Homeಮುಖಪುಟಕೆರಗೋಡು ಹನುಮಧ್ವಜ ವಿವಾದ: ಕೇಸರಿ ಶಾಲು ಧರಿಸಿ ಬೀದಿಗಿಳಿದ ‘ಜಾತ್ಯತೀತ ಜನತಾದಳ’ ಮುಖಂಡರು

ಕೆರಗೋಡು ಹನುಮಧ್ವಜ ವಿವಾದ: ಕೇಸರಿ ಶಾಲು ಧರಿಸಿ ಬೀದಿಗಿಳಿದ ‘ಜಾತ್ಯತೀತ ಜನತಾದಳ’ ಮುಖಂಡರು

- Advertisement -
- Advertisement -

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಹನುಮಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಸರ್ಕಾರಿ ಜಾಗದಲ್ಲಿ ಸ್ಥಾಪಿಸಿದ್ದ ಧ್ವಜ ಸ್ಥಂಬದಿಂದ ಹನುಮಧ್ವಜ ಇಳಿಸಿ, ತ್ರಿವರ್ಣ ಧ್ವಜ ಹಾರಿಸಿದ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜಾತ್ಯತೀತ ಜನತಾದಳ ನಾಯಕರೂ ಕೂಡ ತಮ್ಮ ಪಕ್ಷದ ಶಾಲುಗಳನ್ನು ಬಿಟ್ಟು. ಕೇಸರಿ ಶಾಲುಗಳನ್ನು ಧರಿಸಿ ಬೀದಿಗೆ ಇಳಿದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಇಂದು ಆಯೋಜಿಸಿದ್ದ ಪ್ರತಿಭಟನೆಯನ್ನು ಖುದ್ದು ಎಚ್.ಡಿ. ಕುಮಾರಸ್ವಾಮಿಯವರೆ ಕೇಸರಿ ಶಾಲು ಧರಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ, ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾತ್ಯತೀತ ಜನತಾದಳ ಮತ್ತು ಬಿಜೆಪಿ ವತಿಯಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಸಿಟಿ ರವಿ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಪ್ರೀತಂಗೌಡ, ಸೇರಿ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರು ಭಾಗಿಯಾದರು’ ಎಂದು ಜೆಡಿಎಸ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

‘ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದಲ್ಲಿ ಜಾತ್ಯತೀತಿ ಜನತಾದಳ ಮತ್ತು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದೆ. ಬಿಜೆಪಿ ಹಿರಿಯ ನಾಯಕರಾದ ಸಿಟಿ ರವಿ ಅವರು, ಮಾಜಿ ಶಾಸಕ ಪ್ರೀತಂಗೌಡ, ನಮ್ಮ ಪಕ್ಷದ ಮಾಜಿ ಶಾಸಕರಾದ ಸುರೇಶ್ ಗೌಡ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ ಸೇರಿ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು ಹಾಗೂ ಅಸಂಖ್ಯಾತ ಕಾರ್ಯಕರ್ತರು ಭಾಗಿಯಾಗಿದ್ದರು’ ಎಂದು ಹೆಚ್.ಡಿ ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಸಹಿತಿ ಪೋಸ್ಟ್ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ‘ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ; ಒಬ್ಬರ ಕಣ್ಣಿಗೆ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣು ತಂದು ಕೊಡುತ್ತಿತ್ತಾ? ಪೊಲೀಸರೇ ಎಚ್ಚರವಾಗಿರಿ. ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ ನಾನು ನೋಡುತ್ತೇನೆ. ಯಾವಾನೋ ಹೇಳುತ್ತಾನೆ ಅಂತಾ ಹೇಗೆ ಬೇಕೋ ಹಾಗೇ ಕೆಲಸ ಮಾಡುವುದನ್ನು ನಾವು ಒಪ್ಪಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಕೆರಗೋಡು ಗ್ರಾಮದ ಧ್ವಜ ವಿವಾದದ ಸಂಘರ್ಷಕ್ಕೆ ಸರ್ಕಾರವೆ ಕಾರಣ. ಈ ಘಟನೆಗೆಲ್ಲ ಕಾರಣ ಮಂಡ್ಯ ಜಿಲ್ಲಾಧಿಕಾರಿ; ಅವರನ್ನು ಮೊದಲು ಇಲ್ಲಿಂದ ಹೊರಗೆ ಕಳುಹಿಸಿ. ಹನುಮಂತನ‌ ಕೆಣಕ್ಕಿದ್ದಕ್ಕೆ ಲಂಕ ದಹನವಾಯ್ತು. ಅದೇ ರೀತಿ ನಿಮ್ಮ ಅವನತಿ ಆಗುತ್ತದೆ. ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು. ಇಲ್ಲಿ ನಡೆದಿರುವ ಲಾಠಿ ಚಾರ್ಜ್ ಸರ್ಕಾರದ ರಾಕ್ಷಸಿ ಪ್ರವೃತ್ತಿ ತೋರಿಸುತ್ತದೆ. ನಿಮ್ಮ ತಪ್ಪು ತಿದ್ದಿಕೊಳ್ಳಿ. ರಾಜಕೀಯ ಮಾಡಿದ್ದು ನೀವು. ಅಧಿಕಾರದ ಅಮಲಿನಲ್ಲಿ ದೈಹಿಕ ಹಲ್ಲೆ ಮಾಡಿಸಿದ್ದೀರಿ. ಈ ಹೋರಾಟ ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರಿಗೆ ದೈಹಿಕವಾಗಿ ಪೆಟ್ಟು ಕೊಟ್ಟಿದ್ದೀರಿ. ಇದಕ್ಕೆ ಅಧಿಕಾರಿಗಳಿಗೆ ಪ್ರಾಯಶ್ಚಿತ್ತವಾಗಲೇ ಬೇಕು’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...