Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...