Homeಮುಖಪುಟಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿ ವಿರುದ್ದವೇ ಪೋಕ್ಸೋ ಕೇಸ್!

ಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿ ವಿರುದ್ದವೇ ಪೋಕ್ಸೋ ಕೇಸ್!

- Advertisement -
- Advertisement -

ಇತ್ತೀಚೆಗೆ ಮಲಯಾಳಂ ಸಿನಿಮಾ ರಂಗದ ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿಯ ವಿರುದ್ದವೇ ಇದೀಗ ಪೋಕ್ಸೋ ಕೇಸ್ ದಾಖಲಾಗಿದೆ.

ನಟಿಯ ಸಂಬಂಧಿಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಮುವಟ್ಟುಪುಝ ಪೊಲೀಸರು ಸೆಪ್ಟೆಂಬರ್ 20ರಂದು ಆಕೆಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

“ನಾನು 16 ವರ್ಷದವಳಿದ್ದಾಗ ನಟಿ ನನ್ನನ್ನು ಸಿನಿಮಾ ಆಡಿಷನ್‌ಗೆಂದು ಚೆನ್ನೈಗೆ ಕರೆದೊಯ್ದು ಕೆಲ ಪುರುಷರಿಗೆ ಪರಿಚಯ ಮಾಡಿಸಿಕೊಟ್ಟಿದ್ದು. ಆಡಿಷನ್ ನಡೆಯುವಾಗ ಪುರುಷರು ನನ್ನನ್ನು ಅಸಭ್ಯವಾಗಿ ಸ್ಪರ್ಶಿಸಿದ್ದರು. ಆಗ ನಾನು ವಿರೋಧ ವ್ಯಕ್ತಪಡಿಸಿದ್ದೆ, ಅತ್ತು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೆ. ಆಗ ನಟಿ ‘ಅವರೊಂದಿಗೆ ಸಹಕರಿಸು’ ಎಂದು ನನಗೆ ಹೇಳಿದ್ದರು” ಎಂದು ದೂರುದಾರರು ಆರೋಪಿಸಿದ್ದಾರೆ. “ನಟಿ ಸೆಕ್ಸ್ ಟ್ರೇಡ್, ಸೆಕ್ಸ್ ರಾಕೇಟ್ ನಡೆಸುತ್ತಿದ್ದಾರೆ” ಎಂದೂ ದೂರಿನಲ್ಲಿ ಹೇಳಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ನಟಿಯ ವಿರುದ್ದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ), ಬಾಲನ್ಯಾಯ ಕಾಯ್ದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 354A (ಲೈಂಗಿಕ ಕಿರುಕುಳ) ಪ್ರಕರಣ ದಾಖಲಿಸಿದ್ದಾರೆ.

ಚೆನ್ನೈನಲ್ಲಿ ನೆಲೆಸಿರುವ ಆರೋಪಿ ನಟಿ, ಆಗಸ್ಟ್ ಕೊನೆಯ ವಾರದಲ್ಲಿ ಮಲಯಾಳಂ ಸಿನಿಮಾದ ನಾಲ್ವರು ನಟರು ಸೇರಿದಂತೆ ಏಳು ಮಂದಿಯ ವಿರುದ್ಧ ದೂರು ದಾಖಲಿಸಿದ್ದರು. ಆರಂಭದಲ್ಲಿ, ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಪ್ರಾರಂಭಗೊಂಡ ಮೀ ಟೂ ಚಳವಳಿಯ ಭಾಗವಾಗಿ ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ನಟರ ವಿರುದ್ದ ಆರೋಪಗಳನ್ನು ಮಾಡಿದ್ದರು.

ಆಗಸ್ಟ್ 27 ರಂದು ನಟರಾದ ಜಯಸೂರ್ಯ, ಇಡವೇಲ ಬಾಬು, ಮಣಿಯನ್ಪಿಳ್ಳ ರಾಜು, ಪ್ರೊಡಕ್ಷನ್ ಕಂಟ್ರೋಲರ್‌ಗಳಾದ ನೋಬಲ್ ಮತ್ತು ವಿಚು ಹಾಗೂ ನಿರ್ಮಾಪಕ ಮತ್ತು ವಕೀಲರ ಕಾಂಗ್ರೆಸ್ ಅಧ್ಯಕ್ಷ ವಿಎಸ್ ಚಂದ್ರಶೇಖರನ್ ವಿರುದ್ಧ ಕೇರಳ ಪೊಲೀಸರಿಗೆ ಪ್ರತ್ಯೇಕ ಇಮೇಲ್ ದೂರುಗಳನ್ನು ಕಳುಹಿಸಿದ್ದರು.

“ಹಲವು ವರ್ಷಗಳ ಹಿಂದೆ ನಟ ಹಾಗೂ ರಾಜಕಾರಣಿ ಮುಕೇಶ್ ನನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಆದರೆ, ತಾನು  ಸಿನಿಮಾ ರಂಗಕ್ಕೆ ಹೊಸಬಳಾಗಿದ್ದರಿಂದ ಮತ್ತು ಪರಿಣಾಮ ಎದುರಿಸುವ ಭಯದಿಂದ ಆ ಸಮಯದಲ್ಲಿ ದೂರು ನೀಡಿರಲಿಲ್ಲ” ಎಂದಿದ್ದರು.

ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿರುವ ನಟಿ, ದೂರು ನೀಡಿರುವ ಸಂಬಂಧಿ ತನಗೆ ಸ್ವಲ್ಪ ಹಣ ಕೊಡಲು ಬಾಕಿ ಇದೆ. ಅಲ್ಲದೆ, ನಾನು ನಟರ ವಿರುದ್ದ ನೀಡಿರುವ ದೂರಿನಿಂದ ಗಮನ ಬೇರೆಡೆಗೆ ಸೆಳೆಯಲು ನನ್ನ ವಿರುದ್ದ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾಗಿ ವರದಿಯಾಗಿದೆ.

ನಟಿ ಪ್ರಮುಖ ನಟರ ವಿರುದ್ದ ದೂರು ದಾಖಲಿಸಿದ್ದಾಗ ಅದು ಕೇರಳ ಮಾತ್ರವಲ್ಲದೆ ದೇಶದಾದ್ಯಂತ ಸುದ್ದಿಯಾಗಿತ್ತು. ಆದರೆ, ಈಗ ಅದೇ ನಟಿ ವಿರುದ್ದ ಪೋಕ್ಸೋ ಕೇಸ್ ದಾಖಲಾಗಿರುವುದು ಎಲ್ಲೆಡೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...