Homeಕರ್ನಾಟಕಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ‘ಬಾಲ ಸಾಹಿತ್ಯ ಪುರಸ್ಕಾರ’ ಮತ್ತು ‘ಯುವ ಪುರಸ್ಕಾರ ಪ್ರಶಸ್ತಿ’ ಪ್ರಕಟಗೊಂಡಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಅವರು ಆಯ್ಕೆಯಾಗಿದ್ದಾರೆ. ಕೃಷ್ಣಮೂರ್ತಿಯವರ ‘ಛೂಮಂತ್ರಯ್ಯನ ಕಥೆಗಳು’ ಕಥಾ ಸಂಗ್ರಹಕ್ಕೆ ಪ್ರಶಸ್ತಿ ದೊರೆತಿದೆ.

ಕೃಷ್ಣಮೂರ್ತಿಯವರು ಕಣ್ಮುಚ್ಚಾಲೆ ಮಕ್ಕಳ ಗುಂಪು, ನಮ್ಮ ಪ್ರಕಾಶನ ಮತ್ತು ಸಿರಿಸಮೃದ್ಧಿ ಬಳಗ ಮುಂತಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ. ಹುಳಿಯಾರಿನ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸಾವಯವ ಕೃಷಿ ಮತ್ತು ಮಳೆ ನೀರಿನ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಕ್ಕಳಿಗಾಗಿ ಜೀರಿಂಬೆ ಹಾಡು, ಗುಡು ಗುಡು ಗುಡ್ಡ, ಪದ್ಯದ ಮರ, ಡ್ರೂ ಡ್ರೂ ಡ್ರೂಟೆ, ಹಾಡೆ ಸುವ್ವಿ ಹಾಡಿನ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಮಳೆ ಹುಚ್ಚ, ಅಗಲ ಕಿವಿಯ ಅರಿವುಗಾರ, ನವಿಲೂರಿನ ಕತೆ, ಅಂಗಭಂಗದ ರಾಜ್ಯದಲ್ಲಿ, ಕೇಡಾಳ ಕೆಪ್ಪರ್ಕ, ಕತ್ತೆ ಹಾಡು ಎಂಬ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಚಗಚೆ ಹೂವಿನ ಹುಡುಗಿ, ಛೂಮಂತ್ರಯ್ಯನ ಕತೆಗಳು ಇವರ ಮಕ್ಕಳ ಕಥಾ ಪುಸ್ತಕಗಳಾಗಿದೆ.

ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ ಇವರ ಕಾವ್ಯ ಕೃತಿಗಳಾಗಿದ್ದು, ಮಳೆ ನೀರ ಕೊಯ್ಲು ಕುರಿತ ಪುಸ್ತಕಗಳು ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ, ಬಿಸ್ಲುಬಾಳೆ ಹಣ್ಣು ಮತ್ತು ಇತರ ಪ್ರಬಂಧಗಳು ರಚಿಸಿದ್ದಾರೆ.

ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಾಹಿತ್ಯ ಪ್ರಶಸ್ತಿ, ಜಿಎಸ್ಎಸ್ ಕಾವ್ಯ ಪ್ರಶಸ್ತಿ, ಶಿಕ್ಷಣ ಸಿರಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಪ್ರಶಸ್ತಿಗಳಿಗೆ ಕೃಷ್ಣಮೂರ್ತಿ ಬಿಳಿಗೆರೆ ಭಾಜನರಾಗಿದ್ದಾರೆ.

ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್‌ ಆಯ್ಕೆ

ಯುವ ಪುರಸ್ಕಾರಕ್ಕೆ ಕವಯತ್ರಿ ಶ್ರುತಿ ಬಿಆರ್‌ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ರುತಿ ಬಿಆರ್, ಪ್ರಸ್ತುತ ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶ್ರುತಿ ಅವರು ಮಾನಸ ಗಂಗೋತ್ರಿಯ ಮೈಸೂರು ವಿಶ್ವ ವಿದ್ಯಾನಿಲಯದಿಂದ ಪ್ರಥಮ ರ್‍ಯಾಂಕ್‌ ಮತ್ತು ಐದು ಚಿನ್ನದ ಪದಕಗಳೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, 2017ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

ಇವರ ಹಲವಾರು ಲೇಖನಗಳು, ಕವಿತೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 2008ರಲ್ಲಿ ಪ್ರಜಾವಣಿ ದೀಪಾವಳಿ ವಿಶೇಷಾಂಕದ ಕವನ ಸ್ಪರ್ಧೆಯ ವಿದ್ಯಾರ್ಥಿ ವಿಭಾಗದ ಬಹುಮಾನ ದೊರೆತಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಒಟ್ಟು ಏಳು ಕಾದಂಬರಿಗಳು, ಆರು ಕವನ ಸಂಕಲನಗಳು ನಾಲ್ಕು ಕಥಾ ಸಂಕಲನಗಳು, ಐದು ಸಣ್ಣ ಕಥಾ ಸಂಕಲನಗಳು, ಒಂದು ನಾಟಕ ಮತ್ತು ಒಂದು ಹಿಸ್ಟಾರಿಕಲ್ ಫಿಕ್ಷನ್‌ ಆಯ್ಕೆಯಾಗಿವೆ.

ಯುವ ಪುರಸ್ಕಾರ ಒಟ್ಟು 10 ಕವನ ಸಂಕಲನಗಳು, ಏಳು ಕಥಾ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಒಂದು ಕಾದಂಬರಿ, ಒಂದು ಗಝಲ್ ಪುಸ್ತಕ್ಕೆ ದೊರೆತಿದೆ.

ಇದನ್ನೂ ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ, ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...