Homeಮುಖಪುಟಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

ಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

- Advertisement -
- Advertisement -

15 ವರ್ಷದ ಬಾಲಕನೊಬ್ಬ 23 ವರ್ಷದ ಯುವತಿಯನ್ನು ಬಾಳೆ ತೋಟಕ್ಕೆ ಎಳೆದೊಯ್ದು, ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನಷ ಘಟನೆ ಕೇರಳದ ಕುಂಡೊಟ್ಟಿಯ ಕೂಟ್ಟುಕ್ಕರ ಎಂಬಲ್ಲಿ ಸೋಮವಾರ ನಡೆದಿದೆ.

ಜಿಲ್ಲಾ ಮಟ್ಟದ ಜೂಡೋ ಚಾಂಪಿಯನ್ ಆಗಿರುವ 10 ನೇ ತರಗತಿ ವಿದ್ಯಾರ್ಥಿಯೇ ಆರೋಪಿ ಎಂದು ಯುವತಿ ನೀಡಿದ ವಿವರಣೆ ಮತ್ತು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿತ್ತು. ಮಂಗಳವಾರ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದಾದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಸೋಮವಾರ ಮಧ್ಯಾಹ್ನ 12.45ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ತಾನು ಓದುತ್ತಿರುವ ಕುಂಡೊಟ್ಟಿಯಲ್ಲಿರುವ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ತನ್ನ ಮನೆಯಿಂದ ಕೂಟ್ಟುಕ್ಕರ ಜಂಕ್ಷನ್‌ಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಯುವತಿಯನ್ನು ಬಾಲಕ ಹಿಂಬಾಲಿಸಿಕೊಂಡು ಹಿಂದಿನಿಂದ ಹಿಡಿದು ಬಾಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಯತ್ನಿಸಿದ್ದಾನೆ. ಈ ವೇಳೆ ಯುವತಿಯು ವಿರೋಧಿಸಿದಾಗ ಕಲ್ಲಿನಿಂದ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ, ಯುವತಿ ಮೇಲಂಗಿಯನ್ನು ಬಳಸಿ ಕೈಗಳನ್ನು ಕಟ್ಟಿದ್ದಾನೆ.

“ಬಾಲಕ, ತನ್ನ ಮೇಲೆ ದಾಳಿ ಮಾಡಲು ಮತ್ತೊಂದು ಕಲ್ಲನ್ನು ಹುಡುಕುತ್ತಿದ್ದಾಗ, ಯುವತಿ ಅವನ ಹಿಡಿತದಿಂದ ತಪ್ಪಿಕೊಂಡು ಹತ್ತಿರದ ಮನೆಗೆ ಓಡಿಹೋದ್ದಾರೆ. ಮನೆಯವರು ಬಾಲಕನ್ನು ಬೆದರಿಸಿದಾಗ ಆತ ಓಡಿಹೋಗಿದ್ದಾನೆ” ಎಂದು ಕುಂಡೊಟ್ಟಿ ಪುರಸಭೆಯ ಕೂಟ್ಟುಕ್ಕರ ವಾರ್ಡ್ ಕೌನ್ಸಿಲರ್ ಉಮ್ಮರ್ ಫಾರೂಕ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

“ಯುವತಿಯ ಮುಖ ಊದಿಕೊಂಡಿತ್ತು. ದಾಳಿಕೋರ ಯುವತಿಯ ಉಡುಪನ್ನು ಹರಿದು ಹಾಕಿದ್ದ. ಸಂತ್ರಸ್ತ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಕುಂಡೊಟ್ಟಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದೆವು” ಎಂದು ಫಾರೂಕ್ ತಿಳಿಸಿದ್ದಾರೆ.

ಯುವತಿ ಸಾಮಾನ್ಯವಾಗಿ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ಜಂಕ್ಷನ್‌ನಲ್ಲಿ ಬಸ್‌ ಹತ್ತುತ್ತಾರೆ. ಅವರ ಮನೆಯಿಂದ, ಕೊಟ್ಟುಕ್ಕರ ಜಂಕ್ಷನ್‌ಗೆ ಹೋಗಲು ಅವರು ಒಂದು ಕಿಲೋಮೀಟರ್ ನಡೆಯಬೇಕು. ಜಂಕ್ಷನ್ ತಲುಪಲು ಅವರು ಸಾಮಾನ್ಯವಾಗಿ ಭತ್ತದ ಗದ್ದೆಗಳ ಮಧ್ಯೆ ಇರುವ ಕಾಲುದಾರಿಯಲ್ಲಿ ಓಡಾಡುತ್ತಾರೆ ಎಂದು ಫಾರೂಪ್ ವಿವರಿಸಿದ್ದಾರೆ.

ದಾಳಿಕೋರ ಹೇಗಿದ್ದ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂತ್ರಸ್ತೆ ವಿವರಿಸಿದ್ದಾರೆ. ಜೊತೆಗೆ ಆತನನ್ನು ಕಂಡರೆ ಗುರುತಿಸಬಹುದು  ಮತ್ತು ಮಲಯಾಳಂನಲ್ಲಿ ಮಾತನಾಡಿದ್ದನು. ಅವನನ್ನು ಕೆಲವು ಬಾರಿ ಈ ಪ್ರದೇಶದಲ್ಲಿ ನೋಡಿದ್ದೇನೆ ಎಂದು ತಿಳಿಸಿದ್ದರು.

ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಆತ ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಕೊಂಡೊಟ್ಟಿ ಇನ್ಸ್‌ಪೆಕ್ಟರ್ ಪ್ರಮೋದ್ ಎಂ ಸಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...