Homeಮುಖಪುಟಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

- Advertisement -
- Advertisement -

ರಾಜ್ಯ ಸಾಕ್ಷರತಾ ಮಿಷನ್ ಅಡಿಯಲ್ಲಿ ನೀಡುವ ಸಮಾನ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ 12ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸಿದ ನಂತರ 18 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹತೆ ಪಡೆದಿದ್ದಾರೆ.

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

ಈ 18 ಜನ ಮಂಗಳಮುಖಿಯರು, ಮಾಸಿಕ ವಿದ್ಯಾರ್ಥಿವೇತನದೊಂದಿಗೆ 6 ನೇ ತರಗತಿಯಿಂದ 12ನೇ ತರಗತಿವರೆಗೆ ಉಚಿತವಾಗಿ ಸಮಾನ ಶಿಕ್ಷಣ ನೀಡುವ ‘ಸಮನ್ವಯ’ ಯೋಜನೆಯ ಭಾಗವಾಗಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಸಿಕ 1,000 ವಿದ್ಯಾರ್ಥಿವೇತನವನ್ನು ನೀಡಿದರೆ, ಉನ್ನತ ಮಾಧ್ಯಮಿಕ ವಿದ್ಯಾರ್ಥಿಗಳು ಪ್ರತಿ ತಿಂಗಳು 1,250 ರೂ. ವಿದ್ಯಾರ್ಥಿ ವೇತನ ಪಡೆಯುತ್ತಾರೆ.

ಹನ್ನೆರಡನೇ ತರಗತಿಯ ಸಮಾನ ಶಿಕ್ಷಣ ಕಾರ್ಯಕ್ರಮವನ್ನು ಉನ್ನತ ಮಾಧ್ಯಮಿಕ ಕೋರ್ಸ್‌ಗೆ ಸಮನಾಗಿ ಮಾಡಲಾಗಿರುವುದರಿಂದ, ಇದರಲ್ಲಿ ಪಾಸಾದ ಎಲ್ಲಾ ಅಭ್ಯರ್ಥಿಗಳು ಉನ್ನತ ವ್ಯಾಸಂಗಕ್ಕೆ ದಾಖಲಾಗಬಹುದು.

ಇದನ್ನೂ ಓದಿ: ಇವರ ಹೋರಾಟದ ಬದುಕಿಗೆ ನಮ್ಮದೊಂದು ಸಲಾಮ್

ಪರೀಕ್ಷೆಗೆ ಒಟ್ಟು 22 ಅಭ್ಯರ್ಥಿಗಳು ಹಾಜರಾಗಿದ್ದು, 18 ಮಂದಿ ಯಶಸ್ವಿಯಾಗಿ ಪಾಸಾಗಿದ್ದಾರೆ. ಪಥನಂತಿಟ್ಟಾದಲ್ಲಿ 8 ಅಭ್ಯರ್ಥಿಗಳು ಪರೀಕ್ಷೆ ಬರೆದು ಪಾಸಾಗಿದ್ದರೆ, ತಿರುವನಂತಪುರಂ ನಲ್ಲಿ 5, ಕೊಲ್ಲಂನಲ್ಲಿ 2 ಮತ್ತು ತ್ರಿಶೂರ್, ಕೋಝಿಕೋಡ್ ಕಣ್ಣೂರ್‌‌ನಲ್ಲಿ ತಲಾ ಒಬ್ಬರು ಪಾಸಾಗಿದ್ದಾರೆ.

ಪಥನಂತಿಟ್ಟಾ ಜಿಲ್ಲೆಯಲ್ಲಿ, ರಾಜ್ಯ ಸಾಕ್ಷರತಾ ಮಿಷನ್ ಸಮಾನ ಶಿಕ್ಷಣ ಕಾರ್ಯಕ್ರಮಕ್ಕೆ ಸೇರಿಕೊಂಡವರಿಗೆ ಉಚಿತ ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಿತ್ತು.

ಈ ಸಮನ್ವಯ ಯೋಜನೆ 2018 ರಲ್ಲಿ ಪ್ರಾರಂಭವಾದಾಗಿನಿಂದ, 39 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿದ್ದಾರೆ. ಪ್ರಸ್ತುತ 30 ಮಂಗಳಮುಖಿಯರು ಹತ್ತನೇ ತರಗತಿಯ ಈ ಕಾರ್ಯಕ್ರಮದಡಿಯಲ್ಲಿ ದಾಖಲಾಗಿದ್ದರೆ, ಹನ್ನೆರಡನೇ ತರಗತಿಗೆ 62 ದಾಖಲಾತಿಗಳು ಆಗಿವೆ.

ಬಾಲ್ಯದಲ್ಲಿಯೇ ಲಿಂಗ ಗುರುತಿಸುವಿಕೆಯ ಕಾರಣದಿಂದ ಔಪಚಾರಿಕ ಶಿಕ್ಷಣ ಮತ್ತು ಅನೌಪಚಾರಿಕ ಶಿಕ್ಷಣ ಎರಡರಿಂದಲೂ ವಂಚಿತವಾಗುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಇತ್ತೀಚೆಗೆ ತನ್ನೆಲ್ಲಾ ಸಂಕಷ್ಟಗಳನ್ನೂ ಮೀರಿಕೊಂಡು ಮುನ್ನೆಲೆಗೆ ಬರುತ್ತಿದೆ. ಇದಕ್ಕೆ ಕರ್ನಾಟಕ ಮತ್ತು ಕೇರಳದಂತಹ ರಾಜ್ಯಗಳೇ ಉತ್ತಮ ಉದಾಹರಣೆಗಳು. ಅದಾಗ್ಯೂ ಇಂದಿಗೂ ಅಸುರಕ್ಷಿತ ವಾತಾವರಣದಲ್ಲಿ ಮತ್ತು ಅಪಾಯಕಾರಿಯಾಗಿಯಾಗಿ ಬದುಕು ಅನೇಕ ಮಂಗಳಮುಖಿಯರು ನಮ್ಮ ಸುತ್ತಲೇ ಇದ್ದಾರೆ.

ಇಂತಹವರ ನಡುವೆ ಸಾಧನೆ ಮಾಡುವ ಮಂಗಳಮುಖಿಯರು ನಿಜಕ್ಕೂ ಆಶಾದಾಯಕವಾಗಿ ಕಾಣುತ್ತಾರೆ.


ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...