Homeಮುಖಪುಟಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

ಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

- Advertisement -
- Advertisement -

ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ), ಭಾರತ ಕುಸ್ತಿ ಫೆಡರೇಷನ್‌ ಚುನಾವಣೆಯನ್ನು ಜುಲೈ 4ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಕಾರಿಯನ್ನಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್‌ ಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಹೋರಾಟದಲ್ಲಿ ತೊಡಗಿದ್ದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜುಲೈ 7ರಂದು ಅವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ನನೆಗುದಿಗೆ ಬಿದ್ದಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವುದಾಗಿ ಹೇಳಿದ್ದರು. ಆದರೆ, ಡಬ್ಲುಎಫ್‌ಐ ವಿಶೇಷ ಮಹಾಸಭೆಯನ್ನು ಕರೆಯಲು 21 ದಿನಗಳ ಮೊದಲು ನೋಟಿಸ್‌ ನೀಡಬೇಕಾಗಿರುವ ಕಾರಣ ಜುಲೈ 4ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ವಾರ್ಷಿಕ ಮಹಾಸಭೆ ಅಥವಾ ವಿಶೇಷ ಮಹಾಸಭೆ ಕರೆದು ಚುನಾವಣೆ ನಡೆಸಬಹುದಾಗಿದೆ. ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ಅಥವಾ ಬೆಂಬಲಿಗರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಚಿವರು ಕುಸ್ತಿಪಟುಗಳಿಗೆ ಆಶ್ವಾಸನೆ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳು ಜೂನ್ 15ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ.

ಐಒಎ ಸಿಇಒ ಆಗಿರುವ ಕಲ್ಯಾಣ್ ಚೌಬೆ ಅವರು ನ್ಯಾ.ಮಿತ್ತಲ್ ಕುಮಾರ್ ಅವರಿಗೆ ನೇಮಕದ ವಿಷಯವನ್ನು ಪತ್ರಮುಖೇನ ತಿಳಿಸಿದ್ದು, ಹುದ್ದೆ ವಹಿಸಲು ಸಮ್ಮತಿಸುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾ.ಮಿತ್ತಲ್ ಕುಮಾರ್ ಅವರು ವಿಶೇಷ ಮಹಾಸಭೆಯ ದಿನಾಂಕದ ಬಗ್ಗೆ ತಮ್ಮದೇ ನಿರ್ಧಾರ ಕೈಗೊಳ್ಳಬಹುದು. ಜುಲೈ 4ರಂದೇ ಚುನಾವಣೆ ನಡೆಸಬೇಕೇ ಅಥವಾ ಕೆಲದಿನಗಳ ನಂತರ ನಡೆಸಬೇಕೇ ಎಂಬುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

ಈ ಕುಸ್ತಿ ಫಡರೇಷನ್‌ಗೆ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಮತ್ತು ದೆಹಲಿ ಸೇರಿದಂತೆ 25 ಸಂಯೋಜಿತ ಘಟಕಗಳಿವೆ. ಪ್ರತಿ ಘಟಕಗಳು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು. ಪ್ರತಿಯೊಬ್ಬರೂ ಮತ ಚಲಾಯಿಸಲು ಅವಕಾಶವಿದೆ. ಚುನಾವಣೆಯಲ್ಲಿ ಒಟ್ಟು 50 ಜನ ಮತದಾನ ಮಾಡಲಿದ್ದಾರೆ.

ರಾಜ್ಯ ಘಟಕಗಳು ಕಾರ್ಯಕಾರಿ ಸಮಿತಿಯಲ್ಲಿರುವವರನ್ನು ಮಾತ್ರ ಪ್ರತಿನಿಧಿಗಳನ್ನಾಗಿ ನಾಮನಿರ್ದೇಶನ ಮಾಡಬೇಕಾಗುತ್ತದೆ ಎಂದು ಕುಸ್ತಿ ಫೆಡರೇಷನ್ ನಿಯಮಾವಳಿ ಹೇಳುತ್ತದೆ. ಹಾಗಾಗಿ ಬ್ರಿಜ್ ಭೂಷಣ್ ಸಿಂಗ್‌ ಅವರ ಬೆಂಬಲಿಗರು ಅರ್ಹ ಅಭ್ಯರ್ಥಿಗಳಾಗಿದ್ದು ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಏನಾಗಬಹುದು ಎನ್ನುವ ಕುತೂಹಲವೂ ಮೂಡಿದೆ.

ಆರೋಪಿ ಬ್ರಿಜ್‌ಭೂಷಣ್ ಸಿಂಗ್ ಅವರ ಪುತ್ರ ಕರಣ್ ಈ ಹಿಂದಿನ ಡಬ್ಲ್ಯುಎಫ್‌ಐ ಆಡಳಿತವರ್ಗದಲ್ಲಿ ಉಪಾಧ್ಯಕ್ಷ ಸ್ಥಾನದಲ್ಲಿದ್ದರು. ಅವರು ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಸಿಂಗ್ ಅವರ ಅಳಿಯ ವಿಶಾಲ್ ಸಿಂಗ್ ಅವರು ಬಿಹಾರ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿದ್ದಾರೆ. ಇವರೆನ್ನೆಲ್ಲ ಇದೀಗ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಜುಲೈ 7ರಂದು ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಿದ್ದಾರೆ. ಅವೆಲ್ಲ ಪ್ರಕರಣಗಳನ್ನು ತಗೆಯಬೇಕು. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...