Homeಮುಖಪುಟದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ಬಿಹಾರ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳು ಅತ್ಯಂತ ಹೆಚ್ಚು ಬಡತನ ಹೊಂದಿರುವ ರಾಜ್ಯಗಳಾಗಿದೆ ಎಂದು ಆಯೋಗ ಹೇಳಿದೆ

- Advertisement -
- Advertisement -

ನೀತಿ ಆಯೋಗದ ಮೊದಲ ‘ಬಹುಆಯಾಮದ ಬಡತನ ಸೂಚ್ಯಂಕ’ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91% ಜನಸಂಖ್ಯೆಯು ಬಡವರಾಗಿದ್ದು ಮೊದಲ ಸ್ಥಾನದಲ್ಲಿದೆ. ಜಾರ್ಖಂಡ್‌ನಲ್ಲಿ 42.16%, ಉತ್ತರ ಪ್ರದೇಶ 37.79% ಮಧ್ಯಪ್ರದೇಶ 36.65% ಸೂಚ್ಯಂಕದ ನಾಲ್ಕನೇ ಸ್ಥಾನದಲ್ಲಿದ್ದರೆ, ಮೇಘಾಲಯ 32.67% ದೊಂದಿಗೆ ಐದನೇ ಸ್ಥಾನದಲ್ಲಿದೆ.

ಕೇರಳದಲ್ಲಿ 0.71%, ಗೋವಾ 3.76%, ಸಿಕ್ಕಿಂ 3.82%, ತಮಿಳುನಾಡು 4.89% ಮತ್ತು ಪಂಜಾಬ್ 5.59% ಭಾರತದಾದ್ಯಂತ ಕಡಿಮೆ ಬಡತನವನ್ನು ದಾಖಲಿಸಿದ್ದು, ಸೂಚ್ಯಂಕದ ಕೆಳಭಾಗದಲ್ಲಿವೆ. ಕರ್ನಾಟಕದಲ್ಲಿ 13.16% ಜನರು ಬಹು ಆಯಾಮದ ಬಡತನವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಾದ್ರಾ ಮತ್ತು ನಗರ ಹವೇಲಿ 27.36%, ಜಮ್ಮು ಕಾಶ್ಮೀರ ಮತ್ತು ಲಡಾಖ್ 12.58%, ದಮನ್-ದಿಯು 6.82% ಮತ್ತು ಚಂಡೀಗಢ 5.97% ಬಡ ಕೇಂದ್ರಾಡಳಿತವಾಗಿ ಹೊರಹೊಮ್ಮಿವೆ. ಪುದುಚೇರಿಯು ಅದರ ಜನಸಂಖ್ಯೆಯು 1.72% ರಷ್ಟು ಬಡವರನ್ನು ಹೊಂದಿದೆ. ಲಕ್ಷದ್ವೀಪ 1.82%, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು 4.30% ಮತ್ತು ದೆಹಲಿ 4.79% ದಷ್ಟು ಬಡತನವನ್ನು ಹೊಂದಿದೆ.

ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢ ನಂತರದ ಸ್ಥಾನದಲ್ಲಿ ಬಿಹಾರವು ಅತಿ ಹೆಚ್ಚು ಅಪೌಷ್ಟಿಕತೆಯನ್ನು ಹೊಂದಿದೆ. ಕರ್ನಾಟಕ 13 ನೇ ಸ್ಥಾನದಲ್ಲಿದ್ದು, 33.56% ಜನರು ಅಪೌಷ್ಟಿಕತೆಯನ್ನು ಹೊಂದಿದೆ.

ಇದನ್ನೂ ಓದಿ: ಬಡತನದಿಂದ ನೊಂದು ದಲಿತ ಸಹೋದರರು ಸಾವಿಗೆ ಶರಣು

ಆರೋಗ್ಯ ವಂಚಿತ ತಾಯಂದಿರು, ಶಾಲಾ ಶಿಕ್ಷಣ ವಂಚಿತರ ಶೇಕಡವಾರು ಪ್ರಮಾಣದಲ್ಲಿಯೂ ಬಿಜಾರ ಕಳೆಮಟ್ಟದಲ್ಲಿದೆ. ಶಾಲಾ ಹಾಜರಾತಿ, ಅಡುಗೆ ಇಂಧನ ಮತ್ತು ವಿದ್ಯುತ್ ವಂಚಿತ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಕೂಡಾ ಬಿಹಾರ ಕೆಳಮಟ್ಟದಲ್ಲಿದೆ.

ಉತ್ತರ ಪ್ರದೇಶವು ಮಕ್ಕಳ ಮತ್ತು ಹದಿಹರೆಯದವರ ಮರಣದ ವಿಭಾಗದಲ್ಲಿ ಅತ್ಯಂತ ಕೆಳ ಮಟ್ಟದಲ್ಲಿದೆ. ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಇದರ ನಂತರದ ಸ್ಥಾನದಲ್ಲಿದೆ. ನೈರ್ಮಲ್ಯದಿಂದ ವಂಚಿತವಾಗಿರುವ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಜಾರ್ಖಂಡ್ ಅತ್ಯಂತ ಕಳಪೆ ಸಾಧನೆ ಮಾಡಿದ್ದು, ನಂತರದ ಸ್ಥಾನದಲ್ಲಿ ಬಿಹಾರ ಮತ್ತು ಒಡಿಶಾ ಇದೆ.

ವರದಿಯ ಪ್ರಕಾರ, ಭಾರತದ ರಾಷ್ಟ್ರೀಯ MPI ಅಳತೆಯು, ‘ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮ’ (OPHI) ಮತ್ತು ‘ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ’ (UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಮತ್ತು ದೃಢವಾದ ವಿಧಾನವನ್ನು ಬಳಸುತ್ತದೆ.

ಬಹುಮುಖ್ಯವಾಗಿ, ‘ಬಹುಆಯಾಮದ ಬಡತನದ ಅಳತೆ’ಯು ಕುಟುಂಬಗಳು ಎದುರಿಸುತ್ತಿರುವ ಬಹು ಮತ್ತು ಏಕಕಾಲಿಕ ಅಭಾವಗಳನ್ನು ಕಂಡುಹಿಡಿಯುತ್ತದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...