Homeಮುಖಪುಟಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

ಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ ವಲಸೆ ಕಾರ್ಮಿಕನೊಬ್ಬ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ಶುಕ್ರವಾರದಂದು ನಡೆದಿದೆ.

ಶನಿವಾರ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಗೋಣಿಚೀಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಬಳಿಕ ಅಪ್ರಾಪ್ತ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ

ಶುಕ್ರವಾರ ಬಾಲಕಿ ನಾಪತ್ತೆಯಾಗಿದ್ದು, ಆ ವ್ಯಕ್ತಿಯನ್ನು ತಡರಾತ್ರಿಯೇ ಬಂಧಿಸಲಾಗಿದೆ.

”ಈ ಬಗ್ಗೆ ಶುಕ್ರವಾರ ರಾತ್ರಿ 7.10 ಕ್ಕೆ ದೂರನ್ನು ಸ್ವೀಕರಿಸಿದ್ದೇವೆ ಮತ್ತು ಶುಕ್ರವಾರ ರಾತ್ರಿ 8 ಗಂಟೆಗೆ ಮೊದಲು ಎಫ್ಐಆರ್ ದಾಖಲಿಸಲಾಗಿದೆ. ನಮ್ಮ ತಂಡವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿತು ಮತ್ತು ಮಗು ಕಾರ್ಮಿಕನೊಂದಿಗೆ ಇರುವುದು ಕಂಡುಬಂದಿದೆ. ನಾವು ಅವನನ್ನು ರಾತ್ರಿ 9.30 ಕ್ಕೆ ಬಂಧಿಸಿದ್ದೇವೆ. ಆದರೆ, ಅವನು ಕುಡಿದ ಮತ್ತಿನಲ್ಲಿದ್ದನು ಆದರೆ ಮಗು ಅವನೊಂದಿಗೆ ಇರಲಿಲ್ಲ” ಎಂದು ಎರ್ನಾಕುಲಂ ಗ್ರಾಮಾಂತರ ಎಸ್ಪಿ, ವಿವೇಕ್ ಕುಮಾರ್ ತಿಳಿಸಿದ್ದಾರೆ.

ಮಗುವಿನ ಕುಟುಂಬ ವಾಸಿಸುತ್ತಿದ್ದ ಕಟ್ಟಡದ ಮೊದಲ ಮಹಡಿಯ ಕೊಠಡಿಯಲ್ಲಿ ತಂಗಿದ್ದ ಬಿಹಾರ ಮೂಲದ ಕಾರ್ಮಿಕನನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಆರೋಪಿಯನ್ನು ವಿಚಾರಣೆಗೊಳಪಡಿಸುವುದು ಮತ್ತು ವಿವರಗಳನ್ನು ಸಂಗ್ರಹಿಸುವುದು ಕಷ್ಟಕರವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

”ಇಂದು ಬೆಳಿಗ್ಗೆ, ಅವರು ಅಪರಾಧವನ್ನು ಒಪ್ಪಿಕೊಂಡರು. ಆದರೆ, ಅವರು ತನಿಖಾ ತಂಡವನ್ನು ದಾರಿತಪ್ಪಿಸಲು ಪ್ರಯತ್ನಿಸಿದರು” ಎಂದು ಕೊಚ್ಚಿ ರೇಂಜ್ ಡಿಐಜಿ ಶ್ರೀನಿವಾಸ್ ಎ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮುಂಜಾನೆ, ಶುಕ್ರವಾರ ಮಾರುಕಟ್ಟೆ ಪ್ರದೇಶದ ಬಳಿ ವಲಸೆ ಕಾರ್ಮಿಕರೊಂದಿಗೆ ಮಗುವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ಶೋಧ ನಡೆಸಿ ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ.

ಮಾರುಕಟ್ಟೆ ಹಿಂಭಾಗದ ಜಮೀನು ಪ್ರತ್ಯೇಕ ಪ್ರದೇಶವಾಗಿದ್ದು, ತ್ಯಾಜ್ಯ ಸುರಿಯುವ ಸ್ಥಳವಾಗಿದೆ ಎಂದು ಜನರು ಹೇಳಿದರು. ಈ ಪ್ರದೇಶದಲ್ಲಿ ಸಮಾಜವಿರೋಧಿಗಳು ಹೆಚ್ಚಾಗಿ ಓಡಾಡುತ್ತಿದ್ದು, ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ವಿಪರೀತವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

ಶುಕ್ರವಾರ ಮಗುವಿನೊಂದಿಗೆ ವಲಸೆ ಕಾರ್ಮಿಕನನ್ನು ನೋಡಿದ್ದೇನೆ ಎಂದು ಸ್ಥಳೀಯ ಕಾರ್ಮಿಕ ಸಂಘದ ಕಾರ್ಯಕರ್ತರೊಬ್ಬರು ಮಾಧ್ಯಮಗಳಿಗೆ ತಿಳಿಸಿದರು.

”ಹುಡುಗಿ ಯಾರು ಎಂದು ನಾನು ಅವರನ್ನು ಕೇಳಿದೆ, ಅದು ತನ್ನ ಮಗು ಎಂದು ಹೇಳಿಕೊಂಡಿದ್ದಾನೆ ಮತ್ತು ಅವನು ಮದ್ಯ ಸೇವಿಸಲು ಮಾರುಕಟ್ಟೆ ಪ್ರದೇಶದ ಹಿಂದೆ ಹೋಗುತ್ತಿದ್ದೇನೆ ಎಂದು ಹೇಳಿದನು. ಆದರೆ, ಇಂದು ಬೆಳಿಗ್ಗೆ ನಾನು ಕಾಣೆಯಾದ ಮಗು ಮತ್ತು ಕಾರ್ಮಿಕನ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ” ಎಂದು ಯೂನಿಯನ್ ಕಾರ್ಯಕರ್ತ ಹೇಳಿದರು.

ಈ ಮಧ್ಯೆ ಕೇರಳ ಪೊಲೀಸರು ಶನಿವಾರ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಕ್ಷಮೆಯಾಚನೆ ಮಾಡಿ, ಮಗುವನ್ನು ಆಕೆಯ ಪೋಷಕರೊಂದಿಗೆ ಮತ್ತೆ ಸೇರಿಸುವ ಅವರ ಪ್ರಯತ್ನಗಳು ವಿಫಲವಾಗಿದೆ ಎಂದು ಪೋಸ್ಟ್ ಮಾಡಿದ್ದರು.

ಪ್ರತಿಪಕ್ಷ ಕಾಂಗ್ರೆಸ್ ಪಕ್ಷವು ರಾಜ್ಯ ಪೊಲೀಸರ ಮೇಲೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮಗುವನ್ನು ಪತ್ತೆಹಚ್ಚುವಲ್ಲಿ ಅವರ ಕಡೆಯಿಂದ ಲೋಪವಾಗಿದೆ ಎಂದು ಆರೋಪಿಸಿತು.

ಅಸೆಂಬ್ಲಿ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಮಾತನಾಡಿ, ”ಮಗು ಆಲುವಾ ಪಟ್ಟಣದಲ್ಲೇ ಇದ್ದು ಸಮಯಕ್ಕೆ ಸರಿಯಾಗಿ ಪತ್ತೆಯಾಗಲಿಲ್ಲ. ಆರೋಪಿಗಳು ಮಗುವನ್ನು ಅಪಹರಿಸಿದ್ದಾರೆ ಎಂಬುದು ಸ್ಪಷ್ಟವಾದ ನಂತರವೂ ಪೊಲೀಸರು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಲೋಪಿ ಹೇಳಿದೆ.

”ಇತ್ತೀಚಿನ ದಿನಗಳಲ್ಲಿ ಮಕ್ಕಳೂ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಾದಕ ದ್ರವ್ಯ ಮತ್ತು ಮದ್ಯದ ಅತಿಯಾದ ಬಳಕೆ ಈ ಅಪರಾಧಕ್ಕೆ ಕಾರಣವಾಯಿತು ಎಂದು ಪೊಲೀಸರು ಪ್ರತಿಪಾದಿಸುತ್ತಾರೆ” ಎಂದು ಸತೀಶನ್ ಹೇಳಿದರು.

”ಸಮಾಜದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಿಸಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಅವರು, ಎಡ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

”ಮಗು ಅಪಹರಣವಾಗಿದೆ ಎಂದು ತಿಳಿದ ನಂತರವೂ ಪೊಲೀಸರು ಎಚ್ಚರಿಕೆ ವಹಿಸಿಲ್ಲ” ಎಂದು ಸತೀಶನ್ ಆರೋಪ ಮಾಡಿದರು.

ಮಗುವಿನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...