Homeಮುಖಪುಟಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

ಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ ವಲಸೆ ಕಾರ್ಮಿಕನೊಬ್ಬ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ಶುಕ್ರವಾರದಂದು ನಡೆದಿದೆ.

ಶನಿವಾರ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಗೋಣಿಚೀಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಬಳಿಕ ಅಪ್ರಾಪ್ತ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ

ಶುಕ್ರವಾರ ಬಾಲಕಿ ನಾಪತ್ತೆಯಾಗಿದ್ದು, ಆ ವ್ಯಕ್ತಿಯನ್ನು ತಡರಾತ್ರಿಯೇ ಬಂಧಿಸಲಾಗಿದೆ.

”ಈ ಬಗ್ಗೆ ಶುಕ್ರವಾರ ರಾತ್ರಿ 7.10 ಕ್ಕೆ ದೂರನ್ನು ಸ್ವೀಕರಿಸಿದ್ದೇವೆ ಮತ್ತು ಶುಕ್ರವಾರ ರಾತ್ರಿ 8 ಗಂಟೆಗೆ ಮೊದಲು ಎಫ್ಐಆರ್ ದಾಖಲಿಸಲಾಗಿದೆ. ನಮ್ಮ ತಂಡವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿತು ಮತ್ತು ಮಗು ಕಾರ್ಮಿಕನೊಂದಿಗೆ ಇರುವುದು ಕಂಡುಬಂದಿದೆ. ನಾವು ಅವನನ್ನು ರಾತ್ರಿ 9.30 ಕ್ಕೆ ಬಂಧಿಸಿದ್ದೇವೆ. ಆದರೆ, ಅವನು ಕುಡಿದ ಮತ್ತಿನಲ್ಲಿದ್ದನು ಆದರೆ ಮಗು ಅವನೊಂದಿಗೆ ಇರಲಿಲ್ಲ” ಎಂದು ಎರ್ನಾಕುಲಂ ಗ್ರಾಮಾಂತರ ಎಸ್ಪಿ, ವಿವೇಕ್ ಕುಮಾರ್ ತಿಳಿಸಿದ್ದಾರೆ.

ಮಗುವಿನ ಕುಟುಂಬ ವಾಸಿಸುತ್ತಿದ್ದ ಕಟ್ಟಡದ ಮೊದಲ ಮಹಡಿಯ ಕೊಠಡಿಯಲ್ಲಿ ತಂಗಿದ್ದ ಬಿಹಾರ ಮೂಲದ ಕಾರ್ಮಿಕನನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಆರೋಪಿಯನ್ನು ವಿಚಾರಣೆಗೊಳಪಡಿಸುವುದು ಮತ್ತು ವಿವರಗಳನ್ನು ಸಂಗ್ರಹಿಸುವುದು ಕಷ್ಟಕರವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

”ಇಂದು ಬೆಳಿಗ್ಗೆ, ಅವರು ಅಪರಾಧವನ್ನು ಒಪ್ಪಿಕೊಂಡರು. ಆದರೆ, ಅವರು ತನಿಖಾ ತಂಡವನ್ನು ದಾರಿತಪ್ಪಿಸಲು ಪ್ರಯತ್ನಿಸಿದರು” ಎಂದು ಕೊಚ್ಚಿ ರೇಂಜ್ ಡಿಐಜಿ ಶ್ರೀನಿವಾಸ್ ಎ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮುಂಜಾನೆ, ಶುಕ್ರವಾರ ಮಾರುಕಟ್ಟೆ ಪ್ರದೇಶದ ಬಳಿ ವಲಸೆ ಕಾರ್ಮಿಕರೊಂದಿಗೆ ಮಗುವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ಶೋಧ ನಡೆಸಿ ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ.

ಮಾರುಕಟ್ಟೆ ಹಿಂಭಾಗದ ಜಮೀನು ಪ್ರತ್ಯೇಕ ಪ್ರದೇಶವಾಗಿದ್ದು, ತ್ಯಾಜ್ಯ ಸುರಿಯುವ ಸ್ಥಳವಾಗಿದೆ ಎಂದು ಜನರು ಹೇಳಿದರು. ಈ ಪ್ರದೇಶದಲ್ಲಿ ಸಮಾಜವಿರೋಧಿಗಳು ಹೆಚ್ಚಾಗಿ ಓಡಾಡುತ್ತಿದ್ದು, ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ವಿಪರೀತವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮನೆ ಧ್ವಂಸಗೊಳಿಸಿದ ಸ್ಥಳೀಯ ಆಡಳಿತ

ಶುಕ್ರವಾರ ಮಗುವಿನೊಂದಿಗೆ ವಲಸೆ ಕಾರ್ಮಿಕನನ್ನು ನೋಡಿದ್ದೇನೆ ಎಂದು ಸ್ಥಳೀಯ ಕಾರ್ಮಿಕ ಸಂಘದ ಕಾರ್ಯಕರ್ತರೊಬ್ಬರು ಮಾಧ್ಯಮಗಳಿಗೆ ತಿಳಿಸಿದರು.

”ಹುಡುಗಿ ಯಾರು ಎಂದು ನಾನು ಅವರನ್ನು ಕೇಳಿದೆ, ಅದು ತನ್ನ ಮಗು ಎಂದು ಹೇಳಿಕೊಂಡಿದ್ದಾನೆ ಮತ್ತು ಅವನು ಮದ್ಯ ಸೇವಿಸಲು ಮಾರುಕಟ್ಟೆ ಪ್ರದೇಶದ ಹಿಂದೆ ಹೋಗುತ್ತಿದ್ದೇನೆ ಎಂದು ಹೇಳಿದನು. ಆದರೆ, ಇಂದು ಬೆಳಿಗ್ಗೆ ನಾನು ಕಾಣೆಯಾದ ಮಗು ಮತ್ತು ಕಾರ್ಮಿಕನ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ” ಎಂದು ಯೂನಿಯನ್ ಕಾರ್ಯಕರ್ತ ಹೇಳಿದರು.

ಈ ಮಧ್ಯೆ ಕೇರಳ ಪೊಲೀಸರು ಶನಿವಾರ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಕ್ಷಮೆಯಾಚನೆ ಮಾಡಿ, ಮಗುವನ್ನು ಆಕೆಯ ಪೋಷಕರೊಂದಿಗೆ ಮತ್ತೆ ಸೇರಿಸುವ ಅವರ ಪ್ರಯತ್ನಗಳು ವಿಫಲವಾಗಿದೆ ಎಂದು ಪೋಸ್ಟ್ ಮಾಡಿದ್ದರು.

ಪ್ರತಿಪಕ್ಷ ಕಾಂಗ್ರೆಸ್ ಪಕ್ಷವು ರಾಜ್ಯ ಪೊಲೀಸರ ಮೇಲೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಮಗುವನ್ನು ಪತ್ತೆಹಚ್ಚುವಲ್ಲಿ ಅವರ ಕಡೆಯಿಂದ ಲೋಪವಾಗಿದೆ ಎಂದು ಆರೋಪಿಸಿತು.

ಅಸೆಂಬ್ಲಿ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಮಾತನಾಡಿ, ”ಮಗು ಆಲುವಾ ಪಟ್ಟಣದಲ್ಲೇ ಇದ್ದು ಸಮಯಕ್ಕೆ ಸರಿಯಾಗಿ ಪತ್ತೆಯಾಗಲಿಲ್ಲ. ಆರೋಪಿಗಳು ಮಗುವನ್ನು ಅಪಹರಿಸಿದ್ದಾರೆ ಎಂಬುದು ಸ್ಪಷ್ಟವಾದ ನಂತರವೂ ಪೊಲೀಸರು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ” ಎಂದು ಲೋಪಿ ಹೇಳಿದೆ.

”ಇತ್ತೀಚಿನ ದಿನಗಳಲ್ಲಿ ಮಕ್ಕಳೂ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಾದಕ ದ್ರವ್ಯ ಮತ್ತು ಮದ್ಯದ ಅತಿಯಾದ ಬಳಕೆ ಈ ಅಪರಾಧಕ್ಕೆ ಕಾರಣವಾಯಿತು ಎಂದು ಪೊಲೀಸರು ಪ್ರತಿಪಾದಿಸುತ್ತಾರೆ” ಎಂದು ಸತೀಶನ್ ಹೇಳಿದರು.

”ಸಮಾಜದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಿಸಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಅವರು, ಎಡ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

”ಮಗು ಅಪಹರಣವಾಗಿದೆ ಎಂದು ತಿಳಿದ ನಂತರವೂ ಪೊಲೀಸರು ಎಚ್ಚರಿಕೆ ವಹಿಸಿಲ್ಲ” ಎಂದು ಸತೀಶನ್ ಆರೋಪ ಮಾಡಿದರು.

ಮಗುವಿನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...