Homeಅಂತರಾಷ್ಟ್ರೀಯಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

- Advertisement -
- Advertisement -

ಸ್ವಾತಂತ್ರ್ಯಾ ನಂತರದ ರಾಜಕೀಯ ಪ್ರಮುಖರ ಕಟು ಟೀಕೆಗಳ ಕಾರಣಕ್ಕೆ ಜೈಲು ಮತ್ತು ಎರಡು ದಶಕಗಳ ಗಡಿಪಾರು ಶಿಕ್ಷೆಗೆ ಗುರಿಯಾಗಿದ್ದ ಕೀನ್ಯಾದ ಪ್ರಸಿದ್ಧ ಕಾದಂಬರಿಕಾರ ಹಾಗೂ ನಾಟಕಕಾರ ಗೂಗಿ ವಾ ಥಿಯೊಂಗೊ ಅವರು ತನ್ನ 87ನೇ ವಯಸ್ಸಿನಲ್ಲಿ ಅಮೆರಿಕದ ಅಟ್ಲಾಂಟ್ಲಾದಲ್ಲಿ ನಿಧನರಾಗಿದ್ದಾರೆ.

ಈ ವಿಚಾರವನ್ನು ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಮತ್ತು ಗೂಗಿ ಅವರ ಮಗಳು ವಾಂಜಿಕು ವಾ ಥಿಯೊಂಗೊ ಖಚಿತಪಡಿಸಿದ್ದಾರೆ.

ಬ್ರಿಟನ್‌ನಿಂದ ಸ್ವಾತಂತ್ರ್ಯಕ್ಕಾಗಿ ನಡೆದ ಸಶಸ್ತ್ರ ‘ಮೌ ಮೌ’ ಹೋರಾಟದಲ್ಲಿ ಪಾಲ್ಗೊಂಡಿದ್ದ, ಅದರಲ್ಲೇ ರೂಪುಗೊಂಡ ಥಿಯೊಂಗೊ ಅವರು, ತಮ್ಮ ಬರಹಗಳಲ್ಲಿ ವಸಾಹತುಶಾಹಿ ಆಳ್ವಿಕೆ ಮತ್ತು ಅದರ ಅನೇಕ ಸವಲತ್ತುಗಳನ್ನು ಪಡೆದ ಕೀನ್ಯಾದ ನಾಯಕರನ್ನು ಕಟುವಾಗಿ ಟೀಕಿಸುತ್ತಿದ್ದರು.

ಡಿಸೆಂಬರ್ 1977ರಲ್ಲಿ, ರೈತರು ಮತ್ತು ಕಾರ್ಮಿಕರು ಥಿಯೊಂಗೊ ಅವರ ‘ಗಹಿಕ ದೀಂಡಾ’ (ನಾನು ಬಯಸಿದಾಗ ಮದುವೆಯಾಗುತ್ತೇನೆ) ನಾಟಕವನ್ನು ಪ್ರದರ್ಶಿಸಿದ ನಂತರ, ಯಾವುದೇ ಆರೋಪಗಳಿಲ್ಲದೆ ಥಿಯೊಂಗೊ ಅವರನ್ನು ಬಂಧಿಸಿ ಬಿಗಿ ಭದ್ರತೆಯ ಜೈಲಿನಲ್ಲಿ ಒಂದು ವರ್ಷ ಇಡಲಾಗಿತ್ತು.

ಕೀನ್ಯಾ ಸಮಾಜದಲ್ಲಿನ ಅಸಮಾನತೆಗಳ ಬಗೆಗಿನ ಟೀಕೆಯಿಂದ ಕೋಪಗೊಂಡ ಅಧಿಕಾರಿಗಳು, ನಾಟಕ ಆಯೋಜಿಸಿದ್ದ ರಂಗಮಂದಿರವನ್ನು ನೆಲಸಮ ಮಾಡಲು ಮೂರು ಟ್ರಕ್‌ಗಳಲ್ಲಿ ಪೊಲೀಸರನ್ನು ಕಳುಹಿಸಿದ್ದರು ಎಂದು ಥಿಯೊಂಗೊ ನಂತರ ಹೇಳಿದ್ದರು.

ಮಾಜಿ ಅಧ್ಯಕ್ಷ ಡೇನಿಯಲ್ ಅರಪ್ ಮೋಯಿ ಅವರ ಭದ್ರತಾ ಪಡೆಗಳು ತನ್ನನ್ನು ಬಂಧಿಸಿ ಕೊಲ್ಲಲು ಯೋಜನೆಗಳನ್ನು ರೂಪಿಸಿವೆ ಎಂದು ತಿಳಿದ ನಂತರ, 1982ರಲ್ಲಿ ಥಿಯೊಂಗೊ ದೇಶ ತೊರೆದು ಕ್ಯಾಲಿಫೋರ್ನಿಯಾ ಸೇರಿಕೊಂಡಿದ್ದರು. ಅಲ್ಲಿ ಇರ್ವಿನ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಮತ್ತು ತುಲನಾತ್ಮಕ ಸಾಹಿತ್ಯದ ಪ್ರಾಧ್ಯಾಪಕರಾಗಿದ್ದರು.

ವ್ಯಾಪಕ ಬಂಧನಗಳು, ಹತ್ಯೆಗಳು ಮತ್ತು ರಾಜಕೀಯ ವಿರೋಧಿಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಮಾಜಿ ಅಧ್ಯಕ್ಷ ಮೋಯಿ ಅವರ ಎರಡು ದಶಕದ ಆಡಳಿತ ಕೊನೆಗೊಂಡ ಬಳಿಕ, 2004ರಲ್ಲಿ ಥಿಯೊಂಗೊ ದೇಶಕ್ಕೆ ವಾಪಾಸಾಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ಥಿಯೊಂಗೊ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವರದಿಗಳು ಬಂದಿತ್ತು. ಅವರು ಗುರುವಾರ (ಮೇ.29) ಅಮೆರಿಕದಲ್ಲಿ ನಿಧನರಾಗಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ಮಾಹಿತಿ ನೀಡಿದ್ದಾರೆ.

“ಕೀನ್ಯಾದ ಅಕ್ಷರಗಳ ದಂತಕಥೆ ಕೊನೆಯ ಬಾರಿಗೆ ತನ್ನ ಪೆನ್ನು ಕೆಳಗಿಟ್ಟಿದ್ದಾರೆ” ಎಂದು ರುಟೊ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗಲೂ ಧೈರ್ಯಶಾಲಿಯಾಗಿದ್ದ ಅವರು, ನಮ್ಮ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಮತ್ತು ಆರ್ಥಿಕ ಶಕ್ತಿಯ ಬಳಕೆ ಮತ್ತು ದುರುಪಯೋಗದ ಬಗ್ಗೆ ನಾವು ಹೇಗೆ ಯೋಚಿಸುತ್ತೇವೆ ಎಂಬುದರ ಮೇಲೆ ಅಳಿಸಲಾಗದ ಪ್ರಭಾವ ಬೀರಿದ್ದರು” ಎಂದಿದ್ದಾರೆ.

2004ರಲ್ಲಿ ಕೀನ್ಯಾಕ್ಕೆ ಹಿಂದಿರುಗಿದ ನಂತರ ಥಿಯೊಂಗೊ ಅವರು ಮಾಜಿ ಅಧ್ಯಕ್ಷ ಮೋಯಿ ವಿರುದ್ಧ ಯಾವುದೇ ದ್ವೇಷ ಹೊಂದಿಲ್ಲ ಎಂದು ಹೇಳಿದ್ದರೂ, ಮೂರು ವರ್ಷಗಳ ನಂತರ ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಕೀನ್ಯಾದವರು ಆ ಯುಗದ ದುರುಪಯೋಗಗಳನ್ನು ಮರೆಯಬಾರದು ಎಂದು ಹೇಳಿದ್ದರು.

“22 ವರ್ಷಗಳ ಸರ್ವಾಧಿಕಾರದ ಪರಿಣಾಮಗಳು ನಮ್ಮೊಂದಿಗೆ ದೀರ್ಘಕಾಲ ಇರುತ್ತವೆ. ನಾವು ಆ ಅವಧಿಗೆ ಮರಳುವುದನ್ನು ಮತ್ತೊಮ್ಮೆ ನೋಡಲು ನಾನು ಇಷ್ಟಪಡುವುದಿಲ್ಲ” ಎಂದಿದ್ದರು.

ಥಿಯೊಂಗೊ ಅವರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ‘ಮೌ ಮೌ’ ಹೋರಾಟವನ್ನು ವಿವರಿಸುವ ಅವರ ಚೊಚ್ಚಲ ಕಾದಂಬರಿ “ವೀಪ್ ನಾಟ್ ಚೈಲ್ಡ್” ಮತ್ತು ಜೈಲಿನಲ್ಲಿದ್ದಾಗ ಟಾಯ್ಲೆಟ್ ಪೇಪರ್‌ನಲ್ಲಿ ಬರೆದ “ಡೆವಿಲ್ ಆನ್ ದಿ ಕ್ರಾಸ್” ಸೇರಿವೆ.

1980ರ ದಶಕದಲ್ಲಿ ಕೀನ್ಯಾದ ಹಿಂದಿನ ವಸಾಹತುಶಾಹಿ ಯಜಮಾನ ಆಮದು ಮಾಡಿದ ಭಾಷೆಗೆ ವಿದಾಯ ಹೇಳುತ್ತಿರುವುದಾಗಿ ಹೇಳಿದ್ದ ಥಿಯೊಂಗೊ ಇಂಗ್ಲಿಷ್ ತ್ಯಜಿಸಿ ತಮ್ಮ ಮಾತೃಭಾಷೆ ಗಿಕುಯುನಲ್ಲಿ ಬರೆಯಲು ಪ್ರಾರಂಭಿಸಿದರು.

1938ರ ಜನವರಿ 5ರಂದು ಕೀನ್ಯಾದ ಲಿಮುರು ಎಂಬಲ್ಲಿ ಜನಿಸಿದ ಥಿಯೊಂಗೊ ಅವರು, ಜಾಗತಿಕ ಸಾಹಿತ್ಯದ ಸಂದರ್ಭದಲ್ಲಿ ತಮ್ಮ ಅಸಾಧಾರಣ ವ್ಯಕ್ತಿತ್ವ ಮತ್ತು ಪ್ರತಿಭೆಗೆ ಹೆಸರಾದವರು.

ಚಿನುವಾ ಅಚಿಬೆ ಅವರ ಸಾಹಿತ್ಯದಂತೆ ಇವರ ಕೃತಿಗಳನ್ನೂ ವಿವಿಧ ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ. ‘ವೀಪ್ ನಾಟ್-ಚೈಲ್ಡ್, ‘ದಿ ರಿವರ್ ಬಿಟ್ವೀನ್’, ‘ಎ ಗ್ರೈನ್ ಆಫ್ ವೀಟ್ ಆನ್ ದಿ ಕ್ರಾಸ್’, ‘ವಿಜರ್ಡ್ ಆಫ್ ದಿ ಕ್ರೊ’ ಥಿಯೊಂಗೊ ಅವರ ಪ್ರಮುಖ ಕಾದಂಬರಿಗಳು.

ಕಾದಂಬರಿಗಳ ಜೊತೆ ಹಲವು ನಾಟಕಗಳನ್ನೂ ಥಿಯೊಂಗೊ ರಚಿಸಿದ್ದಾರೆ. ಸಾಹಿತ್ಯ, ಸಂಸ್ಕೃತಿ, ರಾಜಕೀಯ ಸ್ವರೂಪದ ಬಗ್ಗೆ ಹಲವಾರು ಪ್ರಬಂಧಗಳನ್ನೂ ಬರೆದಿದ್ದಾರೆ. ಇವರ ಬಹು ಚರ್ಚಿತ ಲೇಖನಗಳು ಕನ್ನಡಕ್ಕೆ ಅನುವಾದಗೊಂಡಿವೆ.

ಥಿಯೊಂಗೊ ಅವರನ್ನು ಪೂರ್ವ ಆಫ್ರಿಕಾದ ಪ್ರಮುಖ ಕಾದಂಬರಿಕಾರ ಎಂದು ಪರಿಗಣಿಸಲಾಗಿದೆ. ಅವರ ಜನಪ್ರಿಯ ‘ವೀಪ್ ನಾಟ್-ಚೈಲ್ಡ್’ (1964) ಪೂರ್ವ ಆಫ್ರಿಕನ್ ಒಬ್ಬರಿಂದ ಇಂಗ್ಲಿಷ್‌ನಲ್ಲಿ ಪ್ರಕಟವಾದ ಮೊದಲ ಪ್ರಮುಖ ಕಾದಂಬರಿಯಾಗಿದೆ.

ಥಿಯೊಂಗೊ ಅವರು 1963ರಲ್ಲಿ ಉಗಾಂಡಾದ ಕಂಪಾಲಾದ ಮಕೆರೆರೆ ವಿಶ್ವವಿದ್ಯಾಲಯದಿಂದ ಮತ್ತು 1964ರಲ್ಲಿ ಇಂಗ್ಲೆಂಡ್‌ನ ಯಾರ್ಕ್‌ಷೈರ್‌ನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಲೀಡ್ಸ್‌ನಲ್ಲಿ ಪದವಿ ಪಡೆದ ಬಳಿಕ ಥಿಯೊಂಗೊ ಅವರು ಕೀನ್ಯಾದ ನೈರೋಬಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಮತ್ತು ಅಮೆರಿಕದ ಇಲಿನಾಯ್ಸ್‌ನ ಇವಾನ್‌ಸ್ಟನ್‌ನ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ನ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. 1972ರಿಂದ 1977ರವರೆಗೆ ನೈರೋಬೊ ವಿಶ್ವವಿದ್ಯಾಲಯದಲ್ಲಿ ಥಿಯೊಂಗೊ ಹಿರಿಯ ಉಪನ್ಯಾಸಕರಾಗಿ ಮತ್ತು ಸಾಹಿತ್ಯ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...