Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...