Homeಕರ್ನಾಟಕಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

- Advertisement -
- Advertisement -

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಧ್ವಜ ವಿವಾದವನ್ನು ಬಿಜೆಪಿ ನಾಯಕರು ರಾಜಕೀಯಗೊಳಿಸಿದ್ದು, ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ-ಆರ್‌ಎಸ್‌ಎಸ್‌ ಅನ್ನು ದೇಶದ್ರೋಹಿಗಳು ಎಂಟು ಟೀಕಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ’ ಎಂದು ಕಿರಿಕಾರಿದೆ.

‘ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ’ ಎಂದು ಪ್ರಶ್ನಿಸಿದೆ.

‘ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ; ಮನುವಾದಕ್ಕೋ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ’ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು ಹಾಕಿದೆ.

ಸರ್ಕಾರಿ ಕಟ್ಟಡಗಳ ಮೇಲೆ ಧಮ್ಮ ಚಕ್ರ- ಜೈ ಭೀಮ್ ಧ್ವಜ ಹಾಕಬಹುದೇ?

‘ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈ ಭೀಮ್ ಧ್ವಜವನ್ನು ಹಾಕಬಹುದೇ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರೇ, ನೀವು ಯಾಕೆ ಪ್ರತಿಭಟನೆ ಮಾಡುತ್ತಿದ್ದೀರಿ? ದಯವಿಟ್ಟು ಟ್ರಸ್ಟ್ ವಿನಂತಿಯನ್ನು ಮತ್ತು ನಂತರದ ಆದೇಶದ ಮರುಪರಿಶೀಲಿಸಿ. ವಿನಂತಿ/ಆದೇಶದ ಯಾವ ಭಾಗವು ಕಾನೂನಿಗೆ ವಿರುದ್ಧವಾಗಿದೆ ಎಂಬುದನ್ನು ದಯವಿಟ್ಟು ಕರ್ನಾಟಕದ ಜನತೆಗೆ ತಿಳಿಸಿ. ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈಭೀಮ್ ಧ್ವಜವನ್ನು ಹಾಕಬಹುದೇ? ಯಾವುದೇ ಧ್ವಜಕ್ಕಿಂತ ರಾಷ್ಟ್ರಧ್ವಜಕ್ಕೆ ಪ್ರಾಧಾನ್ಯತೆ ನೀಡಬೇಕಲ್ಲವೇ’ ಎಂದು ಹೇಳಿದ್ದಾರೆ.

ಶ್ರೀ ಗೌರಿಶಂಕರ್ ಸೇವಾ ಟ್ರಸ್ಟ್ ಭಾರತದ ಧ್ವಜ ಅಥವಾ ಕನ್ನಡ ಧ್ವಜವನ್ನು ಹಾರಿಸಲು ನಿರ್ದಿಷ್ಟವಾಗಿ ಧ್ವಜಸ್ತಂಭವನ್ನು ಕೇಳಿದೆ. ಅದಕ್ಕೆ ಪಂಚಾಯತ್ ಇಲಾಖೆ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಬಿಜೆಪಿ ಬೇರೆ ಯಾವುದಾದರೂ ಧ್ವಜವನ್ನು ಹಾರಿಸಲು ಒತ್ತಾಯಿಸುತ್ತೀರಾ? ನಿಮ್ಮ ಪಕ್ಷವನ್ನು ಯಾವಾಗಲೂ ಭಾರತೀಯ ಧ್ವಜವನ್ನು ವಿರೋಧಿಸುವ ರಾಷ್ಟ್ರೀಯ ವಿರೋಧಿ ಆರ್‌ಎಸ್‌ಎಸ್‌ನಿಂದ ಪೋಷಿಸಲಾಗಿದೆ. ‘ಆರ್‌ಎಸ್‌ಎಸ್‌ ಧ್ವಜ ಮುಂದೊಂದು ದಿನ ರಾಷ್ಟ್ರಧ್ವಜವಾಗುತ್ತದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ಪ್ರಸ್ತಾಪಿಸಿದ್ದನ್ನು ನೆನಪಿಸಿಕೊಳ್ಳಿ. ನೀವು ಸಹ ಇದನ್ನು ಹೇಗೆ ಒಪ್ಪುತ್ತೀರಿ? ನೀವು ಜವಾಬ್ದಾರಿಯುತವಾಗಿ ಸರ್ಕಾರವನ್ನು ನಡೆಸಲಿಲ್ಲ, ಕನಿಷ್ಠ ಜವಾಬ್ದಾರಿಯುತ ವಿರೋಧ ಪಕ್ಷದವರಾಗಿರಿ’ ಎಂದು ಪ್ರಿಯಾಂಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...