Homeಮುಖಪುಟಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

ಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

- Advertisement -
- Advertisement -

15 ವರ್ಷದ ಬಾಲಕನೊಬ್ಬ 23 ವರ್ಷದ ಯುವತಿಯನ್ನು ಬಾಳೆ ತೋಟಕ್ಕೆ ಎಳೆದೊಯ್ದು, ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನಷ ಘಟನೆ ಕೇರಳದ ಕುಂಡೊಟ್ಟಿಯ ಕೂಟ್ಟುಕ್ಕರ ಎಂಬಲ್ಲಿ ಸೋಮವಾರ ನಡೆದಿದೆ.

ಜಿಲ್ಲಾ ಮಟ್ಟದ ಜೂಡೋ ಚಾಂಪಿಯನ್ ಆಗಿರುವ 10 ನೇ ತರಗತಿ ವಿದ್ಯಾರ್ಥಿಯೇ ಆರೋಪಿ ಎಂದು ಯುವತಿ ನೀಡಿದ ವಿವರಣೆ ಮತ್ತು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿತ್ತು. ಮಂಗಳವಾರ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದಾದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಸೋಮವಾರ ಮಧ್ಯಾಹ್ನ 12.45ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ತಾನು ಓದುತ್ತಿರುವ ಕುಂಡೊಟ್ಟಿಯಲ್ಲಿರುವ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ತನ್ನ ಮನೆಯಿಂದ ಕೂಟ್ಟುಕ್ಕರ ಜಂಕ್ಷನ್‌ಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಯುವತಿಯನ್ನು ಬಾಲಕ ಹಿಂಬಾಲಿಸಿಕೊಂಡು ಹಿಂದಿನಿಂದ ಹಿಡಿದು ಬಾಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಯತ್ನಿಸಿದ್ದಾನೆ. ಈ ವೇಳೆ ಯುವತಿಯು ವಿರೋಧಿಸಿದಾಗ ಕಲ್ಲಿನಿಂದ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ, ಯುವತಿ ಮೇಲಂಗಿಯನ್ನು ಬಳಸಿ ಕೈಗಳನ್ನು ಕಟ್ಟಿದ್ದಾನೆ.

“ಬಾಲಕ, ತನ್ನ ಮೇಲೆ ದಾಳಿ ಮಾಡಲು ಮತ್ತೊಂದು ಕಲ್ಲನ್ನು ಹುಡುಕುತ್ತಿದ್ದಾಗ, ಯುವತಿ ಅವನ ಹಿಡಿತದಿಂದ ತಪ್ಪಿಕೊಂಡು ಹತ್ತಿರದ ಮನೆಗೆ ಓಡಿಹೋದ್ದಾರೆ. ಮನೆಯವರು ಬಾಲಕನ್ನು ಬೆದರಿಸಿದಾಗ ಆತ ಓಡಿಹೋಗಿದ್ದಾನೆ” ಎಂದು ಕುಂಡೊಟ್ಟಿ ಪುರಸಭೆಯ ಕೂಟ್ಟುಕ್ಕರ ವಾರ್ಡ್ ಕೌನ್ಸಿಲರ್ ಉಮ್ಮರ್ ಫಾರೂಕ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

“ಯುವತಿಯ ಮುಖ ಊದಿಕೊಂಡಿತ್ತು. ದಾಳಿಕೋರ ಯುವತಿಯ ಉಡುಪನ್ನು ಹರಿದು ಹಾಕಿದ್ದ. ಸಂತ್ರಸ್ತ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಕುಂಡೊಟ್ಟಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದೆವು” ಎಂದು ಫಾರೂಕ್ ತಿಳಿಸಿದ್ದಾರೆ.

ಯುವತಿ ಸಾಮಾನ್ಯವಾಗಿ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ಜಂಕ್ಷನ್‌ನಲ್ಲಿ ಬಸ್‌ ಹತ್ತುತ್ತಾರೆ. ಅವರ ಮನೆಯಿಂದ, ಕೊಟ್ಟುಕ್ಕರ ಜಂಕ್ಷನ್‌ಗೆ ಹೋಗಲು ಅವರು ಒಂದು ಕಿಲೋಮೀಟರ್ ನಡೆಯಬೇಕು. ಜಂಕ್ಷನ್ ತಲುಪಲು ಅವರು ಸಾಮಾನ್ಯವಾಗಿ ಭತ್ತದ ಗದ್ದೆಗಳ ಮಧ್ಯೆ ಇರುವ ಕಾಲುದಾರಿಯಲ್ಲಿ ಓಡಾಡುತ್ತಾರೆ ಎಂದು ಫಾರೂಪ್ ವಿವರಿಸಿದ್ದಾರೆ.

ದಾಳಿಕೋರ ಹೇಗಿದ್ದ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂತ್ರಸ್ತೆ ವಿವರಿಸಿದ್ದಾರೆ. ಜೊತೆಗೆ ಆತನನ್ನು ಕಂಡರೆ ಗುರುತಿಸಬಹುದು  ಮತ್ತು ಮಲಯಾಳಂನಲ್ಲಿ ಮಾತನಾಡಿದ್ದನು. ಅವನನ್ನು ಕೆಲವು ಬಾರಿ ಈ ಪ್ರದೇಶದಲ್ಲಿ ನೋಡಿದ್ದೇನೆ ಎಂದು ತಿಳಿಸಿದ್ದರು.

ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಆತ ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಕೊಂಡೊಟ್ಟಿ ಇನ್ಸ್‌ಪೆಕ್ಟರ್ ಪ್ರಮೋದ್ ಎಂ ಸಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...