Homeಮುಖಪುಟಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

ಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

- Advertisement -
- Advertisement -

ಕಾಲೇಜು ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಮೂಲಭೂತವಾದಿಗಳು ಬಸ್‌ನಿಲ್ದಾಣದ ಬೆಂಚ್‌ ಅನ್ನು ಮುರಿದು ಅದರಲ್ಲಿ ಒಬ್ಬರಷ್ಟೆ ಕುಳಿತುಕೊಳ್ಳುವಂತೆ ತಯಾರುಗೊಳಿಸಿದ್ದ ಬಸ್‌ ನಿಲ್ದಾಣವನ್ನು ತಿರುವನಂದಪುರಂ ಕಾರ್ಪೋರೇಷನ್‌ ಅಧಿಕಾರಿಗಳು ಹೊಸದಾಗಿ ನಿರ್ಮಾಣ ಮಾಡಲು ಬೇಕಾಗಿ ತೆಗೆದು ಹಾಕಿದ್ದಾರೆ. ಬೆಂಚನ್ನು ಮುರಿದು ಒಬ್ಬರಿಗೆ ಕೂರುವಂತೆ ತಯಾರಿಗೊಳಿಸಿದ್ದ ಮೂಲಭೂತವಾದಿಗಳ ನಡೆಯನ್ನು ವಿರೋಧಿಸಿದ್ದ ಕಾಲೇಜು ವಿದ್ಯಾರ್ಥಿಗಳು, ‘ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕೂತು’ ಪ್ರತಿಭಟಿಸಿದ್ದು ದೇಶದ ಗಮನಸೆಳೆದಿತ್ತು.

ತಿರುವನಂತಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ (ಸಿಇಟಿ) ಬಳಿಯ ಶ್ರೀಕಾರ್ಯಂನ ಅದೇ ಸ್ಥಳದಲ್ಲಿ ಲಿಂಗ ತಟಸ್ಥ ಬಸ್ ನಿಲ್ದಾಣವನ್ನು ನಿರ್ಮಿಸುವುದಾಗಿ ನಗರದ ಮೇಯರ್ ಆರ್ಯ ಎಸ್. ರಾಜೇಂದ್ರನ್ ಭರವಸೆ ನೀಡಿದ ಎರಡು ತಿಂಗಳ ನಂತರ ಕಾರ್ಪೋರೇಷನ್‌ ಅಧಿಕಾರಿಗಳು ಅದನ್ನು ತೆಗೆದುಹಾಕಿದ್ದಾರೆ. ಇದೀಗ ಅಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಗಳು ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕುಳಿತು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ವೈರಲ್ ಆದ ನಂತರ ಜುಲೈನಲ್ಲಿ ಮೇಯರ್‌‌ ಆರ್ಯ ರಾಜೇಂದ್ರನ್ ಅವರು ಪ್ರದೇಶಕ್ಕೆ ಭೇಟಿ ನೀಡಿದ್ದರು. ಮೂಲಭೂತವಾದಿಗಳ ಕ್ರಮವನ್ನು ವಿರೋಧಿಸಿದ್ದ ಅವರು “ಬೆಂಚ್ ಅನ್ನು ಮೂರು ಭಾಗಗಳಾಗಿ ಕತ್ತರಿಸುವ ವಿಧಾನವು ಅನುಚಿತ ಮಾತ್ರವಲ್ಲದೆ ಕೇರಳದಂತಹ ಪ್ರಗತಿಪರ ಸಮಾಜಕ್ಕೆ ಯೋಗ್ಯವಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ರಾಜ್ಯದಲ್ಲಿ ಹುಡುಗಿಯರು ಮತ್ತು ಹುಡುಗರು ಒಟ್ಟಿಗೆ ಕುಳಿತುಕೊಳ್ಳಲು ಯಾವುದೇ ನಿಷೇಧವಿಲ್ಲ. ಅನೈತಿಕ ಪೊಲೀಸ್‌ಗಿರಿಯನ್ನು ಇನ್ನೂ ನಂಬುವವರು ಪ್ರಾಚೀನ ಕಾಲದಲ್ಲಿ ವಾಸಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಡಳಿತಾರೂಢ ಸಿಪಿಐ(ಎಂ)ನ ಯುವ ಘಟಕ ಡಿವೈಎಫ್‌ಐ ಕೂಡ ಬಸ್ ನಿಲ್ದಾಣದಲ್ಲಿ ಬೆಂಚ್ ಒಡೆಯುವುದನ್ನು ಒಪ್ಪಲಾಗದು ಎಂದು ಹೇಳಿತ್ತು.

ಅಂದು ನಡೆದಿದ್ದೇನು?

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು.

ಅದಕ್ಕಾಗಿ ಸ್ಥಳೀಯರು ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಮರುದಿನ ಇದನ್ನು ಗಮನಿಸಿದ್ದ ವಿದ್ಯಾರ್ಥಿಗಳು ಪ್ರತಿಭಟಿಸಲು ನಿರ್ಧರಿಸಿ, ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷ ಕೆ.ಪೆ ಫೆಬಿ ಅಂದು ಹೇಳಿದ್ದರು.

ಈ ಕುರಿತು ಮಾತನಾಡಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ,“ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ಈ ಹಿಂದೆ ಕೂಡಾ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ಜಾರಿಗೆ ತಂದಾಗ ಭಾರಿ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...