Homeಮುಖಪುಟಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

ಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

- Advertisement -
- Advertisement -

ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ), ಭಾರತ ಕುಸ್ತಿ ಫೆಡರೇಷನ್‌ ಚುನಾವಣೆಯನ್ನು ಜುಲೈ 4ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಕಾರಿಯನ್ನಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್‌ ಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಹೋರಾಟದಲ್ಲಿ ತೊಡಗಿದ್ದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜುಲೈ 7ರಂದು ಅವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ನನೆಗುದಿಗೆ ಬಿದ್ದಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವುದಾಗಿ ಹೇಳಿದ್ದರು. ಆದರೆ, ಡಬ್ಲುಎಫ್‌ಐ ವಿಶೇಷ ಮಹಾಸಭೆಯನ್ನು ಕರೆಯಲು 21 ದಿನಗಳ ಮೊದಲು ನೋಟಿಸ್‌ ನೀಡಬೇಕಾಗಿರುವ ಕಾರಣ ಜುಲೈ 4ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ವಾರ್ಷಿಕ ಮಹಾಸಭೆ ಅಥವಾ ವಿಶೇಷ ಮಹಾಸಭೆ ಕರೆದು ಚುನಾವಣೆ ನಡೆಸಬಹುದಾಗಿದೆ. ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ಅಥವಾ ಬೆಂಬಲಿಗರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಚಿವರು ಕುಸ್ತಿಪಟುಗಳಿಗೆ ಆಶ್ವಾಸನೆ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳು ಜೂನ್ 15ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ.

ಐಒಎ ಸಿಇಒ ಆಗಿರುವ ಕಲ್ಯಾಣ್ ಚೌಬೆ ಅವರು ನ್ಯಾ.ಮಿತ್ತಲ್ ಕುಮಾರ್ ಅವರಿಗೆ ನೇಮಕದ ವಿಷಯವನ್ನು ಪತ್ರಮುಖೇನ ತಿಳಿಸಿದ್ದು, ಹುದ್ದೆ ವಹಿಸಲು ಸಮ್ಮತಿಸುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾ.ಮಿತ್ತಲ್ ಕುಮಾರ್ ಅವರು ವಿಶೇಷ ಮಹಾಸಭೆಯ ದಿನಾಂಕದ ಬಗ್ಗೆ ತಮ್ಮದೇ ನಿರ್ಧಾರ ಕೈಗೊಳ್ಳಬಹುದು. ಜುಲೈ 4ರಂದೇ ಚುನಾವಣೆ ನಡೆಸಬೇಕೇ ಅಥವಾ ಕೆಲದಿನಗಳ ನಂತರ ನಡೆಸಬೇಕೇ ಎಂಬುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

ಈ ಕುಸ್ತಿ ಫಡರೇಷನ್‌ಗೆ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಮತ್ತು ದೆಹಲಿ ಸೇರಿದಂತೆ 25 ಸಂಯೋಜಿತ ಘಟಕಗಳಿವೆ. ಪ್ರತಿ ಘಟಕಗಳು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು. ಪ್ರತಿಯೊಬ್ಬರೂ ಮತ ಚಲಾಯಿಸಲು ಅವಕಾಶವಿದೆ. ಚುನಾವಣೆಯಲ್ಲಿ ಒಟ್ಟು 50 ಜನ ಮತದಾನ ಮಾಡಲಿದ್ದಾರೆ.

ರಾಜ್ಯ ಘಟಕಗಳು ಕಾರ್ಯಕಾರಿ ಸಮಿತಿಯಲ್ಲಿರುವವರನ್ನು ಮಾತ್ರ ಪ್ರತಿನಿಧಿಗಳನ್ನಾಗಿ ನಾಮನಿರ್ದೇಶನ ಮಾಡಬೇಕಾಗುತ್ತದೆ ಎಂದು ಕುಸ್ತಿ ಫೆಡರೇಷನ್ ನಿಯಮಾವಳಿ ಹೇಳುತ್ತದೆ. ಹಾಗಾಗಿ ಬ್ರಿಜ್ ಭೂಷಣ್ ಸಿಂಗ್‌ ಅವರ ಬೆಂಬಲಿಗರು ಅರ್ಹ ಅಭ್ಯರ್ಥಿಗಳಾಗಿದ್ದು ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಏನಾಗಬಹುದು ಎನ್ನುವ ಕುತೂಹಲವೂ ಮೂಡಿದೆ.

ಆರೋಪಿ ಬ್ರಿಜ್‌ಭೂಷಣ್ ಸಿಂಗ್ ಅವರ ಪುತ್ರ ಕರಣ್ ಈ ಹಿಂದಿನ ಡಬ್ಲ್ಯುಎಫ್‌ಐ ಆಡಳಿತವರ್ಗದಲ್ಲಿ ಉಪಾಧ್ಯಕ್ಷ ಸ್ಥಾನದಲ್ಲಿದ್ದರು. ಅವರು ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಸಿಂಗ್ ಅವರ ಅಳಿಯ ವಿಶಾಲ್ ಸಿಂಗ್ ಅವರು ಬಿಹಾರ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿದ್ದಾರೆ. ಇವರೆನ್ನೆಲ್ಲ ಇದೀಗ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಜುಲೈ 7ರಂದು ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಿದ್ದಾರೆ. ಅವೆಲ್ಲ ಪ್ರಕರಣಗಳನ್ನು ತಗೆಯಬೇಕು. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...