Homeಮುಖಪುಟಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

ಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ ವಲಸೆ ಕಾರ್ಮಿಕನೊಬ್ಬ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ಶುಕ್ರವಾರದಂದು ನಡೆದಿದೆ.

ಶನಿವಾರ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಗೋಣಿಚೀಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಬಳಿಕ ಅಪ್ರಾಪ್ತ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ

ಶುಕ್ರವಾರ ಬಾಲಕಿ ನಾಪತ್ತೆಯಾಗಿದ್ದು, ಆ ವ್ಯಕ್ತಿಯನ್ನು ತಡರಾತ್ರಿಯೇ ಬಂಧಿಸಲಾಗಿದೆ.

”ಈ ಬಗ್ಗೆ ಶುಕ್ರವಾರ ರಾತ್ರಿ 7.10 ಕ್ಕೆ ದೂರನ್ನು ಸ್ವೀಕರಿಸಿದ್ದೇವೆ ಮತ್ತು ಶುಕ್ರವಾರ ರಾತ್ರಿ 8 ಗಂಟೆಗೆ ಮೊದಲು ಎಫ್ಐಆರ್ ದಾಖಲಿಸಲಾಗಿದೆ. ನಮ್ಮ ತಂಡವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿತು ಮತ್ತು ಮಗು ಕಾರ್ಮಿಕನೊಂದಿಗೆ ಇರುವುದು ಕಂಡುಬಂದಿದೆ. ನಾವು ಅವನನ್ನು ರಾತ್ರಿ 9.30 ಕ್ಕೆ ಬಂಧಿಸಿದ್ದೇವೆ. ಆದರೆ, ಅವನು ಕುಡಿದ ಮತ್ತಿನಲ್ಲಿದ್ದನು ಆದರೆ ಮಗು ಅವನೊಂದಿಗೆ ಇರಲಿಲ್ಲ” ಎಂದು ಎರ್ನಾಕುಲಂ ಗ್ರಾಮಾಂತರ ಎಸ್ಪಿ, ವಿವೇಕ್ ಕುಮಾರ್ ತಿಳಿಸಿದ್ದಾರೆ.

ಮಗುವಿನ ಕುಟುಂಬ ವಾಸಿಸುತ್ತಿದ್ದ ಕಟ್ಟಡದ ಮೊದಲ ಮಹಡಿಯ ಕೊಠಡಿಯಲ್ಲಿ ತಂಗಿದ್ದ ಬಿಹಾರ ಮೂಲದ ಕಾರ್ಮಿಕನನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಆರೋಪಿಯನ್ನು ವಿಚಾರಣೆಗೊಳಪಡಿಸುವುದು ಮತ್ತು ವಿವರಗಳನ್ನು ಸಂಗ್ರಹಿಸುವುದು ಕಷ್ಟಕರವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

”ಇಂದು ಬೆಳಿಗ್ಗೆ, ಅವರು ಅಪರಾಧವನ್ನು ಒಪ್ಪಿಕೊಂಡರು. ಆದರೆ, ಅವರು ತನಿಖಾ ತಂಡವನ್ನು ದಾರಿತಪ್ಪಿಸಲು ಪ್ರಯತ್ನಿಸಿದರು” ಎಂದು ಕೊಚ್ಚಿ ರೇಂಜ್ ಡಿಐಜಿ ಶ್ರೀನಿವಾಸ್ ಎ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮುಂಜಾನೆ, ಶುಕ್ರವಾರ ಮಾರುಕಟ್ಟೆ ಪ್ರದೇಶದ ಬಳಿ ವಲಸೆ ಕಾರ್ಮಿಕರೊಂದಿಗೆ ಮಗುವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ಶೋಧ ನಡೆಸಿ ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ.

ಮಾರುಕಟ್ಟೆ ಹಿಂಭಾಗದ ಜಮೀನು ಪ್ರತ್ಯೇಕ ಪ್ರದೇಶವಾಗಿದ್ದು, ತ್ಯಾಜ್ಯ ಸುರಿಯುವ ಸ್ಥಳವಾಗಿದೆ ಎಂದು ಜನರು ಹೇಳಿದರು. ಈ ಪ್ರದೇಶದಲ್ಲಿ ಸಮಾಜವಿರೋಧಿಗಳು ಹೆಚ್ಚಾಗಿ ಓಡಾಡುತ್ತಿದ್ದು, ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ವಿಪರೀತವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

ಶುಕ್ರವಾರ ಮಗುವಿನೊಂದಿಗೆ ವಲಸೆ ಕಾರ್ಮಿಕನನ್ನು ನೋಡಿದ್ದೇನೆ ಎಂದು ಸ್ಥಳೀಯ ಕಾರ್ಮಿಕ ಸಂಘದ ಕಾರ್ಯಕರ್ತರೊಬ್ಬರು ಮಾಧ್ಯಮಗಳಿಗೆ ತಿಳಿಸಿದರು.

”ಹುಡುಗಿ ಯಾರು ಎಂದು ನಾನು ಅವರನ್ನು ಕೇಳಿದೆ, ಅದು ತನ್ನ ಮಗು ಎಂದು ಹೇಳಿಕೊಂಡಿದ್ದಾನೆ ಮತ್ತು ಅವನು ಮದ್ಯ ಸೇವಿಸಲು ಮಾರುಕಟ್ಟೆ ಪ್ರದೇಶದ ಹಿಂದೆ ಹೋಗುತ್ತಿದ್ದೇನೆ ಎಂದು ಹೇಳಿದನು. ಆದರೆ, ಇಂದು ಬೆಳಿಗ್ಗೆ ನಾನು ಕಾಣೆಯಾದ ಮಗು ಮತ್ತು ಕಾರ್ಮಿಕನ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ” ಎಂದು ಯೂನಿಯನ್ ಕಾರ್ಯಕರ್ತ ಹೇಳಿದರು.

ಈ ಮಧ್ಯೆ ಕೇರಳ ಪೊಲೀಸರು ಶನಿವಾರ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಕ್ಷಮೆಯಾಚನೆ ಮಾಡಿ, ಮಗುವನ್ನು ಆಕೆಯ ಪೋಷಕರೊಂದಿಗೆ ಮತ್ತೆ ಸೇರಿಸುವ ಅವರ ಪ್ರಯತ್ನಗಳು ವಿಫಲವಾಗಿದೆ ಎಂದು ಪೋಸ್ಟ್ ಮಾಡಿದ್ದರು.

ಪ್ರತಿಪಕ್ಷ ಕಾಂಗ್ರೆಸ್ ಪಕ್ಷವು ರಾಜ್ಯ ಪೊಲೀಸರ ಮೇಲೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮಗುವನ್ನು ಪತ್ತೆಹಚ್ಚುವಲ್ಲಿ ಅವರ ಕಡೆಯಿಂದ ಲೋಪವಾಗಿದೆ ಎಂದು ಆರೋಪಿಸಿತು.

ಅಸೆಂಬ್ಲಿ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಮಾತನಾಡಿ, ”ಮಗು ಆಲುವಾ ಪಟ್ಟಣದಲ್ಲೇ ಇದ್ದು ಸಮಯಕ್ಕೆ ಸರಿಯಾಗಿ ಪತ್ತೆಯಾಗಲಿಲ್ಲ. ಆರೋಪಿಗಳು ಮಗುವನ್ನು ಅಪಹರಿಸಿದ್ದಾರೆ ಎಂಬುದು ಸ್ಪಷ್ಟವಾದ ನಂತರವೂ ಪೊಲೀಸರು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಲೋಪಿ ಹೇಳಿದೆ.

”ಇತ್ತೀಚಿನ ದಿನಗಳಲ್ಲಿ ಮಕ್ಕಳೂ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಾದಕ ದ್ರವ್ಯ ಮತ್ತು ಮದ್ಯದ ಅತಿಯಾದ ಬಳಕೆ ಈ ಅಪರಾಧಕ್ಕೆ ಕಾರಣವಾಯಿತು ಎಂದು ಪೊಲೀಸರು ಪ್ರತಿಪಾದಿಸುತ್ತಾರೆ” ಎಂದು ಸತೀಶನ್ ಹೇಳಿದರು.

”ಸಮಾಜದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಿಸಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಅವರು, ಎಡ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

”ಮಗು ಅಪಹರಣವಾಗಿದೆ ಎಂದು ತಿಳಿದ ನಂತರವೂ ಪೊಲೀಸರು ಎಚ್ಚರಿಕೆ ವಹಿಸಿಲ್ಲ” ಎಂದು ಸತೀಶನ್ ಆರೋಪ ಮಾಡಿದರು.

ಮಗುವಿನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....