Homeಕರ್ನಾಟಕಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

- Advertisement -
- Advertisement -

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಧ್ವಜ ವಿವಾದವನ್ನು ಬಿಜೆಪಿ ನಾಯಕರು ರಾಜಕೀಯಗೊಳಿಸಿದ್ದು, ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ-ಆರ್‌ಎಸ್‌ಎಸ್‌ ಅನ್ನು ದೇಶದ್ರೋಹಿಗಳು ಎಂಟು ಟೀಕಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ’ ಎಂದು ಕಿರಿಕಾರಿದೆ.

‘ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ’ ಎಂದು ಪ್ರಶ್ನಿಸಿದೆ.

‘ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ; ಮನುವಾದಕ್ಕೋ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ’ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು ಹಾಕಿದೆ.

ಸರ್ಕಾರಿ ಕಟ್ಟಡಗಳ ಮೇಲೆ ಧಮ್ಮ ಚಕ್ರ- ಜೈ ಭೀಮ್ ಧ್ವಜ ಹಾಕಬಹುದೇ?

‘ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈ ಭೀಮ್ ಧ್ವಜವನ್ನು ಹಾಕಬಹುದೇ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರೇ, ನೀವು ಯಾಕೆ ಪ್ರತಿಭಟನೆ ಮಾಡುತ್ತಿದ್ದೀರಿ? ದಯವಿಟ್ಟು ಟ್ರಸ್ಟ್ ವಿನಂತಿಯನ್ನು ಮತ್ತು ನಂತರದ ಆದೇಶದ ಮರುಪರಿಶೀಲಿಸಿ. ವಿನಂತಿ/ಆದೇಶದ ಯಾವ ಭಾಗವು ಕಾನೂನಿಗೆ ವಿರುದ್ಧವಾಗಿದೆ ಎಂಬುದನ್ನು ದಯವಿಟ್ಟು ಕರ್ನಾಟಕದ ಜನತೆಗೆ ತಿಳಿಸಿ. ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈಭೀಮ್ ಧ್ವಜವನ್ನು ಹಾಕಬಹುದೇ? ಯಾವುದೇ ಧ್ವಜಕ್ಕಿಂತ ರಾಷ್ಟ್ರಧ್ವಜಕ್ಕೆ ಪ್ರಾಧಾನ್ಯತೆ ನೀಡಬೇಕಲ್ಲವೇ’ ಎಂದು ಹೇಳಿದ್ದಾರೆ.

ಶ್ರೀ ಗೌರಿಶಂಕರ್ ಸೇವಾ ಟ್ರಸ್ಟ್ ಭಾರತದ ಧ್ವಜ ಅಥವಾ ಕನ್ನಡ ಧ್ವಜವನ್ನು ಹಾರಿಸಲು ನಿರ್ದಿಷ್ಟವಾಗಿ ಧ್ವಜಸ್ತಂಭವನ್ನು ಕೇಳಿದೆ. ಅದಕ್ಕೆ ಪಂಚಾಯತ್ ಇಲಾಖೆ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಬಿಜೆಪಿ ಬೇರೆ ಯಾವುದಾದರೂ ಧ್ವಜವನ್ನು ಹಾರಿಸಲು ಒತ್ತಾಯಿಸುತ್ತೀರಾ? ನಿಮ್ಮ ಪಕ್ಷವನ್ನು ಯಾವಾಗಲೂ ಭಾರತೀಯ ಧ್ವಜವನ್ನು ವಿರೋಧಿಸುವ ರಾಷ್ಟ್ರೀಯ ವಿರೋಧಿ ಆರ್‌ಎಸ್‌ಎಸ್‌ನಿಂದ ಪೋಷಿಸಲಾಗಿದೆ. ‘ಆರ್‌ಎಸ್‌ಎಸ್‌ ಧ್ವಜ ಮುಂದೊಂದು ದಿನ ರಾಷ್ಟ್ರಧ್ವಜವಾಗುತ್ತದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ಪ್ರಸ್ತಾಪಿಸಿದ್ದನ್ನು ನೆನಪಿಸಿಕೊಳ್ಳಿ. ನೀವು ಸಹ ಇದನ್ನು ಹೇಗೆ ಒಪ್ಪುತ್ತೀರಿ? ನೀವು ಜವಾಬ್ದಾರಿಯುತವಾಗಿ ಸರ್ಕಾರವನ್ನು ನಡೆಸಲಿಲ್ಲ, ಕನಿಷ್ಠ ಜವಾಬ್ದಾರಿಯುತ ವಿರೋಧ ಪಕ್ಷದವರಾಗಿರಿ’ ಎಂದು ಪ್ರಿಯಾಂಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...