Homeಮುಖಪುಟಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

- Advertisement -
- Advertisement -

ರಾಜ್ಯ ಸಾಕ್ಷರತಾ ಮಿಷನ್ ಅಡಿಯಲ್ಲಿ ನೀಡುವ ಸಮಾನ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ 12ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸಿದ ನಂತರ 18 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹತೆ ಪಡೆದಿದ್ದಾರೆ.

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

ಈ 18 ಜನ ಮಂಗಳಮುಖಿಯರು, ಮಾಸಿಕ ವಿದ್ಯಾರ್ಥಿವೇತನದೊಂದಿಗೆ 6 ನೇ ತರಗತಿಯಿಂದ 12ನೇ ತರಗತಿವರೆಗೆ ಉಚಿತವಾಗಿ ಸಮಾನ ಶಿಕ್ಷಣ ನೀಡುವ ‘ಸಮನ್ವಯ’ ಯೋಜನೆಯ ಭಾಗವಾಗಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಸಿಕ 1,000 ವಿದ್ಯಾರ್ಥಿವೇತನವನ್ನು ನೀಡಿದರೆ, ಉನ್ನತ ಮಾಧ್ಯಮಿಕ ವಿದ್ಯಾರ್ಥಿಗಳು ಪ್ರತಿ ತಿಂಗಳು 1,250 ರೂ. ವಿದ್ಯಾರ್ಥಿ ವೇತನ ಪಡೆಯುತ್ತಾರೆ.

ಹನ್ನೆರಡನೇ ತರಗತಿಯ ಸಮಾನ ಶಿಕ್ಷಣ ಕಾರ್ಯಕ್ರಮವನ್ನು ಉನ್ನತ ಮಾಧ್ಯಮಿಕ ಕೋರ್ಸ್‌ಗೆ ಸಮನಾಗಿ ಮಾಡಲಾಗಿರುವುದರಿಂದ, ಇದರಲ್ಲಿ ಪಾಸಾದ ಎಲ್ಲಾ ಅಭ್ಯರ್ಥಿಗಳು ಉನ್ನತ ವ್ಯಾಸಂಗಕ್ಕೆ ದಾಖಲಾಗಬಹುದು.

ಇದನ್ನೂ ಓದಿ: ಇವರ ಹೋರಾಟದ ಬದುಕಿಗೆ ನಮ್ಮದೊಂದು ಸಲಾಮ್

ಪರೀಕ್ಷೆಗೆ ಒಟ್ಟು 22 ಅಭ್ಯರ್ಥಿಗಳು ಹಾಜರಾಗಿದ್ದು, 18 ಮಂದಿ ಯಶಸ್ವಿಯಾಗಿ ಪಾಸಾಗಿದ್ದಾರೆ. ಪಥನಂತಿಟ್ಟಾದಲ್ಲಿ 8 ಅಭ್ಯರ್ಥಿಗಳು ಪರೀಕ್ಷೆ ಬರೆದು ಪಾಸಾಗಿದ್ದರೆ, ತಿರುವನಂತಪುರಂ ನಲ್ಲಿ 5, ಕೊಲ್ಲಂನಲ್ಲಿ 2 ಮತ್ತು ತ್ರಿಶೂರ್, ಕೋಝಿಕೋಡ್ ಕಣ್ಣೂರ್‌‌ನಲ್ಲಿ ತಲಾ ಒಬ್ಬರು ಪಾಸಾಗಿದ್ದಾರೆ.

ಪಥನಂತಿಟ್ಟಾ ಜಿಲ್ಲೆಯಲ್ಲಿ, ರಾಜ್ಯ ಸಾಕ್ಷರತಾ ಮಿಷನ್ ಸಮಾನ ಶಿಕ್ಷಣ ಕಾರ್ಯಕ್ರಮಕ್ಕೆ ಸೇರಿಕೊಂಡವರಿಗೆ ಉಚಿತ ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಿತ್ತು.

ಈ ಸಮನ್ವಯ ಯೋಜನೆ 2018 ರಲ್ಲಿ ಪ್ರಾರಂಭವಾದಾಗಿನಿಂದ, 39 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿದ್ದಾರೆ. ಪ್ರಸ್ತುತ 30 ಮಂಗಳಮುಖಿಯರು ಹತ್ತನೇ ತರಗತಿಯ ಈ ಕಾರ್ಯಕ್ರಮದಡಿಯಲ್ಲಿ ದಾಖಲಾಗಿದ್ದರೆ, ಹನ್ನೆರಡನೇ ತರಗತಿಗೆ 62 ದಾಖಲಾತಿಗಳು ಆಗಿವೆ.

ಬಾಲ್ಯದಲ್ಲಿಯೇ ಲಿಂಗ ಗುರುತಿಸುವಿಕೆಯ ಕಾರಣದಿಂದ ಔಪಚಾರಿಕ ಶಿಕ್ಷಣ ಮತ್ತು ಅನೌಪಚಾರಿಕ ಶಿಕ್ಷಣ ಎರಡರಿಂದಲೂ ವಂಚಿತವಾಗುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಇತ್ತೀಚೆಗೆ ತನ್ನೆಲ್ಲಾ ಸಂಕಷ್ಟಗಳನ್ನೂ ಮೀರಿಕೊಂಡು ಮುನ್ನೆಲೆಗೆ ಬರುತ್ತಿದೆ. ಇದಕ್ಕೆ ಕರ್ನಾಟಕ ಮತ್ತು ಕೇರಳದಂತಹ ರಾಜ್ಯಗಳೇ ಉತ್ತಮ ಉದಾಹರಣೆಗಳು. ಅದಾಗ್ಯೂ ಇಂದಿಗೂ ಅಸುರಕ್ಷಿತ ವಾತಾವರಣದಲ್ಲಿ ಮತ್ತು ಅಪಾಯಕಾರಿಯಾಗಿಯಾಗಿ ಬದುಕು ಅನೇಕ ಮಂಗಳಮುಖಿಯರು ನಮ್ಮ ಸುತ್ತಲೇ ಇದ್ದಾರೆ.

ಇಂತಹವರ ನಡುವೆ ಸಾಧನೆ ಮಾಡುವ ಮಂಗಳಮುಖಿಯರು ನಿಜಕ್ಕೂ ಆಶಾದಾಯಕವಾಗಿ ಕಾಣುತ್ತಾರೆ.


ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...