Homeಮುಖಪುಟಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

- Advertisement -
- Advertisement -

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ಕಳೆದ ಫೆಬ್ರವರಿಯಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು.

ಅದರಂತೆ ಈಗ ರಾಜ್ಯದ 33,120 ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಣೆಯಾಗಿದೆ. ಬಿರಿಯಾನಿ, ಪಲಾವ್‌ನಂತಹ ವೈವಿಧ್ಯಮಯ ಆಹಾರಗಳು ಸೇರ್ಪಡೆಯಾಗಿವೆ.

ಮಂಗಳವಾರ, ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಂಗನವಾಡಿಗಳ ರಾಜ್ಯಮಟ್ಟದ ಪುನರಾರಂಭವನ್ನು ಉದ್ಘಾಟಿಸಿದ ಸಚಿವೆ ವೀಣಾ ಜಾರ್ಜ್, “ಸಂಕುನಂತಹ ಮಕ್ಕಳ ಕೋರಿಕೆಗಳನ್ನು ಸ್ವೀಕರಿಸುವ ಮೂಲಕ ಸರ್ಕಾರವು ಆಹಾರ ಮೆನುವನ್ನು ಪರಿಷ್ಕರಿಸಿದೆ” ಎಂದು ಹೇಳಿದ್ದಾರೆ.

“ಎಲ್ಲಾ ಅಂಗನವಾಡಿಗಳಲ್ಲಿ ಮೆನು ಪರಿಷ್ಕರಿಸುವುದು ಮತ್ತು ಏಕರೂಪದ ಆಹಾರ ವಿತರಿಸುವುದು ಮುಖ್ಯ ಎಂದು ನಾವು ಅರಿತುಕೊಂಡಿದ್ದೇವೆ. ನಾವು ಈಗಾಗಲೇ ಮಕ್ಕಳಿಗೆ ಮೊಟ್ಟೆ ಕೊಡುತ್ತಿರುವುದರಿಂದ, ಹೊಸದಾಗಿ ಮೊಟ್ಟೆ ಬಿರಿಯಾನಿ ಮತ್ತು ಪಲಾವ್ ಅನ್ನು ಪರಿಚಯಿಸಲು ನಿರ್ಧರಿಸಿದ್ದೇವೆ. ಪ್ರಸ್ತುತ ವಾರದಲ್ಲಿ ಎರಡು ದಿನ ಹಾಲು, ಮೊಟ್ಟೆ ಕೊಡಲಾಗ್ತಿದೆ. ಅದನ್ನು ಮೂರು ದಿನಗಳಿಗೆ ವಿಸ್ತರಿಸುವ ಬಗ್ಗೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಗುಂಪಿನಿಂದ ಮನವಿ ಬಂದಿದೆ. ಇದಕ್ಕೆ ಹಣಕಾಸು ಇಲಾಖೆ ಹಣವನ್ನು ಅನುಮೋದನೆ ನೀಡಲಿದೆ” ಎಂದಿದ್ದಾರೆ.

ಪರಿಷ್ಕೃತ ಆಹಾರ ಮೆನುವಿನಲ್ಲಿ ಹಾಲು ಮತ್ತು ಮೊಟ್ಟೆ ಜೊತೆಗೆ ಪಿಡಿ (ಅಕ್ಕಿ ಡಂಪ್ಲಿಂಗ್ಸ್), ಹೆಸರುಕಾಳಿನ ಕರಿ, ಅನ್ನ, ನ್ಯೂಟ್ರಿ ಲಡ್ಡೂ, ಸೋಯಾ ಡ್ರೈ ಫ್ರೈ, ಹುರಿದ ತರಕಾರಿಗಳು ಮತ್ತು ಮುರಿದ ಗೋಧಿ ಪುಲಾವ್ ಮುಂತಾದ ಭಕ್ಷ್ಯಗಳಿವೆ.

ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಯೋಗಕ್ಷೇಮವನ್ನು ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ‘ಕುಂಜೂಸ್’ ಎಂಬ ಹೊಸ ಉಪಕ್ರಮವನ್ನು ಈ ವರ್ಷದಿಂದ ಪ್ರಾರಂಭಿಸಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಗಳನ್ನು ನಿರ್ಣಯಿಸಲು ಶಿಕ್ಷಕರಿಗೆ ಸಹಾಯ ಮಾಡುವ ‘ಕುಂಜೂಸ್’ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಚ್ ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ -1ರ ‘ಶಂಕು’ ಎಂದು ಅಕ್ಕರೆಯಿಂದ ಕರೆಯಲ್ಪಡುವ ಮಗು ಪ್ರಜುಲ್ ಎಸ್‌ ಸುಂದರ್ ಬಿರಿಯಾನಿ ಬೇಕು ಎಂದು ತನ್ನ ಆಸೆಯನ್ನು ವ್ಯಕ್ತಪಡಿಸಿತ್ತು. ಮಗುವಿನ ತಾಯಿ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದರು.

ಜೆಎನ್‌ಯು ಅಧಿಕೃತ ದಾಖಲೆಗಳಲ್ಲಿ ‘ಕುಲಪತಿ’ ಬದಲಿಗೆ ‘ಕುಲಗುರು’ ಪದ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...