Homeಮುಖಪುಟಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

ಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

- Advertisement -
- Advertisement -

ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ), ಭಾರತ ಕುಸ್ತಿ ಫೆಡರೇಷನ್‌ ಚುನಾವಣೆಯನ್ನು ಜುಲೈ 4ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಕಾರಿಯನ್ನಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್‌ ಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಹೋರಾಟದಲ್ಲಿ ತೊಡಗಿದ್ದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜುಲೈ 7ರಂದು ಅವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ನನೆಗುದಿಗೆ ಬಿದ್ದಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವುದಾಗಿ ಹೇಳಿದ್ದರು. ಆದರೆ, ಡಬ್ಲುಎಫ್‌ಐ ವಿಶೇಷ ಮಹಾಸಭೆಯನ್ನು ಕರೆಯಲು 21 ದಿನಗಳ ಮೊದಲು ನೋಟಿಸ್‌ ನೀಡಬೇಕಾಗಿರುವ ಕಾರಣ ಜುಲೈ 4ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ವಾರ್ಷಿಕ ಮಹಾಸಭೆ ಅಥವಾ ವಿಶೇಷ ಮಹಾಸಭೆ ಕರೆದು ಚುನಾವಣೆ ನಡೆಸಬಹುದಾಗಿದೆ. ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ಅಥವಾ ಬೆಂಬಲಿಗರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಚಿವರು ಕುಸ್ತಿಪಟುಗಳಿಗೆ ಆಶ್ವಾಸನೆ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳು ಜೂನ್ 15ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ.

ಐಒಎ ಸಿಇಒ ಆಗಿರುವ ಕಲ್ಯಾಣ್ ಚೌಬೆ ಅವರು ನ್ಯಾ.ಮಿತ್ತಲ್ ಕುಮಾರ್ ಅವರಿಗೆ ನೇಮಕದ ವಿಷಯವನ್ನು ಪತ್ರಮುಖೇನ ತಿಳಿಸಿದ್ದು, ಹುದ್ದೆ ವಹಿಸಲು ಸಮ್ಮತಿಸುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾ.ಮಿತ್ತಲ್ ಕುಮಾರ್ ಅವರು ವಿಶೇಷ ಮಹಾಸಭೆಯ ದಿನಾಂಕದ ಬಗ್ಗೆ ತಮ್ಮದೇ ನಿರ್ಧಾರ ಕೈಗೊಳ್ಳಬಹುದು. ಜುಲೈ 4ರಂದೇ ಚುನಾವಣೆ ನಡೆಸಬೇಕೇ ಅಥವಾ ಕೆಲದಿನಗಳ ನಂತರ ನಡೆಸಬೇಕೇ ಎಂಬುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

ಈ ಕುಸ್ತಿ ಫಡರೇಷನ್‌ಗೆ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಮತ್ತು ದೆಹಲಿ ಸೇರಿದಂತೆ 25 ಸಂಯೋಜಿತ ಘಟಕಗಳಿವೆ. ಪ್ರತಿ ಘಟಕಗಳು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು. ಪ್ರತಿಯೊಬ್ಬರೂ ಮತ ಚಲಾಯಿಸಲು ಅವಕಾಶವಿದೆ. ಚುನಾವಣೆಯಲ್ಲಿ ಒಟ್ಟು 50 ಜನ ಮತದಾನ ಮಾಡಲಿದ್ದಾರೆ.

ರಾಜ್ಯ ಘಟಕಗಳು ಕಾರ್ಯಕಾರಿ ಸಮಿತಿಯಲ್ಲಿರುವವರನ್ನು ಮಾತ್ರ ಪ್ರತಿನಿಧಿಗಳನ್ನಾಗಿ ನಾಮನಿರ್ದೇಶನ ಮಾಡಬೇಕಾಗುತ್ತದೆ ಎಂದು ಕುಸ್ತಿ ಫೆಡರೇಷನ್ ನಿಯಮಾವಳಿ ಹೇಳುತ್ತದೆ. ಹಾಗಾಗಿ ಬ್ರಿಜ್ ಭೂಷಣ್ ಸಿಂಗ್‌ ಅವರ ಬೆಂಬಲಿಗರು ಅರ್ಹ ಅಭ್ಯರ್ಥಿಗಳಾಗಿದ್ದು ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಏನಾಗಬಹುದು ಎನ್ನುವ ಕುತೂಹಲವೂ ಮೂಡಿದೆ.

ಆರೋಪಿ ಬ್ರಿಜ್‌ಭೂಷಣ್ ಸಿಂಗ್ ಅವರ ಪುತ್ರ ಕರಣ್ ಈ ಹಿಂದಿನ ಡಬ್ಲ್ಯುಎಫ್‌ಐ ಆಡಳಿತವರ್ಗದಲ್ಲಿ ಉಪಾಧ್ಯಕ್ಷ ಸ್ಥಾನದಲ್ಲಿದ್ದರು. ಅವರು ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಸಿಂಗ್ ಅವರ ಅಳಿಯ ವಿಶಾಲ್ ಸಿಂಗ್ ಅವರು ಬಿಹಾರ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿದ್ದಾರೆ. ಇವರೆನ್ನೆಲ್ಲ ಇದೀಗ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಜುಲೈ 7ರಂದು ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಿದ್ದಾರೆ. ಅವೆಲ್ಲ ಪ್ರಕರಣಗಳನ್ನು ತಗೆಯಬೇಕು. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...