Homeಮುಖಪುಟಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

ಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

- Advertisement -
- Advertisement -

15 ವರ್ಷದ ಬಾಲಕನೊಬ್ಬ 23 ವರ್ಷದ ಯುವತಿಯನ್ನು ಬಾಳೆ ತೋಟಕ್ಕೆ ಎಳೆದೊಯ್ದು, ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನಷ ಘಟನೆ ಕೇರಳದ ಕುಂಡೊಟ್ಟಿಯ ಕೂಟ್ಟುಕ್ಕರ ಎಂಬಲ್ಲಿ ಸೋಮವಾರ ನಡೆದಿದೆ.

ಜಿಲ್ಲಾ ಮಟ್ಟದ ಜೂಡೋ ಚಾಂಪಿಯನ್ ಆಗಿರುವ 10 ನೇ ತರಗತಿ ವಿದ್ಯಾರ್ಥಿಯೇ ಆರೋಪಿ ಎಂದು ಯುವತಿ ನೀಡಿದ ವಿವರಣೆ ಮತ್ತು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿತ್ತು. ಮಂಗಳವಾರ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದಾದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಸೋಮವಾರ ಮಧ್ಯಾಹ್ನ 12.45ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ತಾನು ಓದುತ್ತಿರುವ ಕುಂಡೊಟ್ಟಿಯಲ್ಲಿರುವ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ತನ್ನ ಮನೆಯಿಂದ ಕೂಟ್ಟುಕ್ಕರ ಜಂಕ್ಷನ್‌ಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಯುವತಿಯನ್ನು ಬಾಲಕ ಹಿಂಬಾಲಿಸಿಕೊಂಡು ಹಿಂದಿನಿಂದ ಹಿಡಿದು ಬಾಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಯತ್ನಿಸಿದ್ದಾನೆ. ಈ ವೇಳೆ ಯುವತಿಯು ವಿರೋಧಿಸಿದಾಗ ಕಲ್ಲಿನಿಂದ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ, ಯುವತಿ ಮೇಲಂಗಿಯನ್ನು ಬಳಸಿ ಕೈಗಳನ್ನು ಕಟ್ಟಿದ್ದಾನೆ.

“ಬಾಲಕ, ತನ್ನ ಮೇಲೆ ದಾಳಿ ಮಾಡಲು ಮತ್ತೊಂದು ಕಲ್ಲನ್ನು ಹುಡುಕುತ್ತಿದ್ದಾಗ, ಯುವತಿ ಅವನ ಹಿಡಿತದಿಂದ ತಪ್ಪಿಕೊಂಡು ಹತ್ತಿರದ ಮನೆಗೆ ಓಡಿಹೋದ್ದಾರೆ. ಮನೆಯವರು ಬಾಲಕನ್ನು ಬೆದರಿಸಿದಾಗ ಆತ ಓಡಿಹೋಗಿದ್ದಾನೆ” ಎಂದು ಕುಂಡೊಟ್ಟಿ ಪುರಸಭೆಯ ಕೂಟ್ಟುಕ್ಕರ ವಾರ್ಡ್ ಕೌನ್ಸಿಲರ್ ಉಮ್ಮರ್ ಫಾರೂಕ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

“ಯುವತಿಯ ಮುಖ ಊದಿಕೊಂಡಿತ್ತು. ದಾಳಿಕೋರ ಯುವತಿಯ ಉಡುಪನ್ನು ಹರಿದು ಹಾಕಿದ್ದ. ಸಂತ್ರಸ್ತ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಕುಂಡೊಟ್ಟಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದೆವು” ಎಂದು ಫಾರೂಕ್ ತಿಳಿಸಿದ್ದಾರೆ.

ಯುವತಿ ಸಾಮಾನ್ಯವಾಗಿ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ಜಂಕ್ಷನ್‌ನಲ್ಲಿ ಬಸ್‌ ಹತ್ತುತ್ತಾರೆ. ಅವರ ಮನೆಯಿಂದ, ಕೊಟ್ಟುಕ್ಕರ ಜಂಕ್ಷನ್‌ಗೆ ಹೋಗಲು ಅವರು ಒಂದು ಕಿಲೋಮೀಟರ್ ನಡೆಯಬೇಕು. ಜಂಕ್ಷನ್ ತಲುಪಲು ಅವರು ಸಾಮಾನ್ಯವಾಗಿ ಭತ್ತದ ಗದ್ದೆಗಳ ಮಧ್ಯೆ ಇರುವ ಕಾಲುದಾರಿಯಲ್ಲಿ ಓಡಾಡುತ್ತಾರೆ ಎಂದು ಫಾರೂಪ್ ವಿವರಿಸಿದ್ದಾರೆ.

ದಾಳಿಕೋರ ಹೇಗಿದ್ದ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂತ್ರಸ್ತೆ ವಿವರಿಸಿದ್ದಾರೆ. ಜೊತೆಗೆ ಆತನನ್ನು ಕಂಡರೆ ಗುರುತಿಸಬಹುದು  ಮತ್ತು ಮಲಯಾಳಂನಲ್ಲಿ ಮಾತನಾಡಿದ್ದನು. ಅವನನ್ನು ಕೆಲವು ಬಾರಿ ಈ ಪ್ರದೇಶದಲ್ಲಿ ನೋಡಿದ್ದೇನೆ ಎಂದು ತಿಳಿಸಿದ್ದರು.

ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಆತ ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಕೊಂಡೊಟ್ಟಿ ಇನ್ಸ್‌ಪೆಕ್ಟರ್ ಪ್ರಮೋದ್ ಎಂ ಸಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...