Homeಚಳವಳಿಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

ಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

- Advertisement -
- Advertisement -

ಕಾಲೇಜುಗಳ ಮಹಿಳಾ ಹಾಸ್ಟೆಲ್‌ಗಳಲ್ಲಿ ಸಂಜೆ 6 ಗಂಟೆಗೆ ಆರಂಭವಾಗುತ್ತಿದ್ದ ಕರ್ಫ್ಯೂ ವಿರುದ್ದ ಹೋರಾಟ ಆರಂಭಿಸಿದ್ದ ಕೇರಳದ ಅಲುವಾ ಯುಸಿ ಕಾಲೇಜಿನ ವಿದ್ಯಾರ್ಥಿಗಳು ಒಂದು ವರ್ಷದ ಬಳಿಕ ಗೆಲುವು ಸಾಧಿಸಿದ್ದಾರೆ.

ಮಹಿಳಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ಸಮಯವನ್ನು ರಾತ್ರಿ 9.30ರ ನಂತರ ವಿಧಿಸಬೇಕು ಎಂಬ ವಿದ್ಯಾರ್ಥಿಗಳ ಉತ್ತಾಯಕ್ಕೆ ಕಾಲೇಜು ಆಡಳಿತ ಒಪ್ಪಿಗೆ ನೀಡಿದೆ. “ಇದು ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯ. ಹಲವು ಪ್ರತಿಭಟನೆಗಳು ನಡೆಸಿ, ಹಕ್ಕೊತ್ತಾಯಗಳನ್ನು ಸಲ್ಲಿಸಿದ ನಂತರ, ಕಾಲೇಜು ಅಂತಿಮವಾಗಿ ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿದೆ ”ಎಂದು ವಿದ್ಯಾರ್ಥಿನಿ ಎಮಿಲ್ಲಾ ಜಾನ್ ಹೇಳಿದ್ದಾರೆ.

“2019 ರ ಹೈಕೋರ್ಟ್ ಆದೇಶದಂತೆ ಎಲ್ಲಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ರಾತ್ರಿ 9.30ರ ನಂತರ ಇರಬೇಕು. ಭಾನುವಾರ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೊರಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ನಾವು ಒತ್ತಾಯಿಸಿದ್ದೆವು. 2021ರ ಕೊನೆಯ ಕೆಲವು ತಿಂಗಳುಗಳಲ್ಲಿ ನಮ್ಮ ಪ್ರತಿಭಟನೆ ಆರಂಭಿಸಿದ್ದೆವು. ಈ ಬಳಿಕ, ಕಾಲೇಜು ಪುನರಾರಂಭವಾದಾಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಲೇಜು ಆಡಳಿತ ಭರವಸೆ ನೀಡಿತ್ತು” ಎಂದು ಮತ್ತೊಬ್ಬ ವಿದ್ಯಾರ್ಥಿನಿ ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

ಜನವರಿ 3 ರಂದು ಆಡಳಿತ ಮಂಡಳಿ ಸಭೆ ಸೇರಿತ್ತು. ನಮ್ಮ ಎಲ್ಲಾ ಬೇಡಿಕೆಗಳನ್ನು ಅವರು ಒಪ್ಪಿಕೊಂಡಿದ್ದು, ಮುಂದಿನ ದಿನ ಹಾಸ್ಟೆಲ್ ವಾರ್ಡನ್‌ಗಳೊಂದಿಗಿನ ಸಭೆಯ ನಂತರ ಅಧಿಕೃತ ನಿಲುವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಆದರೆ, ಜನವರಿ 4 ರಂದು ನಡೆದ ಸಭೆಯ ನಂತರ, ಕರ್ಫ್ಯೂ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಘೋಷಿಸಿದ್ದರು. ಇದು ನಮ್ಮ ಸಹನೆಯನ್ನು ಪರೀಕ್ಷಿಸಿತ್ತು ಎಂದು ಟೆಸ್ಸಾ ಹೇಳಿದ್ದಾರೆ.

ಇದನ್ನೂ ಓದಿ: ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

“ಭರವಸೆ ನೀಡಿ ಮತ್ತೆ ಅದನ್ನು ಈಡೇರಿಸದಿರುವುದನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳು ಸಿದ್ಧರಿರಲಿಲ್ಲ. ಆರಂಭದಲ್ಲಿ ಅನೇಕ ಹಾಸ್ಟೆಲ್‌ಗಳಿಗೆ ನಮ್ಮ ಸಮಸ್ಯೆಗಳ ವಿಚಾರದಲ್ಲಿ ಸಂಘಟನೆಗಳು ಭಾಗಿಯಾಗುವುದು ಇಷ್ಟವಿರಲಿಲ್ಲ. ಆದರೆ, ಕಾಲೇಜು ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರಿಂದಾಗಿ, ಜನವರಿ 6 ರಂದು ಎಸ್‌ಎಫ್‌ಐ ಸಂಘಟನೆಯು ಪ್ರಾಂಶುಪಾಲರ ಕಚೇರಿಯ ಬಳಿ ಪ್ರತಿಭಟನೆ ಮತ್ತು ಕೆಎಸ್‌ಯು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಾವು ಹಾಸ್ಟೆಲ್ ನಿಯಮ ಪುಸ್ತಕವನ್ನು ಸುಡುವ ಮೂಲಕ ಹೋರಾಟವನ್ನು ಪ್ರಾರಂಭಿಸಿವು. 30 ಗಂಟೆಗಳ ನಿರಂತರ ಪ್ರತಿಭಟನೆಯ ನಂತರ ಆಡಳಿತವು ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿತು” ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

“ಈಗ ಸಂಜೆ 6 ಗಂಟೆಗೆ ಕರ್ಫ್ಯೂ ಹಾಗೆ ಉಳಿದಿದ್ದರೂ ವಿದ್ಯಾರ್ಥಿಗಳು ಲೇಟಾಗಿ ಬರುವ ಚೀಟಿಗೆ ಸಹಿ ಮಾಡಿ ರಾತ್ರಿ 9 ರವರೆಗೆ ಹೊರಗಿರಬಹುದು ಎಂದು ಹೊಸ ನಿಯಮಗಳು ಹೇಳುತ್ತವೆ. ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವುದು, ಶಾಪಿಂಗ್ ಸೇರಿದಂತೆ ಯಾವುದೇ ಕಾರಣಗಳನ್ನು ಬೇಕಾದರೂ ನೀಡಬಹುದು. ಎರಡನೇ ಮತ್ತು ನಾಲ್ಕನೇ ಭಾನುವಾರದಂದು ಸಂಜೆ 5 ಗಂಟೆಯವರೆಗೆ ಹೊರ ಹೋಗಬಹುದು. ಜೊತೆಗೆ ಸಾರ್ವಜನಿಕ ರಜಾದಿನಗಳಲ್ಲಿ ಹೊರಗೆ ಹೋಗಬಹುದು” ಎಂದು ವಿದ್ಯಾರ್ಥಿನಿ ಎಮಿಲಾ ಹೇಳುತ್ತಾರೆ.

ಮೊದಲ ಮತ್ತು ಮೂರನೇ ಭಾನುವಾರವೂ ಹೊರ ಹೋಗಲು ಅನುಮತಿ ನೀಡುವಂತೆ ಕೇಳಲಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಲಾಗಿದೆ. ಒಂದು ತಿಂಗಳೊಳಗೆ ಅವರು ತಮ್ಮ ನಿರ್ಧಾರವನ್ನು ನಮಗೆ ತಿಳಿಸುತ್ತಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...