Homeಮುಖಪುಟಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

- Advertisement -
- Advertisement -

ರಾಜ್ಯ ಸಾಕ್ಷರತಾ ಮಿಷನ್ ಅಡಿಯಲ್ಲಿ ನೀಡುವ ಸಮಾನ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ 12ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸಿದ ನಂತರ 18 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹತೆ ಪಡೆದಿದ್ದಾರೆ.

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

ಈ 18 ಜನ ಮಂಗಳಮುಖಿಯರು, ಮಾಸಿಕ ವಿದ್ಯಾರ್ಥಿವೇತನದೊಂದಿಗೆ 6 ನೇ ತರಗತಿಯಿಂದ 12ನೇ ತರಗತಿವರೆಗೆ ಉಚಿತವಾಗಿ ಸಮಾನ ಶಿಕ್ಷಣ ನೀಡುವ ‘ಸಮನ್ವಯ’ ಯೋಜನೆಯ ಭಾಗವಾಗಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಸಿಕ 1,000 ವಿದ್ಯಾರ್ಥಿವೇತನವನ್ನು ನೀಡಿದರೆ, ಉನ್ನತ ಮಾಧ್ಯಮಿಕ ವಿದ್ಯಾರ್ಥಿಗಳು ಪ್ರತಿ ತಿಂಗಳು 1,250 ರೂ. ವಿದ್ಯಾರ್ಥಿ ವೇತನ ಪಡೆಯುತ್ತಾರೆ.

ಹನ್ನೆರಡನೇ ತರಗತಿಯ ಸಮಾನ ಶಿಕ್ಷಣ ಕಾರ್ಯಕ್ರಮವನ್ನು ಉನ್ನತ ಮಾಧ್ಯಮಿಕ ಕೋರ್ಸ್‌ಗೆ ಸಮನಾಗಿ ಮಾಡಲಾಗಿರುವುದರಿಂದ, ಇದರಲ್ಲಿ ಪಾಸಾದ ಎಲ್ಲಾ ಅಭ್ಯರ್ಥಿಗಳು ಉನ್ನತ ವ್ಯಾಸಂಗಕ್ಕೆ ದಾಖಲಾಗಬಹುದು.

ಇದನ್ನೂ ಓದಿ: ಇವರ ಹೋರಾಟದ ಬದುಕಿಗೆ ನಮ್ಮದೊಂದು ಸಲಾಮ್

ಪರೀಕ್ಷೆಗೆ ಒಟ್ಟು 22 ಅಭ್ಯರ್ಥಿಗಳು ಹಾಜರಾಗಿದ್ದು, 18 ಮಂದಿ ಯಶಸ್ವಿಯಾಗಿ ಪಾಸಾಗಿದ್ದಾರೆ. ಪಥನಂತಿಟ್ಟಾದಲ್ಲಿ 8 ಅಭ್ಯರ್ಥಿಗಳು ಪರೀಕ್ಷೆ ಬರೆದು ಪಾಸಾಗಿದ್ದರೆ, ತಿರುವನಂತಪುರಂ ನಲ್ಲಿ 5, ಕೊಲ್ಲಂನಲ್ಲಿ 2 ಮತ್ತು ತ್ರಿಶೂರ್, ಕೋಝಿಕೋಡ್ ಕಣ್ಣೂರ್‌‌ನಲ್ಲಿ ತಲಾ ಒಬ್ಬರು ಪಾಸಾಗಿದ್ದಾರೆ.

ಪಥನಂತಿಟ್ಟಾ ಜಿಲ್ಲೆಯಲ್ಲಿ, ರಾಜ್ಯ ಸಾಕ್ಷರತಾ ಮಿಷನ್ ಸಮಾನ ಶಿಕ್ಷಣ ಕಾರ್ಯಕ್ರಮಕ್ಕೆ ಸೇರಿಕೊಂಡವರಿಗೆ ಉಚಿತ ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಿತ್ತು.

ಈ ಸಮನ್ವಯ ಯೋಜನೆ 2018 ರಲ್ಲಿ ಪ್ರಾರಂಭವಾದಾಗಿನಿಂದ, 39 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿದ್ದಾರೆ. ಪ್ರಸ್ತುತ 30 ಮಂಗಳಮುಖಿಯರು ಹತ್ತನೇ ತರಗತಿಯ ಈ ಕಾರ್ಯಕ್ರಮದಡಿಯಲ್ಲಿ ದಾಖಲಾಗಿದ್ದರೆ, ಹನ್ನೆರಡನೇ ತರಗತಿಗೆ 62 ದಾಖಲಾತಿಗಳು ಆಗಿವೆ.

ಬಾಲ್ಯದಲ್ಲಿಯೇ ಲಿಂಗ ಗುರುತಿಸುವಿಕೆಯ ಕಾರಣದಿಂದ ಔಪಚಾರಿಕ ಶಿಕ್ಷಣ ಮತ್ತು ಅನೌಪಚಾರಿಕ ಶಿಕ್ಷಣ ಎರಡರಿಂದಲೂ ವಂಚಿತವಾಗುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಇತ್ತೀಚೆಗೆ ತನ್ನೆಲ್ಲಾ ಸಂಕಷ್ಟಗಳನ್ನೂ ಮೀರಿಕೊಂಡು ಮುನ್ನೆಲೆಗೆ ಬರುತ್ತಿದೆ. ಇದಕ್ಕೆ ಕರ್ನಾಟಕ ಮತ್ತು ಕೇರಳದಂತಹ ರಾಜ್ಯಗಳೇ ಉತ್ತಮ ಉದಾಹರಣೆಗಳು. ಅದಾಗ್ಯೂ ಇಂದಿಗೂ ಅಸುರಕ್ಷಿತ ವಾತಾವರಣದಲ್ಲಿ ಮತ್ತು ಅಪಾಯಕಾರಿಯಾಗಿಯಾಗಿ ಬದುಕು ಅನೇಕ ಮಂಗಳಮುಖಿಯರು ನಮ್ಮ ಸುತ್ತಲೇ ಇದ್ದಾರೆ.

ಇಂತಹವರ ನಡುವೆ ಸಾಧನೆ ಮಾಡುವ ಮಂಗಳಮುಖಿಯರು ನಿಜಕ್ಕೂ ಆಶಾದಾಯಕವಾಗಿ ಕಾಣುತ್ತಾರೆ.


ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...