Homeಚಳವಳಿಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

ಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

- Advertisement -
- Advertisement -

ಕಾಲೇಜುಗಳ ಮಹಿಳಾ ಹಾಸ್ಟೆಲ್‌ಗಳಲ್ಲಿ ಸಂಜೆ 6 ಗಂಟೆಗೆ ಆರಂಭವಾಗುತ್ತಿದ್ದ ಕರ್ಫ್ಯೂ ವಿರುದ್ದ ಹೋರಾಟ ಆರಂಭಿಸಿದ್ದ ಕೇರಳದ ಅಲುವಾ ಯುಸಿ ಕಾಲೇಜಿನ ವಿದ್ಯಾರ್ಥಿಗಳು ಒಂದು ವರ್ಷದ ಬಳಿಕ ಗೆಲುವು ಸಾಧಿಸಿದ್ದಾರೆ.

ಮಹಿಳಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ಸಮಯವನ್ನು ರಾತ್ರಿ 9.30ರ ನಂತರ ವಿಧಿಸಬೇಕು ಎಂಬ ವಿದ್ಯಾರ್ಥಿಗಳ ಉತ್ತಾಯಕ್ಕೆ ಕಾಲೇಜು ಆಡಳಿತ ಒಪ್ಪಿಗೆ ನೀಡಿದೆ. “ಇದು ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯ. ಹಲವು ಪ್ರತಿಭಟನೆಗಳು ನಡೆಸಿ, ಹಕ್ಕೊತ್ತಾಯಗಳನ್ನು ಸಲ್ಲಿಸಿದ ನಂತರ, ಕಾಲೇಜು ಅಂತಿಮವಾಗಿ ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿದೆ ”ಎಂದು ವಿದ್ಯಾರ್ಥಿನಿ ಎಮಿಲ್ಲಾ ಜಾನ್ ಹೇಳಿದ್ದಾರೆ.

“2019 ರ ಹೈಕೋರ್ಟ್ ಆದೇಶದಂತೆ ಎಲ್ಲಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ರಾತ್ರಿ 9.30ರ ನಂತರ ಇರಬೇಕು. ಭಾನುವಾರ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೊರಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ನಾವು ಒತ್ತಾಯಿಸಿದ್ದೆವು. 2021ರ ಕೊನೆಯ ಕೆಲವು ತಿಂಗಳುಗಳಲ್ಲಿ ನಮ್ಮ ಪ್ರತಿಭಟನೆ ಆರಂಭಿಸಿದ್ದೆವು. ಈ ಬಳಿಕ, ಕಾಲೇಜು ಪುನರಾರಂಭವಾದಾಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಲೇಜು ಆಡಳಿತ ಭರವಸೆ ನೀಡಿತ್ತು” ಎಂದು ಮತ್ತೊಬ್ಬ ವಿದ್ಯಾರ್ಥಿನಿ ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

ಜನವರಿ 3 ರಂದು ಆಡಳಿತ ಮಂಡಳಿ ಸಭೆ ಸೇರಿತ್ತು. ನಮ್ಮ ಎಲ್ಲಾ ಬೇಡಿಕೆಗಳನ್ನು ಅವರು ಒಪ್ಪಿಕೊಂಡಿದ್ದು, ಮುಂದಿನ ದಿನ ಹಾಸ್ಟೆಲ್ ವಾರ್ಡನ್‌ಗಳೊಂದಿಗಿನ ಸಭೆಯ ನಂತರ ಅಧಿಕೃತ ನಿಲುವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಆದರೆ, ಜನವರಿ 4 ರಂದು ನಡೆದ ಸಭೆಯ ನಂತರ, ಕರ್ಫ್ಯೂ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಘೋಷಿಸಿದ್ದರು. ಇದು ನಮ್ಮ ಸಹನೆಯನ್ನು ಪರೀಕ್ಷಿಸಿತ್ತು ಎಂದು ಟೆಸ್ಸಾ ಹೇಳಿದ್ದಾರೆ.

ಇದನ್ನೂ ಓದಿ: ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

“ಭರವಸೆ ನೀಡಿ ಮತ್ತೆ ಅದನ್ನು ಈಡೇರಿಸದಿರುವುದನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳು ಸಿದ್ಧರಿರಲಿಲ್ಲ. ಆರಂಭದಲ್ಲಿ ಅನೇಕ ಹಾಸ್ಟೆಲ್‌ಗಳಿಗೆ ನಮ್ಮ ಸಮಸ್ಯೆಗಳ ವಿಚಾರದಲ್ಲಿ ಸಂಘಟನೆಗಳು ಭಾಗಿಯಾಗುವುದು ಇಷ್ಟವಿರಲಿಲ್ಲ. ಆದರೆ, ಕಾಲೇಜು ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರಿಂದಾಗಿ, ಜನವರಿ 6 ರಂದು ಎಸ್‌ಎಫ್‌ಐ ಸಂಘಟನೆಯು ಪ್ರಾಂಶುಪಾಲರ ಕಚೇರಿಯ ಬಳಿ ಪ್ರತಿಭಟನೆ ಮತ್ತು ಕೆಎಸ್‌ಯು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಾವು ಹಾಸ್ಟೆಲ್ ನಿಯಮ ಪುಸ್ತಕವನ್ನು ಸುಡುವ ಮೂಲಕ ಹೋರಾಟವನ್ನು ಪ್ರಾರಂಭಿಸಿವು. 30 ಗಂಟೆಗಳ ನಿರಂತರ ಪ್ರತಿಭಟನೆಯ ನಂತರ ಆಡಳಿತವು ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿತು” ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

“ಈಗ ಸಂಜೆ 6 ಗಂಟೆಗೆ ಕರ್ಫ್ಯೂ ಹಾಗೆ ಉಳಿದಿದ್ದರೂ ವಿದ್ಯಾರ್ಥಿಗಳು ಲೇಟಾಗಿ ಬರುವ ಚೀಟಿಗೆ ಸಹಿ ಮಾಡಿ ರಾತ್ರಿ 9 ರವರೆಗೆ ಹೊರಗಿರಬಹುದು ಎಂದು ಹೊಸ ನಿಯಮಗಳು ಹೇಳುತ್ತವೆ. ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವುದು, ಶಾಪಿಂಗ್ ಸೇರಿದಂತೆ ಯಾವುದೇ ಕಾರಣಗಳನ್ನು ಬೇಕಾದರೂ ನೀಡಬಹುದು. ಎರಡನೇ ಮತ್ತು ನಾಲ್ಕನೇ ಭಾನುವಾರದಂದು ಸಂಜೆ 5 ಗಂಟೆಯವರೆಗೆ ಹೊರ ಹೋಗಬಹುದು. ಜೊತೆಗೆ ಸಾರ್ವಜನಿಕ ರಜಾದಿನಗಳಲ್ಲಿ ಹೊರಗೆ ಹೋಗಬಹುದು” ಎಂದು ವಿದ್ಯಾರ್ಥಿನಿ ಎಮಿಲಾ ಹೇಳುತ್ತಾರೆ.

ಮೊದಲ ಮತ್ತು ಮೂರನೇ ಭಾನುವಾರವೂ ಹೊರ ಹೋಗಲು ಅನುಮತಿ ನೀಡುವಂತೆ ಕೇಳಲಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಲಾಗಿದೆ. ಒಂದು ತಿಂಗಳೊಳಗೆ ಅವರು ತಮ್ಮ ನಿರ್ಧಾರವನ್ನು ನಮಗೆ ತಿಳಿಸುತ್ತಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...