Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...