Homeಮುಖಪುಟಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

- Advertisement -
- Advertisement -

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ಕಳೆದ ಫೆಬ್ರವರಿಯಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು.

ಅದರಂತೆ ಈಗ ರಾಜ್ಯದ 33,120 ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಣೆಯಾಗಿದೆ. ಬಿರಿಯಾನಿ, ಪಲಾವ್‌ನಂತಹ ವೈವಿಧ್ಯಮಯ ಆಹಾರಗಳು ಸೇರ್ಪಡೆಯಾಗಿವೆ.

ಮಂಗಳವಾರ, ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಂಗನವಾಡಿಗಳ ರಾಜ್ಯಮಟ್ಟದ ಪುನರಾರಂಭವನ್ನು ಉದ್ಘಾಟಿಸಿದ ಸಚಿವೆ ವೀಣಾ ಜಾರ್ಜ್, “ಸಂಕುನಂತಹ ಮಕ್ಕಳ ಕೋರಿಕೆಗಳನ್ನು ಸ್ವೀಕರಿಸುವ ಮೂಲಕ ಸರ್ಕಾರವು ಆಹಾರ ಮೆನುವನ್ನು ಪರಿಷ್ಕರಿಸಿದೆ” ಎಂದು ಹೇಳಿದ್ದಾರೆ.

“ಎಲ್ಲಾ ಅಂಗನವಾಡಿಗಳಲ್ಲಿ ಮೆನು ಪರಿಷ್ಕರಿಸುವುದು ಮತ್ತು ಏಕರೂಪದ ಆಹಾರ ವಿತರಿಸುವುದು ಮುಖ್ಯ ಎಂದು ನಾವು ಅರಿತುಕೊಂಡಿದ್ದೇವೆ. ನಾವು ಈಗಾಗಲೇ ಮಕ್ಕಳಿಗೆ ಮೊಟ್ಟೆ ಕೊಡುತ್ತಿರುವುದರಿಂದ, ಹೊಸದಾಗಿ ಮೊಟ್ಟೆ ಬಿರಿಯಾನಿ ಮತ್ತು ಪಲಾವ್ ಅನ್ನು ಪರಿಚಯಿಸಲು ನಿರ್ಧರಿಸಿದ್ದೇವೆ. ಪ್ರಸ್ತುತ ವಾರದಲ್ಲಿ ಎರಡು ದಿನ ಹಾಲು, ಮೊಟ್ಟೆ ಕೊಡಲಾಗ್ತಿದೆ. ಅದನ್ನು ಮೂರು ದಿನಗಳಿಗೆ ವಿಸ್ತರಿಸುವ ಬಗ್ಗೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಗುಂಪಿನಿಂದ ಮನವಿ ಬಂದಿದೆ. ಇದಕ್ಕೆ ಹಣಕಾಸು ಇಲಾಖೆ ಹಣವನ್ನು ಅನುಮೋದನೆ ನೀಡಲಿದೆ” ಎಂದಿದ್ದಾರೆ.

ಪರಿಷ್ಕೃತ ಆಹಾರ ಮೆನುವಿನಲ್ಲಿ ಹಾಲು ಮತ್ತು ಮೊಟ್ಟೆ ಜೊತೆಗೆ ಪಿಡಿ (ಅಕ್ಕಿ ಡಂಪ್ಲಿಂಗ್ಸ್), ಹೆಸರುಕಾಳಿನ ಕರಿ, ಅನ್ನ, ನ್ಯೂಟ್ರಿ ಲಡ್ಡೂ, ಸೋಯಾ ಡ್ರೈ ಫ್ರೈ, ಹುರಿದ ತರಕಾರಿಗಳು ಮತ್ತು ಮುರಿದ ಗೋಧಿ ಪುಲಾವ್ ಮುಂತಾದ ಭಕ್ಷ್ಯಗಳಿವೆ.

ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಯೋಗಕ್ಷೇಮವನ್ನು ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ‘ಕುಂಜೂಸ್’ ಎಂಬ ಹೊಸ ಉಪಕ್ರಮವನ್ನು ಈ ವರ್ಷದಿಂದ ಪ್ರಾರಂಭಿಸಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಗಳನ್ನು ನಿರ್ಣಯಿಸಲು ಶಿಕ್ಷಕರಿಗೆ ಸಹಾಯ ಮಾಡುವ ‘ಕುಂಜೂಸ್’ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಚ್ ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ -1ರ ‘ಶಂಕು’ ಎಂದು ಅಕ್ಕರೆಯಿಂದ ಕರೆಯಲ್ಪಡುವ ಮಗು ಪ್ರಜುಲ್ ಎಸ್‌ ಸುಂದರ್ ಬಿರಿಯಾನಿ ಬೇಕು ಎಂದು ತನ್ನ ಆಸೆಯನ್ನು ವ್ಯಕ್ತಪಡಿಸಿತ್ತು. ಮಗುವಿನ ತಾಯಿ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದರು.

ಜೆಎನ್‌ಯು ಅಧಿಕೃತ ದಾಖಲೆಗಳಲ್ಲಿ ‘ಕುಲಪತಿ’ ಬದಲಿಗೆ ‘ಕುಲಗುರು’ ಪದ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...