Homeಮುಖಪುಟಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

ಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

- Advertisement -
- Advertisement -

ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ), ಭಾರತ ಕುಸ್ತಿ ಫೆಡರೇಷನ್‌ ಚುನಾವಣೆಯನ್ನು ಜುಲೈ 4ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಕಾರಿಯನ್ನಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್‌ ಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಹೋರಾಟದಲ್ಲಿ ತೊಡಗಿದ್ದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜುಲೈ 7ರಂದು ಅವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ನನೆಗುದಿಗೆ ಬಿದ್ದಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವುದಾಗಿ ಹೇಳಿದ್ದರು. ಆದರೆ, ಡಬ್ಲುಎಫ್‌ಐ ವಿಶೇಷ ಮಹಾಸಭೆಯನ್ನು ಕರೆಯಲು 21 ದಿನಗಳ ಮೊದಲು ನೋಟಿಸ್‌ ನೀಡಬೇಕಾಗಿರುವ ಕಾರಣ ಜುಲೈ 4ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ವಾರ್ಷಿಕ ಮಹಾಸಭೆ ಅಥವಾ ವಿಶೇಷ ಮಹಾಸಭೆ ಕರೆದು ಚುನಾವಣೆ ನಡೆಸಬಹುದಾಗಿದೆ. ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ಅಥವಾ ಬೆಂಬಲಿಗರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಚಿವರು ಕುಸ್ತಿಪಟುಗಳಿಗೆ ಆಶ್ವಾಸನೆ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳು ಜೂನ್ 15ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ.

ಐಒಎ ಸಿಇಒ ಆಗಿರುವ ಕಲ್ಯಾಣ್ ಚೌಬೆ ಅವರು ನ್ಯಾ.ಮಿತ್ತಲ್ ಕುಮಾರ್ ಅವರಿಗೆ ನೇಮಕದ ವಿಷಯವನ್ನು ಪತ್ರಮುಖೇನ ತಿಳಿಸಿದ್ದು, ಹುದ್ದೆ ವಹಿಸಲು ಸಮ್ಮತಿಸುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾ.ಮಿತ್ತಲ್ ಕುಮಾರ್ ಅವರು ವಿಶೇಷ ಮಹಾಸಭೆಯ ದಿನಾಂಕದ ಬಗ್ಗೆ ತಮ್ಮದೇ ನಿರ್ಧಾರ ಕೈಗೊಳ್ಳಬಹುದು. ಜುಲೈ 4ರಂದೇ ಚುನಾವಣೆ ನಡೆಸಬೇಕೇ ಅಥವಾ ಕೆಲದಿನಗಳ ನಂತರ ನಡೆಸಬೇಕೇ ಎಂಬುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

ಈ ಕುಸ್ತಿ ಫಡರೇಷನ್‌ಗೆ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಮತ್ತು ದೆಹಲಿ ಸೇರಿದಂತೆ 25 ಸಂಯೋಜಿತ ಘಟಕಗಳಿವೆ. ಪ್ರತಿ ಘಟಕಗಳು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು. ಪ್ರತಿಯೊಬ್ಬರೂ ಮತ ಚಲಾಯಿಸಲು ಅವಕಾಶವಿದೆ. ಚುನಾವಣೆಯಲ್ಲಿ ಒಟ್ಟು 50 ಜನ ಮತದಾನ ಮಾಡಲಿದ್ದಾರೆ.

ರಾಜ್ಯ ಘಟಕಗಳು ಕಾರ್ಯಕಾರಿ ಸಮಿತಿಯಲ್ಲಿರುವವರನ್ನು ಮಾತ್ರ ಪ್ರತಿನಿಧಿಗಳನ್ನಾಗಿ ನಾಮನಿರ್ದೇಶನ ಮಾಡಬೇಕಾಗುತ್ತದೆ ಎಂದು ಕುಸ್ತಿ ಫೆಡರೇಷನ್ ನಿಯಮಾವಳಿ ಹೇಳುತ್ತದೆ. ಹಾಗಾಗಿ ಬ್ರಿಜ್ ಭೂಷಣ್ ಸಿಂಗ್‌ ಅವರ ಬೆಂಬಲಿಗರು ಅರ್ಹ ಅಭ್ಯರ್ಥಿಗಳಾಗಿದ್ದು ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಏನಾಗಬಹುದು ಎನ್ನುವ ಕುತೂಹಲವೂ ಮೂಡಿದೆ.

ಆರೋಪಿ ಬ್ರಿಜ್‌ಭೂಷಣ್ ಸಿಂಗ್ ಅವರ ಪುತ್ರ ಕರಣ್ ಈ ಹಿಂದಿನ ಡಬ್ಲ್ಯುಎಫ್‌ಐ ಆಡಳಿತವರ್ಗದಲ್ಲಿ ಉಪಾಧ್ಯಕ್ಷ ಸ್ಥಾನದಲ್ಲಿದ್ದರು. ಅವರು ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಸಿಂಗ್ ಅವರ ಅಳಿಯ ವಿಶಾಲ್ ಸಿಂಗ್ ಅವರು ಬಿಹಾರ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿದ್ದಾರೆ. ಇವರೆನ್ನೆಲ್ಲ ಇದೀಗ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಜುಲೈ 7ರಂದು ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಿದ್ದಾರೆ. ಅವೆಲ್ಲ ಪ್ರಕರಣಗಳನ್ನು ತಗೆಯಬೇಕು. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...