Homeಮುಖಪುಟಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

- Advertisement -
- Advertisement -

ಸರಬರಾಜು ಮಾರ್ಗಗಳನ್ನು ಒಳಗೊಂಡಂತೆ ವಿದ್ಯುತ್ ಮೂಲಸೌಕರ್ಯವನ್ನು ನಿರ್ಮಿಸಲು ಮತ್ತು ನಿರ್ವಹಿಸಲು ಸರ್ಕಾರದ ವಿದ್ಯುತ್ ಮಂಡಳಿ ಮತ್ತು ಭಾರತದ ಅದಾನಿ ಎನರ್ಜಿ ಸೊಲ್ಯೂಷನ್ಸ್ ನಡುವಿನ 736 ಮಿಲಿಯನ್ ಡಾಲರ್ ಒಪ್ಪಂದವನ್ನು ಕೀನ್ಯಾದ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಸರ್ಕಾರಿ ಸ್ವಾಮ್ಯದ ಕೀನ್ಯಾ ಎಲೆಕ್ಟ್ರಿಕಲ್ ಟ್ರಾನ್ಸ್‌ಮಿಷನ್ ಕಂಪನಿ (ಕೆಟ್ರಾಕೊ) ಮತ್ತು ಅದಾನಿ ಎನರ್ಜಿ ಸೊಲ್ಯೂಷನ್ಸ್ ನಡುವಿನ ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಒಪ್ಪಂದಕ್ಕೆ ಈ ತಿಂಗಳ ಆರಂಭದಲ್ಲಿ ಸಹಿ ಹಾಕಲಾಗಿತ್ತು.

ಅಕ್ಟೋಬರ್ 11ರಂದು ಒಪ್ಪಂದದ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದ ಕೀನ್ಯಾ ಸರ್ಕಾರ, ಇದು (ಒಪ್ಪಂದ) ಪದೇ ಪದೇ ತಲೆದೂರುವ ವಿದ್ಯುತ್ ಸಮಸ್ಯೆ ಪರಿಹರಿಸಲು ಮತ್ತು ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡಲಿದೆ ಎಂದು ಹೇಳಿತ್ತು.

ಅದಾನಿ ಜೊತೆಗಿನ 30 ವರ್ಷಗಳ ಒಪ್ಪಂದವನ್ನು ಪ್ರಶ್ನಿಸಿ ಕೀನ್ಯಾದ ಲಾ ಸೊಸೈಟಿ ಹೈಕೋರ್ಟ್ ಮೊರೆ ಹೋಗಿತ್ತು. ಒಪ್ಪಂದ ರದ್ದುಗೊಳಿಸಿದ ಹೈಕೋರ್ಟ್, ನ್ಯಾಯಾಲಯ ಹೇಳುವವರೆಗೆ ಸರ್ಕಾರದ ಒಪ್ಪಂದ ಸಂಬಂಧ ಯಾವುದೇ ಹೆಜ್ಜೆ ಇಡಬಾರದು ಎಂದಿದೆ.

ಕೀನ್ಯಾದ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಕಾಯ್ದೆ-2021ರ ಅಡಿಯಲ್ಲಿ ಸಾರ್ವಜನಿಕ ಯೋಜನೆಗಳಲ್ಲಿ ಖಾಸಗಿ ವಲಯದ ಪಾಲುದಾರಿಕೆಗೆ ಅವಕಾಶವಿದೆ. ಆದರೆ, ವಿದ್ಯುತ್ ಮಂಡಳಿ ಕೆಟ್ರಾಕೊ ಮತ್ತು ಅದಾನಿ ನಡುವಿನ ಒಪ್ಪಂದ ಕಾಯ್ದೆಯೆ ನಿಯಮಾನುಸಾರ ನಡೆದಿಲ್ಲ. ಒಪ್ಪಂದವನ್ನು ಸಂವಿಧಾನಕ್ಕೆ ವಿರುದ್ದವಾಗಿದೆ ಮತ್ತು ಗೌಪ್ಯತೆಯ ಆತಂಕವಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದ ಲಾ ಸೊಸೈಟಿ ವಾದಿಸಿತ್ತು.

ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆ ನಡೆಸಿ ಅದಾನಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಕೀನ್ಯಾದ ಇಂಧನ ಸಚಿವಾಲಯ ಈ ಹಿಂದೆ ಹೇಳಿತ್ತು. ಆದರೆ, ಇದರಲ್ಲಿ ಲೋಪವಾಗಿದೆ ಎಂದು ಲಾ ಸೊಸೈಟಿ ಆರೋಪಿಸಿದೆ.

ನ್ಯಾಯಾಲಯ ಒಪ್ಪಂದವನ್ನು ರದ್ದುಪಡಿಸಿರುವ ಕುರಿತು ಅದಾನಿ ಸಮೂಹ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು energy.economictimes ವರದಿ ಮಾಡಿದೆ.

ಕೀನ್ಯಾದ ಲಾ ಸೊಸೈಟಿ ಮತ್ತು ಮಾನವ ಹಕ್ಕುಗಳ ಆಯೋಗ ಜಂಟಿಯಾಗಿ ಅದಾನಿ ಜೊತೆಗಿನ ವಿಮಾನ ನಿಲ್ದಾಣದ ಮತ್ತೊಂದು ಪಾಲುದಾರಿಕೆಯ ಒಪ್ಪಂದವನ್ನೂ ಪ್ರಶ್ನಿಸಿದೆ. ಈ ಒಪ್ಪಂದ ಬಹಳ ದುಬಾರಿಯಾಗಿದೆ. ಉದ್ಯೋಗ ನಷ್ಟದ ಆತಂಕವಿದೆ ಮತ್ತು ಹಣಕ್ಕೆ ಮೌಲ್ಯವನ್ನು ಕಲ್ಪಿಸುವುದಿಲ್ಲ ಎಂದು ಎರಡೂ ಸಂಸ್ಥೆಗಳು ಹೇಳಿವೆ.

ಇದನ್ನೂ ಓದಿ : ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...