Homeಮುಖಪುಟಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

- Advertisement -
- Advertisement -

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ಕಳೆದ ಫೆಬ್ರವರಿಯಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು.

ಅದರಂತೆ ಈಗ ರಾಜ್ಯದ 33,120 ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಣೆಯಾಗಿದೆ. ಬಿರಿಯಾನಿ, ಪಲಾವ್‌ನಂತಹ ವೈವಿಧ್ಯಮಯ ಆಹಾರಗಳು ಸೇರ್ಪಡೆಯಾಗಿವೆ.

ಮಂಗಳವಾರ, ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಂಗನವಾಡಿಗಳ ರಾಜ್ಯಮಟ್ಟದ ಪುನರಾರಂಭವನ್ನು ಉದ್ಘಾಟಿಸಿದ ಸಚಿವೆ ವೀಣಾ ಜಾರ್ಜ್, “ಸಂಕುನಂತಹ ಮಕ್ಕಳ ಕೋರಿಕೆಗಳನ್ನು ಸ್ವೀಕರಿಸುವ ಮೂಲಕ ಸರ್ಕಾರವು ಆಹಾರ ಮೆನುವನ್ನು ಪರಿಷ್ಕರಿಸಿದೆ” ಎಂದು ಹೇಳಿದ್ದಾರೆ.

“ಎಲ್ಲಾ ಅಂಗನವಾಡಿಗಳಲ್ಲಿ ಮೆನು ಪರಿಷ್ಕರಿಸುವುದು ಮತ್ತು ಏಕರೂಪದ ಆಹಾರ ವಿತರಿಸುವುದು ಮುಖ್ಯ ಎಂದು ನಾವು ಅರಿತುಕೊಂಡಿದ್ದೇವೆ. ನಾವು ಈಗಾಗಲೇ ಮಕ್ಕಳಿಗೆ ಮೊಟ್ಟೆ ಕೊಡುತ್ತಿರುವುದರಿಂದ, ಹೊಸದಾಗಿ ಮೊಟ್ಟೆ ಬಿರಿಯಾನಿ ಮತ್ತು ಪಲಾವ್ ಅನ್ನು ಪರಿಚಯಿಸಲು ನಿರ್ಧರಿಸಿದ್ದೇವೆ. ಪ್ರಸ್ತುತ ವಾರದಲ್ಲಿ ಎರಡು ದಿನ ಹಾಲು, ಮೊಟ್ಟೆ ಕೊಡಲಾಗ್ತಿದೆ. ಅದನ್ನು ಮೂರು ದಿನಗಳಿಗೆ ವಿಸ್ತರಿಸುವ ಬಗ್ಗೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಗುಂಪಿನಿಂದ ಮನವಿ ಬಂದಿದೆ. ಇದಕ್ಕೆ ಹಣಕಾಸು ಇಲಾಖೆ ಹಣವನ್ನು ಅನುಮೋದನೆ ನೀಡಲಿದೆ” ಎಂದಿದ್ದಾರೆ.

ಪರಿಷ್ಕೃತ ಆಹಾರ ಮೆನುವಿನಲ್ಲಿ ಹಾಲು ಮತ್ತು ಮೊಟ್ಟೆ ಜೊತೆಗೆ ಪಿಡಿ (ಅಕ್ಕಿ ಡಂಪ್ಲಿಂಗ್ಸ್), ಹೆಸರುಕಾಳಿನ ಕರಿ, ಅನ್ನ, ನ್ಯೂಟ್ರಿ ಲಡ್ಡೂ, ಸೋಯಾ ಡ್ರೈ ಫ್ರೈ, ಹುರಿದ ತರಕಾರಿಗಳು ಮತ್ತು ಮುರಿದ ಗೋಧಿ ಪುಲಾವ್ ಮುಂತಾದ ಭಕ್ಷ್ಯಗಳಿವೆ.

ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಯೋಗಕ್ಷೇಮವನ್ನು ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ‘ಕುಂಜೂಸ್’ ಎಂಬ ಹೊಸ ಉಪಕ್ರಮವನ್ನು ಈ ವರ್ಷದಿಂದ ಪ್ರಾರಂಭಿಸಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಗಳನ್ನು ನಿರ್ಣಯಿಸಲು ಶಿಕ್ಷಕರಿಗೆ ಸಹಾಯ ಮಾಡುವ ‘ಕುಂಜೂಸ್’ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಚ್ ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ -1ರ ‘ಶಂಕು’ ಎಂದು ಅಕ್ಕರೆಯಿಂದ ಕರೆಯಲ್ಪಡುವ ಮಗು ಪ್ರಜುಲ್ ಎಸ್‌ ಸುಂದರ್ ಬಿರಿಯಾನಿ ಬೇಕು ಎಂದು ತನ್ನ ಆಸೆಯನ್ನು ವ್ಯಕ್ತಪಡಿಸಿತ್ತು. ಮಗುವಿನ ತಾಯಿ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದರು.

ಜೆಎನ್‌ಯು ಅಧಿಕೃತ ದಾಖಲೆಗಳಲ್ಲಿ ‘ಕುಲಪತಿ’ ಬದಲಿಗೆ ‘ಕುಲಗುರು’ ಪದ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...