Homeಮುಖಪುಟದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ದೇಶದ ಕಡಿಮೆ ಬಡತನದ ರಾಜ್ಯಗಳಾಗಿ ಹೊರಹೊಮ್ಮಿದ ಕೇರಳ, ತಮಿಳುನಾಡು: ನೀತಿ ಆಯೋಗ

ಬಿಹಾರ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳು ಅತ್ಯಂತ ಹೆಚ್ಚು ಬಡತನ ಹೊಂದಿರುವ ರಾಜ್ಯಗಳಾಗಿದೆ ಎಂದು ಆಯೋಗ ಹೇಳಿದೆ

- Advertisement -
- Advertisement -

ನೀತಿ ಆಯೋಗದ ಮೊದಲ ‘ಬಹುಆಯಾಮದ ಬಡತನ ಸೂಚ್ಯಂಕ’ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91% ಜನಸಂಖ್ಯೆಯು ಬಡವರಾಗಿದ್ದು ಮೊದಲ ಸ್ಥಾನದಲ್ಲಿದೆ. ಜಾರ್ಖಂಡ್‌ನಲ್ಲಿ 42.16%, ಉತ್ತರ ಪ್ರದೇಶ 37.79% ಮಧ್ಯಪ್ರದೇಶ 36.65% ಸೂಚ್ಯಂಕದ ನಾಲ್ಕನೇ ಸ್ಥಾನದಲ್ಲಿದ್ದರೆ, ಮೇಘಾಲಯ 32.67% ದೊಂದಿಗೆ ಐದನೇ ಸ್ಥಾನದಲ್ಲಿದೆ.

ಕೇರಳದಲ್ಲಿ 0.71%, ಗೋವಾ 3.76%, ಸಿಕ್ಕಿಂ 3.82%, ತಮಿಳುನಾಡು 4.89% ಮತ್ತು ಪಂಜಾಬ್ 5.59% ಭಾರತದಾದ್ಯಂತ ಕಡಿಮೆ ಬಡತನವನ್ನು ದಾಖಲಿಸಿದ್ದು, ಸೂಚ್ಯಂಕದ ಕೆಳಭಾಗದಲ್ಲಿವೆ. ಕರ್ನಾಟಕದಲ್ಲಿ 13.16% ಜನರು ಬಹು ಆಯಾಮದ ಬಡತನವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಾದ್ರಾ ಮತ್ತು ನಗರ ಹವೇಲಿ 27.36%, ಜಮ್ಮು ಕಾಶ್ಮೀರ ಮತ್ತು ಲಡಾಖ್ 12.58%, ದಮನ್-ದಿಯು 6.82% ಮತ್ತು ಚಂಡೀಗಢ 5.97% ಬಡ ಕೇಂದ್ರಾಡಳಿತವಾಗಿ ಹೊರಹೊಮ್ಮಿವೆ. ಪುದುಚೇರಿಯು ಅದರ ಜನಸಂಖ್ಯೆಯು 1.72% ರಷ್ಟು ಬಡವರನ್ನು ಹೊಂದಿದೆ. ಲಕ್ಷದ್ವೀಪ 1.82%, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು 4.30% ಮತ್ತು ದೆಹಲಿ 4.79% ದಷ್ಟು ಬಡತನವನ್ನು ಹೊಂದಿದೆ.

ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢ ನಂತರದ ಸ್ಥಾನದಲ್ಲಿ ಬಿಹಾರವು ಅತಿ ಹೆಚ್ಚು ಅಪೌಷ್ಟಿಕತೆಯನ್ನು ಹೊಂದಿದೆ. ಕರ್ನಾಟಕ 13 ನೇ ಸ್ಥಾನದಲ್ಲಿದ್ದು, 33.56% ಜನರು ಅಪೌಷ್ಟಿಕತೆಯನ್ನು ಹೊಂದಿದೆ.

ಇದನ್ನೂ ಓದಿ: ಬಡತನದಿಂದ ನೊಂದು ದಲಿತ ಸಹೋದರರು ಸಾವಿಗೆ ಶರಣು

ಆರೋಗ್ಯ ವಂಚಿತ ತಾಯಂದಿರು, ಶಾಲಾ ಶಿಕ್ಷಣ ವಂಚಿತರ ಶೇಕಡವಾರು ಪ್ರಮಾಣದಲ್ಲಿಯೂ ಬಿಜಾರ ಕಳೆಮಟ್ಟದಲ್ಲಿದೆ. ಶಾಲಾ ಹಾಜರಾತಿ, ಅಡುಗೆ ಇಂಧನ ಮತ್ತು ವಿದ್ಯುತ್ ವಂಚಿತ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಕೂಡಾ ಬಿಹಾರ ಕೆಳಮಟ್ಟದಲ್ಲಿದೆ.

ಉತ್ತರ ಪ್ರದೇಶವು ಮಕ್ಕಳ ಮತ್ತು ಹದಿಹರೆಯದವರ ಮರಣದ ವಿಭಾಗದಲ್ಲಿ ಅತ್ಯಂತ ಕೆಳ ಮಟ್ಟದಲ್ಲಿದೆ. ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಇದರ ನಂತರದ ಸ್ಥಾನದಲ್ಲಿದೆ. ನೈರ್ಮಲ್ಯದಿಂದ ವಂಚಿತವಾಗಿರುವ ಜನಸಂಖ್ಯೆಯ ಶೇಕಡಾವಾರು ಪ್ರಮಾಣದಲ್ಲಿ ಜಾರ್ಖಂಡ್ ಅತ್ಯಂತ ಕಳಪೆ ಸಾಧನೆ ಮಾಡಿದ್ದು, ನಂತರದ ಸ್ಥಾನದಲ್ಲಿ ಬಿಹಾರ ಮತ್ತು ಒಡಿಶಾ ಇದೆ.

ವರದಿಯ ಪ್ರಕಾರ, ಭಾರತದ ರಾಷ್ಟ್ರೀಯ MPI ಅಳತೆಯು, ‘ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮ’ (OPHI) ಮತ್ತು ‘ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ’ (UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಮತ್ತು ದೃಢವಾದ ವಿಧಾನವನ್ನು ಬಳಸುತ್ತದೆ.

ಬಹುಮುಖ್ಯವಾಗಿ, ‘ಬಹುಆಯಾಮದ ಬಡತನದ ಅಳತೆ’ಯು ಕುಟುಂಬಗಳು ಎದುರಿಸುತ್ತಿರುವ ಬಹು ಮತ್ತು ಏಕಕಾಲಿಕ ಅಭಾವಗಳನ್ನು ಕಂಡುಹಿಡಿಯುತ್ತದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...