Homeಮುಖಪುಟಕೇರಳ| 10 ಜನ ಶಂಕಿತ ಮಾದಕ ವಸ್ತು ಬಳಕೆದಾರರಿಗೆ ಎಚ್‌ಐವಿ ಪಾಸಿಟಿವ್!

ಕೇರಳ| 10 ಜನ ಶಂಕಿತ ಮಾದಕ ವಸ್ತು ಬಳಕೆದಾರರಿಗೆ ಎಚ್‌ಐವಿ ಪಾಸಿಟಿವ್!

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಮತ್ತು ಮಾದಕ ವಸ್ತು ಬಳಸುವ ಯುವಕರು ಸೇರಿದಂತೆ ಹತ್ತು ಜನರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ.

ಕೇರಳ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ (ಕೆಎಸ್‌ಎಸಿಎಸ್) ಪ್ರಕಾರ, ಕೇರಳದಲ್ಲಿ ಪ್ರತಿ ತಿಂಗಳು ಸರಾಸರಿ 130 ರಿಂದ 140 ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಹೊಸದಾಗಿ ಪತ್ತೆಯಾಗುತ್ತಿರುವ ಎಚ್‌ಐವಿ ಪಾಸಿಟಿವ್ ಪ್ರಕರಣಗಳಲ್ಲಿ 18-25 ವರ್ಷ ವಯಸ್ಸಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕಂಡುಬಂದಿದೆ. ಮಾದಕ ವಸ್ತು ಸೇವನೆಯೇ ಪ್ರಮುಖ ಕಾರಣವೆಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿ ಎಚ್‌ಐವಿ ಚಿಕಿತ್ಸೆ ಪಡೆಯುತ್ತಿರುವ ಒಟ್ಟು ವ್ಯಕ್ತಿಗಳು ಸುಮಾರು 17,000.

ಕೆಎಸ್‌ಎಸಿಎಸ್ ನಡೆಸಿದ ಸ್ಕ್ರೀನಿಂಗ್ ಸಮಯದಲ್ಲಿ ಮಲಪ್ಪುರಂನಲ್ಲಿ ಈ ಗುಂಪನ್ನು ಗುರುತಿಸಲಾಯಿತು. ಅವರು ಮಾದಕ ವಸ್ತು ಸೇವನೆಗಾಗಿ ಸಿರಿಂಜ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಶಂಕಿಸಲಾಗಿದೆ.

ಹೆಚ್ಚಿನ ವ್ಯಕ್ತಿಗಳು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಕಂಡುಹಿಡಿಯಲು ಮತ್ತಷ್ಟು ಸ್ಕ್ರೀನಿಂಗ್ ನಡೆಸಲಾಗುತ್ತಿದೆ ಎಂದು ಮಲಪ್ಪುರಂ ಜಿಲ್ಲಾ ವೈದ್ಯಾಧಿಕಾರಿ ಆರ್ ರೇಣುಕಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೇರಳದಲ್ಲಿ ಮಾದಕ ವಸ್ತು ಸೇವನೆಯಲ್ಲಿ, ವಿಶೇಷವಾಗಿ ಯುವಕರಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಕೊಲೆಗಳಂತಹ ಗಂಭೀರ ಅಪರಾಧಗಳಲ್ಲಿ ಮಾದಕ ವ್ಯಸನಿಗಳು ಭಾಗಿಯಾಗಿರುವ ಹಲವಾರು ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲವು ವಾರಗಳಿಂದ ರಾಜ್ಯಾದ್ಯಂತ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್‌ಎಸಿಎಸ್‌, ಶಿಕ್ಷಣ ಸಂಸ್ಥೆಗಳ ಮೂಲಕ ಮತ್ತು ವಲಸೆ ಕಾರ್ಮಿಕರಲ್ಲಿ ಬೃಹತ್ ಜಾಗೃತಿ ಚಟುವಟಿಕೆಗಳನ್ನು ನಡೆಸುತ್ತಿದೆ. ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವರು ತಮ್ಮ ಗುರುತನ್ನು ಬಹಿರಂಗಪಡಿಸಲು ಸಿದ್ದರಿಲ್ಲದೆ ಇರುವುದು ವಲಸೆ ಕಾರ್ಮಿಕರನ್ನು ಪರೀಕ್ಷಿಸುವಲ್ಲಿ ಎದುರಿಸುತ್ತಿರುವ ಪ್ರಮುಖ ಸವಾಲುಗಳಾಗಿವೆ.

ಕೇರಳದಲ್ಲಿ ಪತ್ತೆಯಾಗುತ್ತಿರುವ ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳಲ್ಲಿ ಲೈಂಗಿಕ ಕಾರ್ಯಕರ್ತರು ಹಾಗೂ ಸಲಿಂಗಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕಂಡುಬಂದಿದೆ.

ನಕಲಿ ಶಾಲೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಿಲ್ಲ ಅವಕಾಶ: ಸಿಬಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...