Homeಚಳವಳಿಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

ಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

- Advertisement -
- Advertisement -

ಕಾಲೇಜುಗಳ ಮಹಿಳಾ ಹಾಸ್ಟೆಲ್‌ಗಳಲ್ಲಿ ಸಂಜೆ 6 ಗಂಟೆಗೆ ಆರಂಭವಾಗುತ್ತಿದ್ದ ಕರ್ಫ್ಯೂ ವಿರುದ್ದ ಹೋರಾಟ ಆರಂಭಿಸಿದ್ದ ಕೇರಳದ ಅಲುವಾ ಯುಸಿ ಕಾಲೇಜಿನ ವಿದ್ಯಾರ್ಥಿಗಳು ಒಂದು ವರ್ಷದ ಬಳಿಕ ಗೆಲುವು ಸಾಧಿಸಿದ್ದಾರೆ.

ಮಹಿಳಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ಸಮಯವನ್ನು ರಾತ್ರಿ 9.30ರ ನಂತರ ವಿಧಿಸಬೇಕು ಎಂಬ ವಿದ್ಯಾರ್ಥಿಗಳ ಉತ್ತಾಯಕ್ಕೆ ಕಾಲೇಜು ಆಡಳಿತ ಒಪ್ಪಿಗೆ ನೀಡಿದೆ. “ಇದು ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯ. ಹಲವು ಪ್ರತಿಭಟನೆಗಳು ನಡೆಸಿ, ಹಕ್ಕೊತ್ತಾಯಗಳನ್ನು ಸಲ್ಲಿಸಿದ ನಂತರ, ಕಾಲೇಜು ಅಂತಿಮವಾಗಿ ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿದೆ ”ಎಂದು ವಿದ್ಯಾರ್ಥಿನಿ ಎಮಿಲ್ಲಾ ಜಾನ್ ಹೇಳಿದ್ದಾರೆ.

“2019 ರ ಹೈಕೋರ್ಟ್ ಆದೇಶದಂತೆ ಎಲ್ಲಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ರಾತ್ರಿ 9.30ರ ನಂತರ ಇರಬೇಕು. ಭಾನುವಾರ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೊರಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ನಾವು ಒತ್ತಾಯಿಸಿದ್ದೆವು. 2021ರ ಕೊನೆಯ ಕೆಲವು ತಿಂಗಳುಗಳಲ್ಲಿ ನಮ್ಮ ಪ್ರತಿಭಟನೆ ಆರಂಭಿಸಿದ್ದೆವು. ಈ ಬಳಿಕ, ಕಾಲೇಜು ಪುನರಾರಂಭವಾದಾಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಲೇಜು ಆಡಳಿತ ಭರವಸೆ ನೀಡಿತ್ತು” ಎಂದು ಮತ್ತೊಬ್ಬ ವಿದ್ಯಾರ್ಥಿನಿ ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

ಜನವರಿ 3 ರಂದು ಆಡಳಿತ ಮಂಡಳಿ ಸಭೆ ಸೇರಿತ್ತು. ನಮ್ಮ ಎಲ್ಲಾ ಬೇಡಿಕೆಗಳನ್ನು ಅವರು ಒಪ್ಪಿಕೊಂಡಿದ್ದು, ಮುಂದಿನ ದಿನ ಹಾಸ್ಟೆಲ್ ವಾರ್ಡನ್‌ಗಳೊಂದಿಗಿನ ಸಭೆಯ ನಂತರ ಅಧಿಕೃತ ನಿಲುವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಆದರೆ, ಜನವರಿ 4 ರಂದು ನಡೆದ ಸಭೆಯ ನಂತರ, ಕರ್ಫ್ಯೂ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಘೋಷಿಸಿದ್ದರು. ಇದು ನಮ್ಮ ಸಹನೆಯನ್ನು ಪರೀಕ್ಷಿಸಿತ್ತು ಎಂದು ಟೆಸ್ಸಾ ಹೇಳಿದ್ದಾರೆ.

ಇದನ್ನೂ ಓದಿ: ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

“ಭರವಸೆ ನೀಡಿ ಮತ್ತೆ ಅದನ್ನು ಈಡೇರಿಸದಿರುವುದನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳು ಸಿದ್ಧರಿರಲಿಲ್ಲ. ಆರಂಭದಲ್ಲಿ ಅನೇಕ ಹಾಸ್ಟೆಲ್‌ಗಳಿಗೆ ನಮ್ಮ ಸಮಸ್ಯೆಗಳ ವಿಚಾರದಲ್ಲಿ ಸಂಘಟನೆಗಳು ಭಾಗಿಯಾಗುವುದು ಇಷ್ಟವಿರಲಿಲ್ಲ. ಆದರೆ, ಕಾಲೇಜು ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರಿಂದಾಗಿ, ಜನವರಿ 6 ರಂದು ಎಸ್‌ಎಫ್‌ಐ ಸಂಘಟನೆಯು ಪ್ರಾಂಶುಪಾಲರ ಕಚೇರಿಯ ಬಳಿ ಪ್ರತಿಭಟನೆ ಮತ್ತು ಕೆಎಸ್‌ಯು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಾವು ಹಾಸ್ಟೆಲ್ ನಿಯಮ ಪುಸ್ತಕವನ್ನು ಸುಡುವ ಮೂಲಕ ಹೋರಾಟವನ್ನು ಪ್ರಾರಂಭಿಸಿವು. 30 ಗಂಟೆಗಳ ನಿರಂತರ ಪ್ರತಿಭಟನೆಯ ನಂತರ ಆಡಳಿತವು ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿತು” ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

“ಈಗ ಸಂಜೆ 6 ಗಂಟೆಗೆ ಕರ್ಫ್ಯೂ ಹಾಗೆ ಉಳಿದಿದ್ದರೂ ವಿದ್ಯಾರ್ಥಿಗಳು ಲೇಟಾಗಿ ಬರುವ ಚೀಟಿಗೆ ಸಹಿ ಮಾಡಿ ರಾತ್ರಿ 9 ರವರೆಗೆ ಹೊರಗಿರಬಹುದು ಎಂದು ಹೊಸ ನಿಯಮಗಳು ಹೇಳುತ್ತವೆ. ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವುದು, ಶಾಪಿಂಗ್ ಸೇರಿದಂತೆ ಯಾವುದೇ ಕಾರಣಗಳನ್ನು ಬೇಕಾದರೂ ನೀಡಬಹುದು. ಎರಡನೇ ಮತ್ತು ನಾಲ್ಕನೇ ಭಾನುವಾರದಂದು ಸಂಜೆ 5 ಗಂಟೆಯವರೆಗೆ ಹೊರ ಹೋಗಬಹುದು. ಜೊತೆಗೆ ಸಾರ್ವಜನಿಕ ರಜಾದಿನಗಳಲ್ಲಿ ಹೊರಗೆ ಹೋಗಬಹುದು” ಎಂದು ವಿದ್ಯಾರ್ಥಿನಿ ಎಮಿಲಾ ಹೇಳುತ್ತಾರೆ.

ಮೊದಲ ಮತ್ತು ಮೂರನೇ ಭಾನುವಾರವೂ ಹೊರ ಹೋಗಲು ಅನುಮತಿ ನೀಡುವಂತೆ ಕೇಳಲಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಲಾಗಿದೆ. ಒಂದು ತಿಂಗಳೊಳಗೆ ಅವರು ತಮ್ಮ ನಿರ್ಧಾರವನ್ನು ನಮಗೆ ತಿಳಿಸುತ್ತಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...