Homeಮುಖಪುಟಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

- Advertisement -
- Advertisement -

ರಾಜ್ಯ ಸಾಕ್ಷರತಾ ಮಿಷನ್ ಅಡಿಯಲ್ಲಿ ನೀಡುವ ಸಮಾನ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ 12ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸಿದ ನಂತರ 18 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹತೆ ಪಡೆದಿದ್ದಾರೆ.

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

ಈ 18 ಜನ ಮಂಗಳಮುಖಿಯರು, ಮಾಸಿಕ ವಿದ್ಯಾರ್ಥಿವೇತನದೊಂದಿಗೆ 6 ನೇ ತರಗತಿಯಿಂದ 12ನೇ ತರಗತಿವರೆಗೆ ಉಚಿತವಾಗಿ ಸಮಾನ ಶಿಕ್ಷಣ ನೀಡುವ ‘ಸಮನ್ವಯ’ ಯೋಜನೆಯ ಭಾಗವಾಗಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಸಿಕ 1,000 ವಿದ್ಯಾರ್ಥಿವೇತನವನ್ನು ನೀಡಿದರೆ, ಉನ್ನತ ಮಾಧ್ಯಮಿಕ ವಿದ್ಯಾರ್ಥಿಗಳು ಪ್ರತಿ ತಿಂಗಳು 1,250 ರೂ. ವಿದ್ಯಾರ್ಥಿ ವೇತನ ಪಡೆಯುತ್ತಾರೆ.

ಹನ್ನೆರಡನೇ ತರಗತಿಯ ಸಮಾನ ಶಿಕ್ಷಣ ಕಾರ್ಯಕ್ರಮವನ್ನು ಉನ್ನತ ಮಾಧ್ಯಮಿಕ ಕೋರ್ಸ್‌ಗೆ ಸಮನಾಗಿ ಮಾಡಲಾಗಿರುವುದರಿಂದ, ಇದರಲ್ಲಿ ಪಾಸಾದ ಎಲ್ಲಾ ಅಭ್ಯರ್ಥಿಗಳು ಉನ್ನತ ವ್ಯಾಸಂಗಕ್ಕೆ ದಾಖಲಾಗಬಹುದು.

ಇದನ್ನೂ ಓದಿ: ಇವರ ಹೋರಾಟದ ಬದುಕಿಗೆ ನಮ್ಮದೊಂದು ಸಲಾಮ್

ಪರೀಕ್ಷೆಗೆ ಒಟ್ಟು 22 ಅಭ್ಯರ್ಥಿಗಳು ಹಾಜರಾಗಿದ್ದು, 18 ಮಂದಿ ಯಶಸ್ವಿಯಾಗಿ ಪಾಸಾಗಿದ್ದಾರೆ. ಪಥನಂತಿಟ್ಟಾದಲ್ಲಿ 8 ಅಭ್ಯರ್ಥಿಗಳು ಪರೀಕ್ಷೆ ಬರೆದು ಪಾಸಾಗಿದ್ದರೆ, ತಿರುವನಂತಪುರಂ ನಲ್ಲಿ 5, ಕೊಲ್ಲಂನಲ್ಲಿ 2 ಮತ್ತು ತ್ರಿಶೂರ್, ಕೋಝಿಕೋಡ್ ಕಣ್ಣೂರ್‌‌ನಲ್ಲಿ ತಲಾ ಒಬ್ಬರು ಪಾಸಾಗಿದ್ದಾರೆ.

ಪಥನಂತಿಟ್ಟಾ ಜಿಲ್ಲೆಯಲ್ಲಿ, ರಾಜ್ಯ ಸಾಕ್ಷರತಾ ಮಿಷನ್ ಸಮಾನ ಶಿಕ್ಷಣ ಕಾರ್ಯಕ್ರಮಕ್ಕೆ ಸೇರಿಕೊಂಡವರಿಗೆ ಉಚಿತ ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಿತ್ತು.

ಈ ಸಮನ್ವಯ ಯೋಜನೆ 2018 ರಲ್ಲಿ ಪ್ರಾರಂಭವಾದಾಗಿನಿಂದ, 39 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿದ್ದಾರೆ. ಪ್ರಸ್ತುತ 30 ಮಂಗಳಮುಖಿಯರು ಹತ್ತನೇ ತರಗತಿಯ ಈ ಕಾರ್ಯಕ್ರಮದಡಿಯಲ್ಲಿ ದಾಖಲಾಗಿದ್ದರೆ, ಹನ್ನೆರಡನೇ ತರಗತಿಗೆ 62 ದಾಖಲಾತಿಗಳು ಆಗಿವೆ.

ಬಾಲ್ಯದಲ್ಲಿಯೇ ಲಿಂಗ ಗುರುತಿಸುವಿಕೆಯ ಕಾರಣದಿಂದ ಔಪಚಾರಿಕ ಶಿಕ್ಷಣ ಮತ್ತು ಅನೌಪಚಾರಿಕ ಶಿಕ್ಷಣ ಎರಡರಿಂದಲೂ ವಂಚಿತವಾಗುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಇತ್ತೀಚೆಗೆ ತನ್ನೆಲ್ಲಾ ಸಂಕಷ್ಟಗಳನ್ನೂ ಮೀರಿಕೊಂಡು ಮುನ್ನೆಲೆಗೆ ಬರುತ್ತಿದೆ. ಇದಕ್ಕೆ ಕರ್ನಾಟಕ ಮತ್ತು ಕೇರಳದಂತಹ ರಾಜ್ಯಗಳೇ ಉತ್ತಮ ಉದಾಹರಣೆಗಳು. ಅದಾಗ್ಯೂ ಇಂದಿಗೂ ಅಸುರಕ್ಷಿತ ವಾತಾವರಣದಲ್ಲಿ ಮತ್ತು ಅಪಾಯಕಾರಿಯಾಗಿಯಾಗಿ ಬದುಕು ಅನೇಕ ಮಂಗಳಮುಖಿಯರು ನಮ್ಮ ಸುತ್ತಲೇ ಇದ್ದಾರೆ.

ಇಂತಹವರ ನಡುವೆ ಸಾಧನೆ ಮಾಡುವ ಮಂಗಳಮುಖಿಯರು ನಿಜಕ್ಕೂ ಆಶಾದಾಯಕವಾಗಿ ಕಾಣುತ್ತಾರೆ.


ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...