Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...