Homeಮುಖಪುಟದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ಬಿಹಾರ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳು ಅತ್ಯಂತ ಹೆಚ್ಚು ಬಡತನ ಹೊಂದಿರುವ ರಾಜ್ಯಗಳಾಗಿದೆ ಎಂದು ಆಯೋಗ ಹೇಳಿದೆ

- Advertisement -
- Advertisement -

ನೀತಿ ಆಯೋಗದ ಮೊದಲ ‘ಬಹುಆಯಾಮದ ಬಡತನ ಸೂಚ್ಯಂಕ’ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91% ಜನಸಂಖ್ಯೆಯು ಬಡವರಾಗಿದ್ದು ಮೊದಲ ಸ್ಥಾನದಲ್ಲಿದೆ. ಜಾರ್ಖಂಡ್‌ನಲ್ಲಿ 42.16%, ಉತ್ತರ ಪ್ರದೇಶ 37.79% ಮಧ್ಯಪ್ರದೇಶ 36.65% ಸೂಚ್ಯಂಕದ ನಾಲ್ಕನೇ ಸ್ಥಾನದಲ್ಲಿದ್ದರೆ, ಮೇಘಾಲಯ 32.67% ದೊಂದಿಗೆ ಐದನೇ ಸ್ಥಾನದಲ್ಲಿದೆ.

ಕೇರಳದಲ್ಲಿ 0.71%, ಗೋವಾ 3.76%, ಸಿಕ್ಕಿಂ 3.82%, ತಮಿಳುನಾಡು 4.89% ಮತ್ತು ಪಂಜಾಬ್ 5.59% ಭಾರತದಾದ್ಯಂತ ಕಡಿಮೆ ಬಡತನವನ್ನು ದಾಖಲಿಸಿದ್ದು, ಸೂಚ್ಯಂಕದ ಕೆಳಭಾಗದಲ್ಲಿವೆ. ಕರ್ನಾಟಕದಲ್ಲಿ 13.16% ಜನರು ಬಹು ಆಯಾಮದ ಬಡತನವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಾದ್ರಾ ಮತ್ತು ನಗರ ಹವೇಲಿ 27.36%, ಜಮ್ಮು ಕಾಶ್ಮೀರ ಮತ್ತು ಲಡಾಖ್ 12.58%, ದಮನ್-ದಿಯು 6.82% ಮತ್ತು ಚಂಡೀಗಢ 5.97% ಬಡ ಕೇಂದ್ರಾಡಳಿತವಾಗಿ ಹೊರಹೊಮ್ಮಿವೆ. ಪುದುಚೇರಿಯು ಅದರ ಜನಸಂಖ್ಯೆಯು 1.72% ರಷ್ಟು ಬಡವರನ್ನು ಹೊಂದಿದೆ. ಲಕ್ಷದ್ವೀಪ 1.82%, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು 4.30% ಮತ್ತು ದೆಹಲಿ 4.79% ದಷ್ಟು ಬಡತನವನ್ನು ಹೊಂದಿದೆ.

ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢ ನಂತರದ ಸ್ಥಾನದಲ್ಲಿ ಬಿಹಾರವು ಅತಿ ಹೆಚ್ಚು ಅಪೌಷ್ಟಿಕತೆಯನ್ನು ಹೊಂದಿದೆ. ಕರ್ನಾಟಕ 13 ನೇ ಸ್ಥಾನದಲ್ಲಿದ್ದು, 33.56% ಜನರು ಅಪೌಷ್ಟಿಕತೆಯನ್ನು ಹೊಂದಿದೆ.

ಇದನ್ನೂ ಓದಿ: ಬಡತನದಿಂದ ನೊಂದು ದಲಿತ ಸಹೋದರರು ಸಾವಿಗೆ ಶರಣು

ಆರೋಗ್ಯ ವಂಚಿತ ತಾಯಂದಿರು, ಶಾಲಾ ಶಿಕ್ಷಣ ವಂಚಿತರ ಶೇಕಡವಾರು ಪ್ರಮಾಣದಲ್ಲಿಯೂ ಬಿಜಾರ ಕಳೆಮಟ್ಟದಲ್ಲಿದೆ. ಶಾಲಾ ಹಾಜರಾತಿ, ಅಡುಗೆ ಇಂಧನ ಮತ್ತು ವಿದ್ಯುತ್ ವಂಚಿತ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಕೂಡಾ ಬಿಹಾರ ಕೆಳಮಟ್ಟದಲ್ಲಿದೆ.

ಉತ್ತರ ಪ್ರದೇಶವು ಮಕ್ಕಳ ಮತ್ತು ಹದಿಹರೆಯದವರ ಮರಣದ ವಿಭಾಗದಲ್ಲಿ ಅತ್ಯಂತ ಕೆಳ ಮಟ್ಟದಲ್ಲಿದೆ. ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಇದರ ನಂತರದ ಸ್ಥಾನದಲ್ಲಿದೆ. ನೈರ್ಮಲ್ಯದಿಂದ ವಂಚಿತವಾಗಿರುವ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಜಾರ್ಖಂಡ್ ಅತ್ಯಂತ ಕಳಪೆ ಸಾಧನೆ ಮಾಡಿದ್ದು, ನಂತರದ ಸ್ಥಾನದಲ್ಲಿ ಬಿಹಾರ ಮತ್ತು ಒಡಿಶಾ ಇದೆ.

ವರದಿಯ ಪ್ರಕಾರ, ಭಾರತದ ರಾಷ್ಟ್ರೀಯ MPI ಅಳತೆಯು, ‘ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮ’ (OPHI) ಮತ್ತು ‘ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ’ (UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಮತ್ತು ದೃಢವಾದ ವಿಧಾನವನ್ನು ಬಳಸುತ್ತದೆ.

ಬಹುಮುಖ್ಯವಾಗಿ, ‘ಬಹುಆಯಾಮದ ಬಡತನದ ಅಳತೆ’ಯು ಕುಟುಂಬಗಳು ಎದುರಿಸುತ್ತಿರುವ ಬಹು ಮತ್ತು ಏಕಕಾಲಿಕ ಅಭಾವಗಳನ್ನು ಕಂಡುಹಿಡಿಯುತ್ತದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...