Homeಕರ್ನಾಟಕಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

- Advertisement -
- Advertisement -

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಧ್ವಜ ವಿವಾದವನ್ನು ಬಿಜೆಪಿ ನಾಯಕರು ರಾಜಕೀಯಗೊಳಿಸಿದ್ದು, ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ-ಆರ್‌ಎಸ್‌ಎಸ್‌ ಅನ್ನು ದೇಶದ್ರೋಹಿಗಳು ಎಂಟು ಟೀಕಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ’ ಎಂದು ಕಿರಿಕಾರಿದೆ.

‘ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ’ ಎಂದು ಪ್ರಶ್ನಿಸಿದೆ.

‘ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ; ಮನುವಾದಕ್ಕೋ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ’ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು ಹಾಕಿದೆ.

ಸರ್ಕಾರಿ ಕಟ್ಟಡಗಳ ಮೇಲೆ ಧಮ್ಮ ಚಕ್ರ- ಜೈ ಭೀಮ್ ಧ್ವಜ ಹಾಕಬಹುದೇ?

‘ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈ ಭೀಮ್ ಧ್ವಜವನ್ನು ಹಾಕಬಹುದೇ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರೇ, ನೀವು ಯಾಕೆ ಪ್ರತಿಭಟನೆ ಮಾಡುತ್ತಿದ್ದೀರಿ? ದಯವಿಟ್ಟು ಟ್ರಸ್ಟ್ ವಿನಂತಿಯನ್ನು ಮತ್ತು ನಂತರದ ಆದೇಶದ ಮರುಪರಿಶೀಲಿಸಿ. ವಿನಂತಿ/ಆದೇಶದ ಯಾವ ಭಾಗವು ಕಾನೂನಿಗೆ ವಿರುದ್ಧವಾಗಿದೆ ಎಂಬುದನ್ನು ದಯವಿಟ್ಟು ಕರ್ನಾಟಕದ ಜನತೆಗೆ ತಿಳಿಸಿ. ಅನುಮತಿಯಿಲ್ಲದೆ ನಾನು ನಾಳೆ ಸರ್ಕಾರಿ ಆಸ್ತಿ ಅಥವಾ ಕಟ್ಟಡಗಳ ಮೇಲೆ ಧಮ್ಮ ಚಕ್ರ, ಪಂಚಶೀಲ ಧ್ವಜ ಅಥವಾ ಜೈಭೀಮ್ ಧ್ವಜವನ್ನು ಹಾಕಬಹುದೇ? ಯಾವುದೇ ಧ್ವಜಕ್ಕಿಂತ ರಾಷ್ಟ್ರಧ್ವಜಕ್ಕೆ ಪ್ರಾಧಾನ್ಯತೆ ನೀಡಬೇಕಲ್ಲವೇ’ ಎಂದು ಹೇಳಿದ್ದಾರೆ.

ಶ್ರೀ ಗೌರಿಶಂಕರ್ ಸೇವಾ ಟ್ರಸ್ಟ್ ಭಾರತದ ಧ್ವಜ ಅಥವಾ ಕನ್ನಡ ಧ್ವಜವನ್ನು ಹಾರಿಸಲು ನಿರ್ದಿಷ್ಟವಾಗಿ ಧ್ವಜಸ್ತಂಭವನ್ನು ಕೇಳಿದೆ. ಅದಕ್ಕೆ ಪಂಚಾಯತ್ ಇಲಾಖೆ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಬಿಜೆಪಿ ಬೇರೆ ಯಾವುದಾದರೂ ಧ್ವಜವನ್ನು ಹಾರಿಸಲು ಒತ್ತಾಯಿಸುತ್ತೀರಾ? ನಿಮ್ಮ ಪಕ್ಷವನ್ನು ಯಾವಾಗಲೂ ಭಾರತೀಯ ಧ್ವಜವನ್ನು ವಿರೋಧಿಸುವ ರಾಷ್ಟ್ರೀಯ ವಿರೋಧಿ ಆರ್‌ಎಸ್‌ಎಸ್‌ನಿಂದ ಪೋಷಿಸಲಾಗಿದೆ. ‘ಆರ್‌ಎಸ್‌ಎಸ್‌ ಧ್ವಜ ಮುಂದೊಂದು ದಿನ ರಾಷ್ಟ್ರಧ್ವಜವಾಗುತ್ತದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ಪ್ರಸ್ತಾಪಿಸಿದ್ದನ್ನು ನೆನಪಿಸಿಕೊಳ್ಳಿ. ನೀವು ಸಹ ಇದನ್ನು ಹೇಗೆ ಒಪ್ಪುತ್ತೀರಿ? ನೀವು ಜವಾಬ್ದಾರಿಯುತವಾಗಿ ಸರ್ಕಾರವನ್ನು ನಡೆಸಲಿಲ್ಲ, ಕನಿಷ್ಠ ಜವಾಬ್ದಾರಿಯುತ ವಿರೋಧ ಪಕ್ಷದವರಾಗಿರಿ’ ಎಂದು ಪ್ರಿಯಾಂಕ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...