Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...