Homeಮುಖಪುಟದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ಬಿಹಾರ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳು ಅತ್ಯಂತ ಹೆಚ್ಚು ಬಡತನ ಹೊಂದಿರುವ ರಾಜ್ಯಗಳಾಗಿದೆ ಎಂದು ಆಯೋಗ ಹೇಳಿದೆ

- Advertisement -
- Advertisement -

ನೀತಿ ಆಯೋಗದ ಮೊದಲ ‘ಬಹುಆಯಾಮದ ಬಡತನ ಸೂಚ್ಯಂಕ’ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91% ಜನಸಂಖ್ಯೆಯು ಬಡವರಾಗಿದ್ದು ಮೊದಲ ಸ್ಥಾನದಲ್ಲಿದೆ. ಜಾರ್ಖಂಡ್‌ನಲ್ಲಿ 42.16%, ಉತ್ತರ ಪ್ರದೇಶ 37.79% ಮಧ್ಯಪ್ರದೇಶ 36.65% ಸೂಚ್ಯಂಕದ ನಾಲ್ಕನೇ ಸ್ಥಾನದಲ್ಲಿದ್ದರೆ, ಮೇಘಾಲಯ 32.67% ದೊಂದಿಗೆ ಐದನೇ ಸ್ಥಾನದಲ್ಲಿದೆ.

ಕೇರಳದಲ್ಲಿ 0.71%, ಗೋವಾ 3.76%, ಸಿಕ್ಕಿಂ 3.82%, ತಮಿಳುನಾಡು 4.89% ಮತ್ತು ಪಂಜಾಬ್ 5.59% ಭಾರತದಾದ್ಯಂತ ಕಡಿಮೆ ಬಡತನವನ್ನು ದಾಖಲಿಸಿದ್ದು, ಸೂಚ್ಯಂಕದ ಕೆಳಭಾಗದಲ್ಲಿವೆ. ಕರ್ನಾಟಕದಲ್ಲಿ 13.16% ಜನರು ಬಹು ಆಯಾಮದ ಬಡತನವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಾದ್ರಾ ಮತ್ತು ನಗರ ಹವೇಲಿ 27.36%, ಜಮ್ಮು ಕಾಶ್ಮೀರ ಮತ್ತು ಲಡಾಖ್ 12.58%, ದಮನ್-ದಿಯು 6.82% ಮತ್ತು ಚಂಡೀಗಢ 5.97% ಬಡ ಕೇಂದ್ರಾಡಳಿತವಾಗಿ ಹೊರಹೊಮ್ಮಿವೆ. ಪುದುಚೇರಿಯು ಅದರ ಜನಸಂಖ್ಯೆಯು 1.72% ರಷ್ಟು ಬಡವರನ್ನು ಹೊಂದಿದೆ. ಲಕ್ಷದ್ವೀಪ 1.82%, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು 4.30% ಮತ್ತು ದೆಹಲಿ 4.79% ದಷ್ಟು ಬಡತನವನ್ನು ಹೊಂದಿದೆ.

ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢ ನಂತರದ ಸ್ಥಾನದಲ್ಲಿ ಬಿಹಾರವು ಅತಿ ಹೆಚ್ಚು ಅಪೌಷ್ಟಿಕತೆಯನ್ನು ಹೊಂದಿದೆ. ಕರ್ನಾಟಕ 13 ನೇ ಸ್ಥಾನದಲ್ಲಿದ್ದು, 33.56% ಜನರು ಅಪೌಷ್ಟಿಕತೆಯನ್ನು ಹೊಂದಿದೆ.

ಇದನ್ನೂ ಓದಿ: ಬಡತನದಿಂದ ನೊಂದು ದಲಿತ ಸಹೋದರರು ಸಾವಿಗೆ ಶರಣು

ಆರೋಗ್ಯ ವಂಚಿತ ತಾಯಂದಿರು, ಶಾಲಾ ಶಿಕ್ಷಣ ವಂಚಿತರ ಶೇಕಡವಾರು ಪ್ರಮಾಣದಲ್ಲಿಯೂ ಬಿಜಾರ ಕಳೆಮಟ್ಟದಲ್ಲಿದೆ. ಶಾಲಾ ಹಾಜರಾತಿ, ಅಡುಗೆ ಇಂಧನ ಮತ್ತು ವಿದ್ಯುತ್ ವಂಚಿತ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಕೂಡಾ ಬಿಹಾರ ಕೆಳಮಟ್ಟದಲ್ಲಿದೆ.

ಉತ್ತರ ಪ್ರದೇಶವು ಮಕ್ಕಳ ಮತ್ತು ಹದಿಹರೆಯದವರ ಮರಣದ ವಿಭಾಗದಲ್ಲಿ ಅತ್ಯಂತ ಕೆಳ ಮಟ್ಟದಲ್ಲಿದೆ. ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಇದರ ನಂತರದ ಸ್ಥಾನದಲ್ಲಿದೆ. ನೈರ್ಮಲ್ಯದಿಂದ ವಂಚಿತವಾಗಿರುವ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಜಾರ್ಖಂಡ್ ಅತ್ಯಂತ ಕಳಪೆ ಸಾಧನೆ ಮಾಡಿದ್ದು, ನಂತರದ ಸ್ಥಾನದಲ್ಲಿ ಬಿಹಾರ ಮತ್ತು ಒಡಿಶಾ ಇದೆ.

ವರದಿಯ ಪ್ರಕಾರ, ಭಾರತದ ರಾಷ್ಟ್ರೀಯ MPI ಅಳತೆಯು, ‘ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮ’ (OPHI) ಮತ್ತು ‘ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ’ (UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಮತ್ತು ದೃಢವಾದ ವಿಧಾನವನ್ನು ಬಳಸುತ್ತದೆ.

ಬಹುಮುಖ್ಯವಾಗಿ, ‘ಬಹುಆಯಾಮದ ಬಡತನದ ಅಳತೆ’ಯು ಕುಟುಂಬಗಳು ಎದುರಿಸುತ್ತಿರುವ ಬಹು ಮತ್ತು ಏಕಕಾಲಿಕ ಅಭಾವಗಳನ್ನು ಕಂಡುಹಿಡಿಯುತ್ತದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...