Homeಮುಖಪುಟಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

- Advertisement -
- Advertisement -

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ಕಳೆದ ಫೆಬ್ರವರಿಯಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು.

ಅದರಂತೆ ಈಗ ರಾಜ್ಯದ 33,120 ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಣೆಯಾಗಿದೆ. ಬಿರಿಯಾನಿ, ಪಲಾವ್‌ನಂತಹ ವೈವಿಧ್ಯಮಯ ಆಹಾರಗಳು ಸೇರ್ಪಡೆಯಾಗಿವೆ.

ಮಂಗಳವಾರ, ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಂಗನವಾಡಿಗಳ ರಾಜ್ಯಮಟ್ಟದ ಪುನರಾರಂಭವನ್ನು ಉದ್ಘಾಟಿಸಿದ ಸಚಿವೆ ವೀಣಾ ಜಾರ್ಜ್, “ಸಂಕುನಂತಹ ಮಕ್ಕಳ ಕೋರಿಕೆಗಳನ್ನು ಸ್ವೀಕರಿಸುವ ಮೂಲಕ ಸರ್ಕಾರವು ಆಹಾರ ಮೆನುವನ್ನು ಪರಿಷ್ಕರಿಸಿದೆ” ಎಂದು ಹೇಳಿದ್ದಾರೆ.

“ಎಲ್ಲಾ ಅಂಗನವಾಡಿಗಳಲ್ಲಿ ಮೆನು ಪರಿಷ್ಕರಿಸುವುದು ಮತ್ತು ಏಕರೂಪದ ಆಹಾರ ವಿತರಿಸುವುದು ಮುಖ್ಯ ಎಂದು ನಾವು ಅರಿತುಕೊಂಡಿದ್ದೇವೆ. ನಾವು ಈಗಾಗಲೇ ಮಕ್ಕಳಿಗೆ ಮೊಟ್ಟೆ ಕೊಡುತ್ತಿರುವುದರಿಂದ, ಹೊಸದಾಗಿ ಮೊಟ್ಟೆ ಬಿರಿಯಾನಿ ಮತ್ತು ಪಲಾವ್ ಅನ್ನು ಪರಿಚಯಿಸಲು ನಿರ್ಧರಿಸಿದ್ದೇವೆ. ಪ್ರಸ್ತುತ ವಾರದಲ್ಲಿ ಎರಡು ದಿನ ಹಾಲು, ಮೊಟ್ಟೆ ಕೊಡಲಾಗ್ತಿದೆ. ಅದನ್ನು ಮೂರು ದಿನಗಳಿಗೆ ವಿಸ್ತರಿಸುವ ಬಗ್ಗೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಗುಂಪಿನಿಂದ ಮನವಿ ಬಂದಿದೆ. ಇದಕ್ಕೆ ಹಣಕಾಸು ಇಲಾಖೆ ಹಣವನ್ನು ಅನುಮೋದನೆ ನೀಡಲಿದೆ” ಎಂದಿದ್ದಾರೆ.

ಪರಿಷ್ಕೃತ ಆಹಾರ ಮೆನುವಿನಲ್ಲಿ ಹಾಲು ಮತ್ತು ಮೊಟ್ಟೆ ಜೊತೆಗೆ ಪಿಡಿ (ಅಕ್ಕಿ ಡಂಪ್ಲಿಂಗ್ಸ್), ಹೆಸರುಕಾಳಿನ ಕರಿ, ಅನ್ನ, ನ್ಯೂಟ್ರಿ ಲಡ್ಡೂ, ಸೋಯಾ ಡ್ರೈ ಫ್ರೈ, ಹುರಿದ ತರಕಾರಿಗಳು ಮತ್ತು ಮುರಿದ ಗೋಧಿ ಪುಲಾವ್ ಮುಂತಾದ ಭಕ್ಷ್ಯಗಳಿವೆ.

ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಯೋಗಕ್ಷೇಮವನ್ನು ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ‘ಕುಂಜೂಸ್’ ಎಂಬ ಹೊಸ ಉಪಕ್ರಮವನ್ನು ಈ ವರ್ಷದಿಂದ ಪ್ರಾರಂಭಿಸಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಗಳನ್ನು ನಿರ್ಣಯಿಸಲು ಶಿಕ್ಷಕರಿಗೆ ಸಹಾಯ ಮಾಡುವ ‘ಕುಂಜೂಸ್’ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಚ್ ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ -1ರ ‘ಶಂಕು’ ಎಂದು ಅಕ್ಕರೆಯಿಂದ ಕರೆಯಲ್ಪಡುವ ಮಗು ಪ್ರಜುಲ್ ಎಸ್‌ ಸುಂದರ್ ಬಿರಿಯಾನಿ ಬೇಕು ಎಂದು ತನ್ನ ಆಸೆಯನ್ನು ವ್ಯಕ್ತಪಡಿಸಿತ್ತು. ಮಗುವಿನ ತಾಯಿ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದರು.

ಜೆಎನ್‌ಯು ಅಧಿಕೃತ ದಾಖಲೆಗಳಲ್ಲಿ ‘ಕುಲಪತಿ’ ಬದಲಿಗೆ ‘ಕುಲಗುರು’ ಪದ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...