನ ಮತ್ತು ಸಿರಿಸಮೃದ್ಧಿ ಬಳಗ ಮುಂತಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ. ಹುಳಿಯಾರಿನ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸಾವಯವ ಕೃಷಿ ಮತ್ತು ಮಳೆ ನೀರಿನ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಕ್ಕಳಿಗಾಗಿ ಜೀರಿಂಬೆ ಹಾಡು, ಗುಡು ಗುಡು ಗುಡ್ಡ, ಪದ್ಯದ ಮರ, ಡ್ರೂ ಡ್ರೂ ಡ್ರೂಟೆ, ಹಾಡೆ ಸುವ್ವಿ ಹಾಡಿನ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಮಳೆ ಹುಚ್ಚ, ಅಗಲ ಕಿವಿಯ ಅರಿವುಗಾರ, ನವಿಲೂರಿನ ಕತೆ, ಅಂಗಭಂಗದ ರಾಜ್ಯದಲ್ಲಿ, ಕೇಡಾಳ ಕೆಪ್ಪರ್ಕ, ಕತ್ತೆ ಹಾಡು ಎಂಬ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಚಗಚೆ ಹೂವಿನ ಹುಡುಗಿ, ಛೂಮಂತ್ರಯ್ಯನ ಕತೆಗಳು ಇವರ ಮಕ್ಕಳ ಕಥಾ ಪುಸ್ತಕಗಳಾಗಿದೆ.

ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ ಇವರ ಕಾವ್ಯ ಕೃತಿಗಳಾಗಿದ್ದು, ಮಳೆ ನೀರ ಕೊಯ್ಲು ಕುರಿತ ಪುಸ್ತಕಗಳು ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ, ಬಿಸ್ಲುಬಾಳೆ ಹಣ್ಣು ಮತ್ತು ಇತರ ಪ್ರಬಂಧಗಳು ರಚಿಸಿದ್ದಾರೆ.

ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಾಹಿತ್ಯ ಪ್ರಶಸ್ತಿ, ಜಿಎಸ್ಎಸ್ ಕಾವ್ಯ ಪ್ರಶಸ್ತಿ, ಶಿಕ್ಷಣ ಸಿರಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಪ್ರಶಸ್ತಿಗಳಿಗೆ ಕೃಷ್ಣಮೂರ್ತಿ ಬಿಳಿಗೆರೆ ಭಾಜನರಾಗಿದ್ದಾರೆ.

ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್‌ ಆಯ್ಕೆ

ಯುವ ಪುರಸ್ಕಾರಕ್ಕೆ ಕವಯತ್ರಿ ಶ್ರುತಿ ಬಿಆರ್‌ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ರುತಿ ಬಿಆರ್, ಪ್ರಸ್ತುತ ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶ್ರುತಿ ಅವರು ಮಾನಸ ಗಂಗೋತ್ರಿಯ ಮೈಸೂರು ವಿಶ್ವ ವಿದ್ಯಾನಿಲಯದಿಂದ ಪ್ರಥಮ ರ್‍ಯಾಂಕ್‌ ಮತ್ತು ಐದು ಚಿನ್ನದ ಪದಕಗಳೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, 2017ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

ಇವರ ಹಲವಾರು ಲೇಖನಗಳು, ಕವಿತೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 2008ರಲ್ಲಿ ಪ್ರಜಾವಣಿ ದೀಪಾವಳಿ ವಿಶೇಷಾಂಕದ ಕವನ ಸ್ಪರ್ಧೆಯ ವಿದ್ಯಾರ್ಥಿ ವಿಭಾಗದ ಬಹುಮಾನ ದೊರೆತಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಒಟ್ಟು ಏಳು ಕಾದಂಬರಿಗಳು, ಆರು ಕವನ ಸಂಕಲನಗಳು ನಾಲ್ಕು ಕಥಾ ಸಂಕಲನಗಳು, ಐದು ಸಣ್ಣ ಕಥಾ ಸಂಕಲನಗಳು, ಒಂದು ನಾಟಕ ಮತ್ತು ಒಂದು ಹಿಸ್ಟಾರಿಕಲ್ ಫಿಕ್ಷನ್‌ ಆಯ್ಕೆಯಾಗಿವೆ.

ಯುವ ಪುರಸ್ಕಾರ ಒಟ್ಟು 10 ಕವನ ಸಂಕಲನಗಳು, ಏಳು ಕಥಾ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಒಂದು ಕಾದಂಬರಿ, ಒಂದು ಗಝಲ್ ಪುಸ್ತಕ್ಕೆ ದೊರೆತಿದೆ.

ಇದನ್ನೂ ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ, ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...