Homeಮುಖಪುಟಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿ ವಿರುದ್ದವೇ ಪೋಕ್ಸೋ ಕೇಸ್!

ಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿ ವಿರುದ್ದವೇ ಪೋಕ್ಸೋ ಕೇಸ್!

- Advertisement -
- Advertisement -

ಇತ್ತೀಚೆಗೆ ಮಲಯಾಳಂ ಸಿನಿಮಾ ರಂಗದ ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿಯ ವಿರುದ್ದವೇ ಇದೀಗ ಪೋಕ್ಸೋ ಕೇಸ್ ದಾಖಲಾಗಿದೆ.

ನಟಿಯ ಸಂಬಂಧಿಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಮುವಟ್ಟುಪುಝ ಪೊಲೀಸರು ಸೆಪ್ಟೆಂಬರ್ 20ರಂದು ಆಕೆಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

“ನಾನು 16 ವರ್ಷದವಳಿದ್ದಾಗ ನಟಿ ನನ್ನನ್ನು ಸಿನಿಮಾ ಆಡಿಷನ್‌ಗೆಂದು ಚೆನ್ನೈಗೆ ಕರೆದೊಯ್ದು ಕೆಲ ಪುರುಷರಿಗೆ ಪರಿಚಯ ಮಾಡಿಸಿಕೊಟ್ಟಿದ್ದು. ಆಡಿಷನ್ ನಡೆಯುವಾಗ ಪುರುಷರು ನನ್ನನ್ನು ಅಸಭ್ಯವಾಗಿ ಸ್ಪರ್ಶಿಸಿದ್ದರು. ಆಗ ನಾನು ವಿರೋಧ ವ್ಯಕ್ತಪಡಿಸಿದ್ದೆ, ಅತ್ತು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೆ. ಆಗ ನಟಿ ‘ಅವರೊಂದಿಗೆ ಸಹಕರಿಸು’ ಎಂದು ನನಗೆ ಹೇಳಿದ್ದರು” ಎಂದು ದೂರುದಾರರು ಆರೋಪಿಸಿದ್ದಾರೆ. “ನಟಿ ಸೆಕ್ಸ್ ಟ್ರೇಡ್, ಸೆಕ್ಸ್ ರಾಕೇಟ್ ನಡೆಸುತ್ತಿದ್ದಾರೆ” ಎಂದೂ ದೂರಿನಲ್ಲಿ ಹೇಳಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ನಟಿಯ ವಿರುದ್ದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ), ಬಾಲನ್ಯಾಯ ಕಾಯ್ದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 354A (ಲೈಂಗಿಕ ಕಿರುಕುಳ) ಪ್ರಕರಣ ದಾಖಲಿಸಿದ್ದಾರೆ.

ಚೆನ್ನೈನಲ್ಲಿ ನೆಲೆಸಿರುವ ಆರೋಪಿ ನಟಿ, ಆಗಸ್ಟ್ ಕೊನೆಯ ವಾರದಲ್ಲಿ ಮಲಯಾಳಂ ಸಿನಿಮಾದ ನಾಲ್ವರು ನಟರು ಸೇರಿದಂತೆ ಏಳು ಮಂದಿಯ ವಿರುದ್ಧ ದೂರು ದಾಖಲಿಸಿದ್ದರು. ಆರಂಭದಲ್ಲಿ, ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಪ್ರಾರಂಭಗೊಂಡ ಮೀ ಟೂ ಚಳವಳಿಯ ಭಾಗವಾಗಿ ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ನಟರ ವಿರುದ್ದ ಆರೋಪಗಳನ್ನು ಮಾಡಿದ್ದರು.

ಆಗಸ್ಟ್ 27 ರಂದು ನಟರಾದ ಜಯಸೂರ್ಯ, ಇಡವೇಲ ಬಾಬು, ಮಣಿಯನ್ಪಿಳ್ಳ ರಾಜು, ಪ್ರೊಡಕ್ಷನ್ ಕಂಟ್ರೋಲರ್‌ಗಳಾದ ನೋಬಲ್ ಮತ್ತು ವಿಚು ಹಾಗೂ ನಿರ್ಮಾಪಕ ಮತ್ತು ವಕೀಲರ ಕಾಂಗ್ರೆಸ್ ಅಧ್ಯಕ್ಷ ವಿಎಸ್ ಚಂದ್ರಶೇಖರನ್ ವಿರುದ್ಧ ಕೇರಳ ಪೊಲೀಸರಿಗೆ ಪ್ರತ್ಯೇಕ ಇಮೇಲ್ ದೂರುಗಳನ್ನು ಕಳುಹಿಸಿದ್ದರು.

“ಹಲವು ವರ್ಷಗಳ ಹಿಂದೆ ನಟ ಹಾಗೂ ರಾಜಕಾರಣಿ ಮುಕೇಶ್ ನನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಆದರೆ, ತಾನು  ಸಿನಿಮಾ ರಂಗಕ್ಕೆ ಹೊಸಬಳಾಗಿದ್ದರಿಂದ ಮತ್ತು ಪರಿಣಾಮ ಎದುರಿಸುವ ಭಯದಿಂದ ಆ ಸಮಯದಲ್ಲಿ ದೂರು ನೀಡಿರಲಿಲ್ಲ” ಎಂದಿದ್ದರು.

ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿರುವ ನಟಿ, ದೂರು ನೀಡಿರುವ ಸಂಬಂಧಿ ತನಗೆ ಸ್ವಲ್ಪ ಹಣ ಕೊಡಲು ಬಾಕಿ ಇದೆ. ಅಲ್ಲದೆ, ನಾನು ನಟರ ವಿರುದ್ದ ನೀಡಿರುವ ದೂರಿನಿಂದ ಗಮನ ಬೇರೆಡೆಗೆ ಸೆಳೆಯಲು ನನ್ನ ವಿರುದ್ದ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾಗಿ ವರದಿಯಾಗಿದೆ.

ನಟಿ ಪ್ರಮುಖ ನಟರ ವಿರುದ್ದ ದೂರು ದಾಖಲಿಸಿದ್ದಾಗ ಅದು ಕೇರಳ ಮಾತ್ರವಲ್ಲದೆ ದೇಶದಾದ್ಯಂತ ಸುದ್ದಿಯಾಗಿತ್ತು. ಆದರೆ, ಈಗ ಅದೇ ನಟಿ ವಿರುದ್ದ ಪೋಕ್ಸೋ ಕೇಸ್ ದಾಖಲಾಗಿರುವುದು ಎಲ್ಲೆಡೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...